Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...