Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...