Homeಮುಖಪುಟಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

- Advertisement -
- Advertisement -

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಲು ಆಹ್ವಾನಿಸುತ್ತೇವೆ. ಈ ಪಂಥಾಹ್ವಾನವನ್ನು ಸ್ವೀಕಾರ ಮಾಡುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್‌ನ ಶೂದ್ರ ನಾಯಕರ ವಿರುದ್ಧ ಬಿಜೆಪಿಯ ಶೂದ್ರ ನಾಯಕರನ್ನು ಛೂ ಬಿಡುವುದು ಏಕೆ? ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಬಂದು ಸ್ಪರ್ಧೆ ಮಾಡಿ ನೋಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನಗರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ.

ಅದೇ ರೀತಿ ಆರ್ ಅಶೋಕ್‌ರವರು ಕನಕಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಅಲ್ಲಿ ಗೆಲುವು ಸುಲಭವಲ್ಲ ಎಂದು ತಿಳಿದು ಪದ್ಮನಾಭನಗರದಲ್ಲಿ ಅಶೋಕ್‌ರವರಿಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, “ನಾಗಪುರದ ವಂಶದವರು ಇತರರನ್ನ ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಎಂದು ಸವಾಲು ಹಾಕಿದೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಜೋರಾಗಿದೆ. ಬಿಜೆಪಿಗೆ ಕೌಂಟರ್ ಆಗಿ ಡಿ.ಕೆ ಸುರೇಶ್ ಪದ್ಮನಾಭನಗರದಲ್ಲಿ, ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಸ್ಪರ್ಧಿಸಲೇಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ಸೋಲಿನ ಭಯ ಕಾರಣ. ಅದೇ ನರೇಂದ್ರ ಮೋದಿ, ಆಶೋಕ, ಸೋಮಣ್ಣ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ದೇಶಭಕ್ತಿ ಕಾರಣ. ನಮ್ಮಲ್ಲಿ standard ಅನ್ವಯವಾಗುವುದು ಕಾಂಗ್ರೇಸಿಗೆ ಮಾತ್ರ. ಬಿಜೆಪಿಗೆ ಯಾವುದೇ standard ಇಲ್ಲ, ಅಲ್ವಾ? ಎಂದು ಅಲ್ಮೇಡ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ನಂದು ಈಗಲೂ ಅದೇ ಮಾತು. ದಮ್ಮು, ತಾಕತ್ತು ಇದ್ದಿದ್ದರೆ ಸಿದ್ಧರಾಮಯ್ಯ ವಿರುದ್ಧ ಸಂತೋಷನನ್ನೂ, ಡಿಕೆಶಿ ವಿರುದ್ಧ ತೇಜಸ್ವಿಯನ್ನೂ ನಿಲ್ಲಿಸಬೇಕಿತ್ತು ಎಂದು ದಿನೇಶ್ ಕುಮಾರ್ ದಿನೂ ಸವಾಲು ಹಾಕಿದ್ದರು.

“ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಯ್ಕೆಯಾದರೂ ಸಹ ವಿ. ಸೋಮಣ್ಣವರ ಸ್ಥಿತಿ ದಯನೀಯವಾಗಿದೆ.
ಈ ರೀತಿ ಕೊಡುವುದಕ್ಕಿಂತ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ನಿಟ್ಟುಸಿರು ಬಿಡುತ್ತಿರಬಹುದು. ಹಾಲಿ ಶಾಸಕರಾಗಿದ್ದ ಅವರನ್ನು ಗೋವಿಂದರಾಜ ನಗರದಿಂದ ಕಿತ್ತು ಚಾಮರಾಜನಗರಕ್ಕೆ ತಂದು ಕೂಡಿಸಿ ಗೋಳಾಡಿಸಿದ್ದನ್ನು ಹೇಗೋ ನುಂಗಿಕೊಳ್ಳಬಹುದು. ಆದರೆ ‘ಬೇಡ್ರೋ ಬೇಡ್ರಪ್ಪ’ ಅಂತ ಕೇಳಿಕೊಂಡರೂ ವರುಣಾದಲ್ಲಿ ತಳ್ಳಿ ಆಟವಾಡುತ್ತಿರುವುದು ನೋಡಿದರೆ ಬೆಕ್ಕಿಗೆ ಚೆಲ್ಲಾಟ… ಎಂಬಂತಾಗಿದೆ ಸೋಮಣ್ಣವರ ಸ್ಥಿತಿ ಈ ನಗು ಇನ್ನೆಲ್ಲಿ? ಬ್ರಾಹ್ಮಣರಿಗೆಲ್ಲಾ ಸೇಫ್ ಕ್ಷೇತ್ರಗಳು… ಬ್ರಾಹ್ಮಣೇತರರಿಗೆ ರಿಸ್ಕ್ ಆಂಗಳ…. ಬಿಜೆಪಿಯ ಚಾತುರ್ವರ್ಣ ನೀತಿ….” ಎಂದು ಶ್ರೀಪಾದ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿ.ಸೋಮಣ್ಣ ಮತ್ತು ಆರ್.ಅಶೋಕ್ ಸುರಕ್ಷಿತ ಕ್ಷೇತ್ರ ಉಳಿಸಿಕೊಂಡೇ ವರುಣಾ ಮತ್ತು ಕನಕಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ. ನಿರಾಯಾಸ ಗೆಲುವು! ಎಂದು ಚಂದ್ರಕಾಂತ ವಡ್ಡುರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...