Homeಮುಖಪುಟಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

- Advertisement -
- Advertisement -

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಲು ಆಹ್ವಾನಿಸುತ್ತೇವೆ. ಈ ಪಂಥಾಹ್ವಾನವನ್ನು ಸ್ವೀಕಾರ ಮಾಡುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್‌ನ ಶೂದ್ರ ನಾಯಕರ ವಿರುದ್ಧ ಬಿಜೆಪಿಯ ಶೂದ್ರ ನಾಯಕರನ್ನು ಛೂ ಬಿಡುವುದು ಏಕೆ? ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಬಂದು ಸ್ಪರ್ಧೆ ಮಾಡಿ ನೋಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನಗರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ.

ಅದೇ ರೀತಿ ಆರ್ ಅಶೋಕ್‌ರವರು ಕನಕಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಅಲ್ಲಿ ಗೆಲುವು ಸುಲಭವಲ್ಲ ಎಂದು ತಿಳಿದು ಪದ್ಮನಾಭನಗರದಲ್ಲಿ ಅಶೋಕ್‌ರವರಿಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, “ನಾಗಪುರದ ವಂಶದವರು ಇತರರನ್ನ ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಎಂದು ಸವಾಲು ಹಾಕಿದೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಜೋರಾಗಿದೆ. ಬಿಜೆಪಿಗೆ ಕೌಂಟರ್ ಆಗಿ ಡಿ.ಕೆ ಸುರೇಶ್ ಪದ್ಮನಾಭನಗರದಲ್ಲಿ, ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಸ್ಪರ್ಧಿಸಲೇಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ಸೋಲಿನ ಭಯ ಕಾರಣ. ಅದೇ ನರೇಂದ್ರ ಮೋದಿ, ಆಶೋಕ, ಸೋಮಣ್ಣ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ದೇಶಭಕ್ತಿ ಕಾರಣ. ನಮ್ಮಲ್ಲಿ standard ಅನ್ವಯವಾಗುವುದು ಕಾಂಗ್ರೇಸಿಗೆ ಮಾತ್ರ. ಬಿಜೆಪಿಗೆ ಯಾವುದೇ standard ಇಲ್ಲ, ಅಲ್ವಾ? ಎಂದು ಅಲ್ಮೇಡ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ನಂದು ಈಗಲೂ ಅದೇ ಮಾತು. ದಮ್ಮು, ತಾಕತ್ತು ಇದ್ದಿದ್ದರೆ ಸಿದ್ಧರಾಮಯ್ಯ ವಿರುದ್ಧ ಸಂತೋಷನನ್ನೂ, ಡಿಕೆಶಿ ವಿರುದ್ಧ ತೇಜಸ್ವಿಯನ್ನೂ ನಿಲ್ಲಿಸಬೇಕಿತ್ತು ಎಂದು ದಿನೇಶ್ ಕುಮಾರ್ ದಿನೂ ಸವಾಲು ಹಾಕಿದ್ದರು.

“ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಯ್ಕೆಯಾದರೂ ಸಹ ವಿ. ಸೋಮಣ್ಣವರ ಸ್ಥಿತಿ ದಯನೀಯವಾಗಿದೆ.
ಈ ರೀತಿ ಕೊಡುವುದಕ್ಕಿಂತ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ನಿಟ್ಟುಸಿರು ಬಿಡುತ್ತಿರಬಹುದು. ಹಾಲಿ ಶಾಸಕರಾಗಿದ್ದ ಅವರನ್ನು ಗೋವಿಂದರಾಜ ನಗರದಿಂದ ಕಿತ್ತು ಚಾಮರಾಜನಗರಕ್ಕೆ ತಂದು ಕೂಡಿಸಿ ಗೋಳಾಡಿಸಿದ್ದನ್ನು ಹೇಗೋ ನುಂಗಿಕೊಳ್ಳಬಹುದು. ಆದರೆ ‘ಬೇಡ್ರೋ ಬೇಡ್ರಪ್ಪ’ ಅಂತ ಕೇಳಿಕೊಂಡರೂ ವರುಣಾದಲ್ಲಿ ತಳ್ಳಿ ಆಟವಾಡುತ್ತಿರುವುದು ನೋಡಿದರೆ ಬೆಕ್ಕಿಗೆ ಚೆಲ್ಲಾಟ… ಎಂಬಂತಾಗಿದೆ ಸೋಮಣ್ಣವರ ಸ್ಥಿತಿ ಈ ನಗು ಇನ್ನೆಲ್ಲಿ? ಬ್ರಾಹ್ಮಣರಿಗೆಲ್ಲಾ ಸೇಫ್ ಕ್ಷೇತ್ರಗಳು… ಬ್ರಾಹ್ಮಣೇತರರಿಗೆ ರಿಸ್ಕ್ ಆಂಗಳ…. ಬಿಜೆಪಿಯ ಚಾತುರ್ವರ್ಣ ನೀತಿ….” ಎಂದು ಶ್ರೀಪಾದ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿ.ಸೋಮಣ್ಣ ಮತ್ತು ಆರ್.ಅಶೋಕ್ ಸುರಕ್ಷಿತ ಕ್ಷೇತ್ರ ಉಳಿಸಿಕೊಂಡೇ ವರುಣಾ ಮತ್ತು ಕನಕಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ. ನಿರಾಯಾಸ ಗೆಲುವು! ಎಂದು ಚಂದ್ರಕಾಂತ ವಡ್ಡುರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...