Homeಮುಖಪುಟಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಕಣಕ್ಕಿಳಿಯಲಿ: ಕಾಂಗ್ರೆಸ್ ಪಂಥಾಹ್ವಾನ

- Advertisement -
- Advertisement -

ಕನಕಪುರ, ವರುಣ ಕ್ಷೇತ್ರಗಳಲ್ಲಿ ಬಿ.ಎಲ್ ಸಂತೋಷ್, ಪ್ರಹ್ಲಾದ್ ಜೋಷಿ ಸ್ಪರ್ಧೆ ಮಾಡಲು ಆಹ್ವಾನಿಸುತ್ತೇವೆ. ಈ ಪಂಥಾಹ್ವಾನವನ್ನು ಸ್ವೀಕಾರ ಮಾಡುವರೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್‌ನ ಶೂದ್ರ ನಾಯಕರ ವಿರುದ್ಧ ಬಿಜೆಪಿಯ ಶೂದ್ರ ನಾಯಕರನ್ನು ಛೂ ಬಿಡುವುದು ಏಕೆ? ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಬಂದು ಸ್ಪರ್ಧೆ ಮಾಡಿ ನೋಡಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ನಡೆಯುತ್ತಿದೆ.

ಇದುವರೆಗೂ ವಿ.ಸೋಮಣ್ಣನವರು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರನ್ನು ಸಿದ್ದರಾಮಯ್ಯನವರನ್ನು ಎದುರಿಸಲು ಬಿಜೆಪಿ ಕಳುಹಿಸಿದೆ. ಆದರೆ ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಎದುರು ಗೆಲುವು ಸುಲಭವಲ್ಲ ಎಂದು ಅರಿತು ಚಾಮರಾಜನಗರದಲ್ಲಿಯೂ ಕಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ.

ಅದೇ ರೀತಿ ಆರ್ ಅಶೋಕ್‌ರವರು ಕನಕಪುರದಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಕನಕಪುರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. ಅಲ್ಲಿ ಗೆಲುವು ಸುಲಭವಲ್ಲ ಎಂದು ತಿಳಿದು ಪದ್ಮನಾಭನಗರದಲ್ಲಿ ಅಶೋಕ್‌ರವರಿಗೆ ಟಿಕೆಟ್ ನೀಡಲಾಗಿದೆ.

ಈ ಬಗ್ಗೆ ವ್ಯಂಗ್ಯವಾಡಿರುವ ಕಾಂಗ್ರೆಸ್, “ನಾಗಪುರದ ವಂಶದವರು ಇತರರನ್ನ ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ.ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಎಂದು ಸವಾಲು ಹಾಕಿದೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ಚರ್ಚೆ ಜೋರಾಗಿದೆ. ಬಿಜೆಪಿಗೆ ಕೌಂಟರ್ ಆಗಿ ಡಿ.ಕೆ ಸುರೇಶ್ ಪದ್ಮನಾಭನಗರದಲ್ಲಿ, ಯತೀಂದ್ರ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಸ್ಪರ್ಧಿಸಲೇಬೇಕು ಎಂದು ಕೆಲವರು ಆಗ್ರಹಿಸುತ್ತಿದ್ದಾರೆ.

ಸಿದ್ದರಾಮಯ್ಯ, ರಾಹುಲ್ ಗಾಂಧಿ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ಸೋಲಿನ ಭಯ ಕಾರಣ. ಅದೇ ನರೇಂದ್ರ ಮೋದಿ, ಆಶೋಕ, ಸೋಮಣ್ಣ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಅದಕ್ಕೆ ದೇಶಭಕ್ತಿ ಕಾರಣ. ನಮ್ಮಲ್ಲಿ standard ಅನ್ವಯವಾಗುವುದು ಕಾಂಗ್ರೇಸಿಗೆ ಮಾತ್ರ. ಬಿಜೆಪಿಗೆ ಯಾವುದೇ standard ಇಲ್ಲ, ಅಲ್ವಾ? ಎಂದು ಅಲ್ಮೇಡ ಗ್ಲಾಡ್‌ಸನ್ ಪ್ರಶ್ನಿಸಿದ್ದಾರೆ.

ನಂದು ಈಗಲೂ ಅದೇ ಮಾತು. ದಮ್ಮು, ತಾಕತ್ತು ಇದ್ದಿದ್ದರೆ ಸಿದ್ಧರಾಮಯ್ಯ ವಿರುದ್ಧ ಸಂತೋಷನನ್ನೂ, ಡಿಕೆಶಿ ವಿರುದ್ಧ ತೇಜಸ್ವಿಯನ್ನೂ ನಿಲ್ಲಿಸಬೇಕಿತ್ತು ಎಂದು ದಿನೇಶ್ ಕುಮಾರ್ ದಿನೂ ಸವಾಲು ಹಾಕಿದ್ದರು.

“ಬಿಜೆಪಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಆಯ್ಕೆಯಾದರೂ ಸಹ ವಿ. ಸೋಮಣ್ಣವರ ಸ್ಥಿತಿ ದಯನೀಯವಾಗಿದೆ.
ಈ ರೀತಿ ಕೊಡುವುದಕ್ಕಿಂತ ಟಿಕೆಟ್ ಕೊಡದಿದ್ದರೂ ಪರವಾಗಿಲ್ಲ ಎಂದು ಜಗದೀಶ್ ಶೆಟ್ಟರ್ ನಿಟ್ಟುಸಿರು ಬಿಡುತ್ತಿರಬಹುದು. ಹಾಲಿ ಶಾಸಕರಾಗಿದ್ದ ಅವರನ್ನು ಗೋವಿಂದರಾಜ ನಗರದಿಂದ ಕಿತ್ತು ಚಾಮರಾಜನಗರಕ್ಕೆ ತಂದು ಕೂಡಿಸಿ ಗೋಳಾಡಿಸಿದ್ದನ್ನು ಹೇಗೋ ನುಂಗಿಕೊಳ್ಳಬಹುದು. ಆದರೆ ‘ಬೇಡ್ರೋ ಬೇಡ್ರಪ್ಪ’ ಅಂತ ಕೇಳಿಕೊಂಡರೂ ವರುಣಾದಲ್ಲಿ ತಳ್ಳಿ ಆಟವಾಡುತ್ತಿರುವುದು ನೋಡಿದರೆ ಬೆಕ್ಕಿಗೆ ಚೆಲ್ಲಾಟ… ಎಂಬಂತಾಗಿದೆ ಸೋಮಣ್ಣವರ ಸ್ಥಿತಿ ಈ ನಗು ಇನ್ನೆಲ್ಲಿ? ಬ್ರಾಹ್ಮಣರಿಗೆಲ್ಲಾ ಸೇಫ್ ಕ್ಷೇತ್ರಗಳು… ಬ್ರಾಹ್ಮಣೇತರರಿಗೆ ರಿಸ್ಕ್ ಆಂಗಳ…. ಬಿಜೆಪಿಯ ಚಾತುರ್ವರ್ಣ ನೀತಿ….” ಎಂದು ಶ್ರೀಪಾದ್ ಭಟ್ ಅಭಿಪ್ರಾಯಪಟ್ಟಿದ್ದಾರೆ.

ವಿ.ಸೋಮಣ್ಣ ಮತ್ತು ಆರ್.ಅಶೋಕ್ ಸುರಕ್ಷಿತ ಕ್ಷೇತ್ರ ಉಳಿಸಿಕೊಂಡೇ ವರುಣಾ ಮತ್ತು ಕನಕಪುರ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದು ಒಂದು ಸ್ಪಷ್ಟ ಸಂದೇಶ ನೀಡುತ್ತಿದೆ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿ. ನಿರಾಯಾಸ ಗೆಲುವು! ಎಂದು ಚಂದ್ರಕಾಂತ ವಡ್ಡುರವರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಕುಟುಂಬ ರಾಜಕಾರಣ ವಿರೋಧಿಸುವ ಬಿಜೆಪಿ: ಶಾಸಕರ ಮಕ್ಕಳು, ಪತ್ನಿಯರಿಗೆ ಟಿಕೆಟ್ ನೀಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...