Homeಕರ್ನಾಟಕಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಕಾರಣ ಯಾರು ಎಂದು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣಬೈರೇಗೌಡ

ಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಕಾರಣ ಯಾರು ಎಂದು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣಬೈರೇಗೌಡ

- Advertisement -
- Advertisement -

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದರು.

ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ “ಕೇಂದ್ರ ಸರ್ಕಾರ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಯಾವ ಪಕ್ಷ? ದೇಶ ಒಡೆದದ್ದು ಯಾರು?” ಎಂದು ಪ್ರಶ್ನಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣಬೈರೇಗೌಡ ಅವರು, ಪುಲ್ವಾಮಾ ಹತ್ಯಾಕಾಂಡ ಘಟನೆಯನ್ನು ಉಲ್ಲೇಖಿಸಿ ಬಿಜೆಪಿಗರ ವಿರುದ್ಧ ಕಿಡಿಕಾರಿದರು. “ನಮ್ಮ ದೇಶದ 40 ಜನ ಸೈನಿಕರ ಸಾವಿಗೆ ಕಾರಣ ಯಾರು ಎಂಬುದನ್ನು ಜನರ ಮುಂದೆ ಹೇಳಲಾಗದ, ಪ್ರಕರಣದ ತನಿಖೆ ನಡೆಸುವ ಯೋಗ್ಯತೆಯೂ ಇಲ್ಲದ ಅಯೋಗ್ಯರು ಬಿಜೆಪಿಗರು. ಇವರಿಗೆ ದೇಶಕ್ಕೆ ಬೆಂಕಿ ಇಟ್ಟು ಓಟು ಹಾಕಿಸಿಕೊಳ್ಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ?” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಬಿಜೆಪಿಗರು ಸದನದಲ್ಲಿ ವಾಸ್ತವಕ್ಕೆ ಹತ್ತಿರವಾದ ವಿಚಾರದ ಬಗ್ಗೆ ಮಾತನಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಬರೀ ಸುಳ್ಳು ಮತ್ತು ಕಟ್ಟುಕಥೆಗಳಿಂದ ಕೂಡಿದ ಅವರ ಮಾತಿಗೆ ಸದನದಲ್ಲಿ ಅವಕಾಶ ನೀಡಬೇಡಿ. ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿಷ್ಣಾತರು. ಅದರಲ್ಲೂ, ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಾತ್ಮಕ ಮಾತುಗಳನ್ನಾಡುತ್ತಿದ್ದಾರೆ” ಎಂದರು.

“ನಾವು ತಾಳ್ಮೆಯಿಂದ ಇದ್ದೇವೆ ಎಂಬ ಕಾರಣಕ್ಕೆ ಅವರು ದುರ್ಲಾಬ ಪಡೆದುಕೊಂಡು ವಾಸ್ತವ ಬಿಟ್ಟು ಪ್ರಚೋದನೆಯ ಮಾತುಗಳನ್ನಾಡುತ್ತಿದ್ದಾರೆ. ನಮ್ಮ ತಾಳ್ಮೆ ಪರೀಕ್ಷೆ ಮಾಡುವುದೇ ಅವರ ಉದ್ದೇಶವಾಗಿದೆ. ದೇಶದ ವಿಭಜನೆಗೆ ಯಾರು ಕಾರಣ? ಎಂಬ ಬಗ್ಗೆ ಚರ್ಚಿಸಲು ನಾವು ಸಿದ್ದರಿದ್ದೇವೆ. ಆದರೆ, ಇಂದು ಅವರು ಅಸಲಿ ವಿಚಾರದ ಬಗ್ಗೆ ಮಾತನಾಡಲಿ. ವಿಷಯಾಂತರ ಬೇಡ” ಎಂದು ಸಚಿವರು ಕಿಡಿಕಾರಿದರು.

ಇದನ್ನೂ ಓದಿ : ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...