Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...