Homeಮುಖಪುಟಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

- Advertisement -
- Advertisement -

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಲು ಆಹ್ವಾನಿಸುತ್ತೇವೆ. ಈ ಪಂಥಾಹ್ವಾನವನ್ನು ಸ್ವೀಕಾರ ಮಾಡುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್‌ನ ಶೂದ್ರ ನಾಯಕರ ವಿರುದ್ಧ ಬಿಜೆಪಿಯ ಶೂದ್ರ ನಾಯಕರನ್ನು ಛೂ ಬಿಡುವುದು ಏಕೆ? ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಬಂದು ಸ್ಪರ್ಧೆ ಮಾಡಿ ನೋಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನಗರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ.

ಅದೇ ರೀತಿ ಆರ್ ಅಶೋಕ್‌ರವರು ಕನಕಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಅಲ್ಲಿ ಗೆಲುವು ಸುಲಭವಲ್ಲ ಎಂದು ತಿಳಿದು ಪದ್ಮನಾಭನಗರದಲ್ಲಿ ಅಶೋಕ್‌ರವರಿಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, “ನಾಗಪುರದ ವಂಶದವರು ಇತರರನ್ನ ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಎಂದು ಸವಾಲು ಹಾಕಿದೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಜೋರಾಗಿದೆ. ಬಿಜೆಪಿಗೆ ಕೌಂಟರ್ ಆಗಿ ಡಿ.ಕೆ ಸುರೇಶ್ ಪದ್ಮನಾಭನಗರದಲ್ಲಿ, ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಸ್ಪರ್ಧಿಸಲೇಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ಸೋಲಿನ ಭಯ ಕಾರಣ. ಅದೇ ನರೇಂದ್ರ ಮೋದಿ, ಆಶೋಕ, ಸೋಮಣ್ಣ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ದೇಶಭಕ್ತಿ ಕಾರಣ. ನಮ್ಮಲ್ಲಿ standard ಅನ್ವಯವಾಗುವುದು ಕಾಂಗ್ರೇಸಿಗೆ ಮಾತ್ರ. ಬಿಜೆಪಿಗೆ ಯಾವುದೇ standard ಇಲ್ಲ, ಅಲ್ವಾ? ಎಂದು ಅಲ್ಮೇಡ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ನಂದು ಈಗಲೂ ಅದೇ ಮಾತು. ದಮ್ಮು, ತಾಕತ್ತು ಇದ್ದಿದ್ದರೆ ಸಿದ್ಧರಾಮಯ್ಯ ವಿರುದ್ಧ ಸಂತೋಷನನ್ನೂ, ಡಿಕೆಶಿ ವಿರುದ್ಧ ತೇಜಸ್ವಿಯನ್ನೂ ನಿಲ್ಲಿಸಬೇಕಿತ್ತು ಎಂದು ದಿನೇಶ್ ಕುಮಾರ್ ದಿನೂ ಸವಾಲು ಹಾಕಿದ್ದರು.

“ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಯ್ಕೆಯಾದರೂ ಸಹ ವಿ. ಸೋಮಣ್ಣವರ ಸ್ಥಿತಿ ದಯನೀಯವಾಗಿದೆ.
ಈ ರೀತಿ ಕೊಡುವುದಕ್ಕಿಂತ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ನಿಟ್ಟುಸಿರು ಬಿಡುತ್ತಿರಬಹುದು. ಹಾಲಿ ಶಾಸಕರಾಗಿದ್ದ ಅವರನ್ನು ಗೋವಿಂದರಾಜ ನಗರದಿಂದ ಕಿತ್ತು ಚಾಮರಾಜನಗರಕ್ಕೆ ತಂದು ಕೂಡಿಸಿ ಗೋಳಾಡಿಸಿದ್ದನ್ನು ಹೇಗೋ ನುಂಗಿಕೊಳ್ಳಬಹುದು. ಆದರೆ ‘ಬೇಡ್ರೋ ಬೇಡ್ರಪ್ಪ’ ಅಂತ ಕೇಳಿಕೊಂಡರೂ ವರುಣಾದಲ್ಲಿ ತಳ್ಳಿ ಆಟವಾಡುತ್ತಿರುವುದು ನೋಡಿದರೆ ಬೆಕ್ಕಿಗೆ ಚೆಲ್ಲಾಟ… ಎಂಬಂತಾಗಿದೆ ಸೋಮಣ್ಣವರ ಸ್ಥಿತಿ ಈ ನಗು ಇನ್ನೆಲ್ಲಿ? ಬ್ರಾಹ್ಮಣರಿಗೆಲ್ಲಾ ಸೇಫ್ ಕ್ಷೇತ್ರಗಳು… ಬ್ರಾಹ್ಮಣೇತರರಿಗೆ ರಿಸ್ಕ್ ಆಂಗಳ…. ಬಿಜೆಪಿಯ ಚಾತುರ್ವರ್ಣ ನೀತಿ….” ಎಂದು ಶ್ರೀಪಾದ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿ.ಸೋಮಣ್ಣ ಮತ್ತು ಆರ್.ಅಶೋಕ್ ಸುರಕ್ಷಿತ ಕ್ಷೇತ್ರ ಉಳಿಸಿಕೊಂಡೇ ವರುಣಾ ಮತ್ತು ಕನಕಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ. ನಿರಾಯಾಸ ಗೆಲುವು! ಎಂದು ಚಂದ್ರಕಾಂತ ವಡ್ಡುರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...