Homeಕರ್ನಾಟಕಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಕಾರಣ ಯಾರು ಎಂದು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣಬೈರೇಗೌಡ

ಪುಲ್ವಾಮಾದಲ್ಲಿ ಸೈನಿಕರ ಸಾವಿಗೆ ಕಾರಣ ಯಾರು ಎಂದು ಅಯೋಗ್ಯ ಬಿಜೆಪಿ ಸ್ಪಷ್ಟಪಡಿಸಲಿ: ಕೃಷ್ಣಬೈರೇಗೌಡ

- Advertisement -
- Advertisement -

ಐದು ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಜೀವ ಚೆಲ್ಲಿದ 40 ಜನ ಭಾರತೀಯ ಸೈನಿಕರ ಹತ್ಯೆಗೆ ಕಾರಣ ಯಾರು? ಈ ಕೃತ್ಯಕ್ಕೆ ಬಳಸಿದ ಆರ್‌ಡಿಎಕ್ಸ್ ಎಲ್ಲಿಂದ ಬಂತು? ಈ ಪ್ರಕರಣದ ತನಿಖೆ ಏನಾಯ್ತು? ಎಂಬುದನ್ನು ಅಯೋಗ್ಯ ಬಿಜೆಪಿ ನಾಯಕರು ಸ್ಪಷ್ಟಪಡಿಸಲಿ ಎಂದು ಸಚಿವ ಕೃಷ್ಣಬೈರೇಗೌಡ ಆಗ್ರಹಿಸಿದರು.

ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ವಿ ಸುನೀಲ್ ಕುಮಾರ್ ಮಾತನಾಡುತ್ತಾ “ಕೇಂದ್ರ ಸರ್ಕಾರ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಯಾವ ಪಕ್ಷ? ದೇಶ ಒಡೆದದ್ದು ಯಾರು?” ಎಂದು ಪ್ರಶ್ನಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಕೃಷ್ಣಬೈರೇಗೌಡ ಅವರು, ಪುಲ್ವಾಮಾ ಹತ್ಯಾಕಾಂಡ ಘಟನೆಯನ್ನು ಉಲ್ಲೇಖಿಸಿ ಬಿಜೆಪಿಗರ ವಿರುದ್ಧ ಕಿಡಿಕಾರಿದರು. “ನಮ್ಮ ದೇಶದ 40 ಜನ ಸೈನಿಕರ ಸಾವಿಗೆ ಕಾರಣ ಯಾರು ಎಂಬುದನ್ನು ಜನರ ಮುಂದೆ ಹೇಳಲಾಗದ, ಪ್ರಕರಣದ ತನಿಖೆ ನಡೆಸುವ ಯೋಗ್ಯತೆಯೂ ಇಲ್ಲದ ಅಯೋಗ್ಯರು ಬಿಜೆಪಿಗರು. ಇವರಿಗೆ ದೇಶಕ್ಕೆ ಬೆಂಕಿ ಇಟ್ಟು ಓಟು ಹಾಕಿಸಿಕೊಳ್ಳುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ?” ಎಂದು ಆಕ್ರೋಶ ಹೊರಹಾಕಿದರು.

ಮುಂದುವರೆದು, “ಬಿಜೆಪಿಗರು ಸದನದಲ್ಲಿ ವಾಸ್ತವಕ್ಕೆ ಹತ್ತಿರವಾದ ವಿಚಾರದ ಬಗ್ಗೆ ಮಾತನಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ, ಬರೀ ಸುಳ್ಳು ಮತ್ತು ಕಟ್ಟುಕಥೆಗಳಿಂದ ಕೂಡಿದ ಅವರ ಮಾತಿಗೆ ಸದನದಲ್ಲಿ ಅವಕಾಶ ನೀಡಬೇಡಿ. ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿಷ್ಣಾತರು. ಅದರಲ್ಲೂ, ಬಿಜೆಪಿ ಶಾಸಕ ವಿ. ಸುನೀಲ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಪ್ರಚೋದನಾತ್ಮಕ ಮಾತುಗಳನ್ನಾಡುತ್ತಿದ್ದಾರೆ” ಎಂದರು.

“ನಾವು ತಾಳ್ಮೆಯಿಂದ ಇದ್ದೇವೆ ಎಂಬ ಕಾರಣಕ್ಕೆ ಅವರು ದುರ್ಲಾಬ ಪಡೆದುಕೊಂಡು ವಾಸ್ತವ ಬಿಟ್ಟು ಪ್ರಚೋದನೆಯ ಮಾತುಗಳನ್ನಾಡುತ್ತಿದ್ದಾರೆ. ನಮ್ಮ ತಾಳ್ಮೆ ಪರೀಕ್ಷೆ ಮಾಡುವುದೇ ಅವರ ಉದ್ದೇಶವಾಗಿದೆ. ದೇಶದ ವಿಭಜನೆಗೆ ಯಾರು ಕಾರಣ? ಎಂಬ ಬಗ್ಗೆ ಚರ್ಚಿಸಲು ನಾವು ಸಿದ್ದರಿದ್ದೇವೆ. ಆದರೆ, ಇಂದು ಅವರು ಅಸಲಿ ವಿಚಾರದ ಬಗ್ಗೆ ಮಾತನಾಡಲಿ. ವಿಷಯಾಂತರ ಬೇಡ” ಎಂದು ಸಚಿವರು ಕಿಡಿಕಾರಿದರು.

ಇದನ್ನೂ ಓದಿ : ಕಾಂಗ್ರೆಸ್ ವಿರುದ್ಧ ಅವಹೇಳನಾಕಾರಿ ಪೋಸ್ಟ್‌ ಮಾಡಿದ ಬಿಜೆಪಿ; ಕ್ರಮ ತೆಗೆದುಕೊಳ್ಳುತ್ತಾ ಸಿದ್ದರಾಮಯ್ಯ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...