Homeಅಂಕಣಗಳುಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ - ಎಚ್. ಎಸ್ ದೊರೆಸ್ವಾಮಿ

ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ.

- Advertisement -
- Advertisement -

ಆರ್ಥಿಕ ಶೋಷಣೆಯನ್ನ ಸಂಪೂರ್ಣವಾಗಿ ನಿರ್ಮೂಲನ ಮಾಡುವುದು ಸರ್ಕಾರಗಳ ಮತ್ತು ಸಂಸತ್ತಿನ ಗುರಿಯಾಗಬೇಕು. ಸ್ವಾತಂತ್ರ್ಯವೆಂದರೆ ದುರ್ಬಲವರ್ಗಗಳನ್ನು ನಿರಂತರವಾಗಿ ವಂಚಿಸುತ್ತಾ ಹೋಗುವುದಲ್ಲ. ಶೋಷಣೆಯನ್ನು ತಡೆಗಟ್ಟುವುದಕ್ಕೆ ಇರುವ ಏಕೈಕ ಮಾರ್ಗವೆಂದರೆ, ಸಂಪನ್ಮೂಲಗಳ ಸ್ವಾಮ್ಯ ಒಡೆತನ ಸರ್ಕಾರದ ಕೈಯಲ್ಲಿ ಉಳಿಸಿಕೊಳ್ಳುವುದು. ಪ್ರಮುಖ ಉದ್ಯೋಗಗಳು ರಾಜ್ಯಾಡಳಿತದ ವ್ಯಾಪ್ತಿಯಲ್ಲಿರಬೇಕು. ಕೃಷಿಭೂಮಿ ಸರ್ಕಾರದ ಸ್ವಾಮ್ಯದಲ್ಲಿರಬೇಕು. ಹಾಗೆಂದರೆ ಸರ್ಕಾರ ಜಮೀನನ್ನು ಯಾರಿಗೆ ಅಂದರೆ ಅವರಿಗೆ, ಪಟ್ಟಭದ್ರ ಹಿತಾಸಕ್ತಿಗಳಿಗೆ, ಸಿಕ್ಕಿದಂತೆ ಹಂಚುವ ಅಧಿಕಾರ ಅದಕ್ಕಿರಬೇಕೆಂಬ ಅರ್ಥವಲ್ಲ. ಪ್ರಮುಖ ಉದ್ಯಮಗಳು ಸರ್ಕಾರದ ವ್ಯಾಪ್ತಿಯಲ್ಲಿ ನಿರ್ವಹಣೆಯಾಗಬೇಕು. ವಿಮಾ ಸಂಸ್ಥೆಗಳ, ಲೇವಾದೇವಿ ಸಂಸ್ಥೆಗಳ ರಾಷ್ಟ್ರೀಕರಣ ಆಗಬೇಕು. ಜಮೀನ್ದಾರ, ಜೀತಗಾರ, ಕೃಷಿಕಾರ್ಮೀಕ ಮುಂತಾದ ಬರ್ಬರ ವ್ಯವಸ್ಥೆಗಳು ಕೊನೆಗೊಳ್ಳಬೇಕು. ದುರ್ಬಲವರ್ಗದವರಿಗೆ ಒದಗಿಸುವ ವಿಶೇಷ ರಕ್ಷಣಾ ನಿಬಂಧನೆಗಳನ್ನು ಸಂವಿಧಾನದ ಮೂಲಭೂತಹಕ್ಕುಗಳ ಪಟ್ಟಿಗೆ ಸೇರಿಸಬೇಕು. ಇದನ್ನು ಈಗ ಸಂವಿಧಾನದ ನಿರ್ದೇಶಕ ತತ್ವಗಳನ್ನಾಗಿ ಸೇರಿಸಲಾಗಿದೆ.

ಅಂಬೇಡ್ಕರ್ ಅವರ ಆರ್ಥಿಕ ಚಿಂತನೆ ವ್ಯಾಪಕ ತಳಹದಿಯ ಮೇಲೆ ರಚಿತವಾಗಿದೆ. ಸಮಗ್ರ ದೇಶದ ಹಿತದೃಷ್ಟಿಯಿಂದ ರಚಿತವಾಗಿದೆ.

ವ್ಯಕ್ತಿ ಸ್ವಾತಂತ್ರ್ಯವೆಂಬುದು ಬಂಡವಾಳಶಾಹಿಗಳಿಗೆ ಮಾತ್ರ ಅನ್ವಯವಾಗುವ ಮಹಾಮಂತ್ರ ಎಂದು ಪಟ್ಟಭದ್ರರು ಭಾವಿಸುತ್ತಾರೆ. ಅದರಿಂದಾಗಿ ಇದು ಶ್ರಮಜೀವಿಗಳ ದಾಸ್ಯಕ್ಕೆ ದಾರಿಮಾಡುತ್ತದೆ. ಹಿಂದೆ ದಲಿತರಿಗೆ ಯಾವುದೇ ಸ್ವಾತಂತ್ರ್ಯವಿರಲಿಲ್ಲ. ತಮ್ಮ ಶ್ರಮಶಕ್ತಿಗೆ ಸರಿಯಾದ ಪರಿಹಾರ ಪಡೆಯುವ ಅಧಿಕಾರ ಇರಲಿಲ್ಲ. ಶ್ರೀಮಂತ ರೈತರಿಗೆ ಅವರು ಖಾಯಂ ಜೀತದಾಳುಗಳಾಗಿದ್ದರು. ಅವರಿಗೆ ವ್ಯಕ್ತಿ ಸ್ವಾತಂತ್ರ್ಯ ಇರಲಿಲ್ಲ. ಅದು ಏನಿದ್ದರೂ ಶ್ರೀಮಂತರ ಸ್ವತ್ತಾಗಿತ್ತು.

ಅಸ್ಪೃಶ್ಯತೆ ಸಮಾಜದಿಂದ ತೊಲಗದ ಹೊರತು ರೈತ ಮತ್ತು ಕಾರ್ಮಿಕ ಹೋರಾಟಕ್ಕೆ ಸಂಘಟಿತ ಸ್ವರೂಪ ಬರುವುದಿಲ್ಲ. ಭಾರತದಲ್ಲಿ ಶ್ರಮಜೀವಿಗಳಿಗೆ ಮುಕ್ತಿ ದೊರೆಯಬೇಕಾಗಿದ್ದರೆ, ಅವರು ಸಾಮಾಜಿಕ ಆರ್ಥಿಕ, ಧಾರ್ಮಿಕ ದಾಸ್ಯದಿಂದ ಮುಕ್ತರಾಗುವುದೊಂದೇ ಅವರಿಗಿರುವ ರಾಜಮಾರ್ಗ. ಆ ಸಂಕೋಲೆಗಳನ್ನು ಕಳಚಿಕೊಳ್ಳುವುದೊಂದೇ ಇರುವ ಪರಿಹಾರ ಮಾರ್ಗ.

ಒಕ್ಕಲಿಗ ಸಣ್ಣ ರೈತರು ಮತ್ತು ಕಾರ್ಮಿಕರು, ಒಕ್ಕಲಿಗ White Collar ಗಿಂತ ತಾವು ಕೀಳು ಎಂದು ಭಾವಿಸುವರಾದರೂ ತಾವು ಅಸ್ಪೃಶ್ಯ ವರ್ಗದವರಿಗಿಂತ ಮೇಲ್ವರ್ಗದವರು ಎಂದು ಗರ್ವಪಡುತ್ತಾರೆ. ತಮ್ಮಂತೆಯೇ ಆರ್ಥಿಕವಾಗಿ ಹಿಂದುಳಿದ ಅಸ್ಪೃಶ್ಯರನ್ನು ಕೀಳಾಗಿ ನಡೆಸಿಕೊಳ್ಳುತ್ತಾರೆ. ವೈರಿಗಳಂತೆ ನೋಡುತ್ತಾರೆ.

ಅಸ್ಪೃಶ್ಯರಿಗೆ ಸಮಾಜದಲ್ಲಿ ಗೌರವ ದೊರೆಯಬೇಕಾದರೆ ಅವರು ಮೊದಲು ಮಾಡಬೇಕಾದ ಕೆಲಸ ಆರ್ಥಿಕವಾಗಿ ಸ್ವಾವಲಂಬಿಗಳಾಗುವುದು. ಹಣದಿಂದಲೇ ಸಮಾಜ ಜನರನ್ನು ಅಳೆಯುವ ಈ ಕಾಲದಲ್ಲಿ ಅಸ್ಪೃಶ್ಯರು ಆರ್ಥಿಕವಾಗಿ ಚೇತರಿಸಿಕೊಳ್ಳದಿದ್ದರೆ ಸಮಾಜ ಅವರನ್ನು ತಿರಸ್ಕಾರ ಬುದ್ಧಿಯಿಂದ ನೋಡುತ್ತದೆ, ಕೀಳಾಗಿ ಕಾಣುತ್ತದೆ. ವೈರಿಗಳಂತೆ ಕಾಣುತ್ತದೆ. ಸ್ವಾಭಿಮಾನಕ್ಕೆ ಧಕ್ಕೆ ಬರದಂತೆ ಅಸ್ಪೃಶ್ಯರು ನಡೆದುಕೊಳ್ಳಬೇಕು.

ಆದರೆ ಒಂದು ಎಚ್ಚರಿಕೆ. ಭೌತಿಕ ಸುಖವೊಂದೇ ಸಾರಸರ್ವಸ್ವ ಎಂದು ಅಸ್ಪೃಶ್ಯರು ಭಾವಿಸಬಾರದು. ಅಸ್ಪೃಶ್ಯಯರಿಗೂ ಉಳಿದ ಎಲ್ಲರಂತೆ ಮನಸ್ಸು, ಹೃದಯಗಳಿವೆ. ಆ ಮನಸ್ಸಿಗೆ, ಹೃದಯಕ್ಕೆ ವಿಚಾರದ ಆಹಾರ ಅತ್ಯಗತ್ಯ. ವೈಚಾರಿಕತೆ ಮಾನವನ ಮನಸ್ಸಿನಲ್ಲಿ ಆಸೆಗಳನ್ನು ಹುಟ್ಟು ಹಾಕುತ್ತದೆ. ಕೆಲಸ ಮಾಡಲು ಪ್ರೇರಣೆ ನೀಡುತ್ತದೆ. ಅಸ್ಪೃಶ್ಯ ಸಂಘಟನೆಗಳು ವಿಚಾರಕ್ರಾಂತಿಯ ಬೀಜವನ್ನು ಅಸ್ಪೃಶ್ಯರ ಮನಸ್ಸಿನಲ್ಲಿ ಬಿತ್ತಬೇಕು.

ಆರ್ಥಿಕ ಬೆಳವಣಿಗೆ ಅಸ್ಪೃಶ್ಯರ ಸರ್ವತೋಮುಖ ಬೆಳವಣಿಗೆಗೆ ಒಂದು ಸಾಧನ. ಆರ್ಥಿಕ ಅಭಿವೃದ್ಧಿ ಆಯಿತು ಎಂದರೆ ಅಸ್ಪೃಶ್ಯನಿಗೆ ಸಮಾಜ ತನ್ನತಾನಾಗೇ ಗೌರವ ನೀಡಲು ಆರಂಭ ಮಾಡುತ್ತದೆ.

ಪರಂಪರಾಗತ ಉದ್ಯೋಗಗಳನ್ನು ದಲಿತರು ಬಿಡಬೇಕು. ಸತ್ತ ಪ್ರಾಣಿಗಳನ್ನು ಹೊತ್ತು ಹೂಳುವುದು ಮತ್ತು ತಿನ್ನುವುದು, ತೋಟಿ ತಳವಾರ ಹುದ್ದೆಗಳನ್ನು ವಂಶಪಾರಂಪರ್ಯದ ಕಸುಬು ಎಂದು ಊರು ಕೇರಿಯಲ್ಲಿ ಭಾವಿಸುವುದು, ಮೇಲ್ಜಾತಿಯವರ ಆಣತಿಯಂತೆ ತಮಟೆ ಹೊಡೆದು ಸಾರುವುದು ಎಲ್ಲ ನಿಲ್ಲಬೇಕು. ವಿದ್ಯಾಭ್ಯಾಸ ಪಡೆಯಲು ಎರಡು ವಿಧದ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅವೆಂದರೆ ಬ್ರಾಹ್ಮಣವಾದ ಮತ್ತು ಬಂಡವಾಳವಾದ. ಬ್ರಾಹ್ಮಣವಾದ ಎಂಬುದನ್ನು ತಪ್ಪಾಗಿ ಅರ್ಥೈಸಬಾರದು. ಬ್ರಾಹ್ಮಣವಾದವೆಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ವಿರೋಧಿಸುವ ಪ್ರವೃತ್ತಿ. ಈ ಪ್ರವೃತ್ತಿ ಬ್ರಾಹ್ಮಣರ ಗುತ್ತಿಯಾಗಿ ಏನೂ ಉಳಿದಿಲ್ಲ. ಎಲ್ಲ ಜಾತಿಗಳಲ್ಲೂ ಇಂತಹ ಜನ ಇದ್ದಾರೆ. ಈಗ ಇದು ಎಲ್ಲ ವರ್ಗದವರ ಸಿದ್ಧಾಂತವಾಗಿದೆ. ಈ ಪ್ರವೃತ್ತಿಯನ್ನು ದಲಿತರು ಹೋರಾಟದ ಮೂಲಕ ಬದಲಿಸಬೇಕು.

ಇನ್ನೊಂದು ಬಂಡವಾಳಶಾಹಿ ನೀತಿ. ಅದು ಲಾಭಕೋರರ ಸಂತೆ. ಬಂಡವಾಳಶಾಹಿಗಳ ಆರ್ಥಿಕನೀತಿ, ಧರ್ಮವೋ ಅಧರ್ಮವೋ ಯಾವುದೇ ಮಾರ್ಗವಾಗಲಿ ಲಾಭಗಳಿಸುವುದು. ಆಳುವ ಸರ್ಕಾರವನ್ನು ತನ್ನ ವಶ ಮಾಡಿಕೊಂಡು ಕೂಡಿಕೊಳ್ಳುವುದು. ಸಮಾಜದಲ್ಲಿ ಆರ್ಥಿಕ ಅಸಮಾನತೆ ಹೆಚ್ಚಿಸುವುದು. ಅವರಿಗೆ ಸರ್ಕಾರ ಸಕಲ ಸವಲತ್ತುಗಳನ್ನು ನೀಡಲು ತುದಿಗಾಲ ಮೇಲೆ ನಿಲ್ಲುತ್ತದೆ. ಅದಕ್ಕೆ ಕಾರಣ ಅವರು ಪಕ್ಷಕ್ಕೆ ನೀಡುವ ಎಂಜಲು ಹಣ. ಸರ್ಕಾರ ಸಮಾಜವಾದದಿಂದ ಬಂಡವಾಳಶಾಹಿ ನೀತಿಗೆ ತಿರುಗುವಂತೆ ಮಾಡುವುದು ಬಂಡವಾಳಶಾಹಿಯ ಪ್ರಥಮ ಆದ್ಯತೆ. ಮಾಲಿಕರು, ಕಾರ್ಮಿಕರು ಸರ್ಕಾರ ಮೂವರೂ ಸೇರಿ ಕಾರ್ಮಿಕ ನೀತಿ ರೂಪಿಸಬೇಕು, ಶ್ರಮಿಕರ ಕೈಗೆ ಸರ್ಕಾರ ಹೋಗಬೇಕು, ಶ್ರಮಿಕರಲ್ಲಿ ಬೇರುಬಿಟ್ಟಿರುವ ಜಾತಿ,ಭಾವನೆ, ಉಚ್ಚ ನೀಚಭಾವನೆ, ಮೇಲುಕೀಳು ಭಾವನೆ ಹೋಗದೆ ಇದ್ದರೆ ಶ್ರಮಿಕರು ಒಂದಾಗುವುದು ಹೇಗೆ ಸಾಧ್ಯವಾದೀತು? ಸಮಾಜದಲ್ಲಿ ಕ್ರಾಂತಿತರಲು ಹೇಗೆ ಸಾಧ್ಯವಾದೀತು?

ಅಂಬೇಡ್ಕರರ ಆರ್ಥಿಕನೀತಿ ಯಾವುದೇ ಜಾತಿ, ಪಕ್ಷ, ಕಾಲ, ದೇಶಗಳಿಗೆ ಸೀಮಿತವಾಗಿರದೆ ಇಡೀ ಮಾನವಕುಲದಲ್ಲಿ ಸಮಾನತೆಯನ್ನು ಸಾಧಿಸಲು ಮತ್ತು ನೆಮ್ಮದಿ ಬದುಕನ್ನು ಬದುಕಲು ನೆರವಾಗುವುದಾಗಿದೆ. ಇಡೀ ಮಾನವಸಮೂಹದಲ್ಲಿ ಸಮಾನತೆಯನ್ನು ತರುವುದೇ ಅಂಬೇಡ್ಕರರ ಆರ್ಥಿಕ ಗುರಿ.


ಇದನ್ನೂ ಓದಿ: ಪೌರಕಾರ್ಮಿಕರ ದಿನ: ಸಂಭ್ರಮಾಚರಣೆ ಬೇಡ, ಕನಿಷ್ಠ ಸೌಲಭ್ಯ ನೀಡಿ…
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...