Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...