Homeಮುಖಪುಟಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ಜನಗಣತಿ ಮತ್ತು NPR ಪ್ರತ್ಯೇಕವಾಗಿರಲಿ: ಕೇಂದ್ರಕ್ಕೆ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳಿಂದ ಪತ್ರ..

ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ.

- Advertisement -
- Advertisement -

ಈ ಬಾರಿ ನಡೆಯುವ ಜನಗಣತಿ ಮತ್ತು ಎನ್‌ಪಿಆರ್ ಪಕ್ರಿಯೆಗಳನ್ನು ಪ್ರತ್ಯೇಕವಾಗಿ ನಡೆಸುವಂತೆ ಒತ್ತಾಯಿಸಿ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಸರ್ಕಾರ 2021ರ ಜನಗಣತಿ ಮತ್ತು ರಾಷ್ಟ್ರೀಯ ಜನಗಣತಿ ನೊಂದಣಿ (ಎನ್‌ಪಿಆರ್) ಪಕ್ರಿಯೆಗಳನ್ನು ಒಟ್ಟಿಗೆ ನಡೆಸಲು ನಿಶ್ಚಯಿಸಿರುವುದು ಹಲವು ವಲಯಗಳಿಂದ ಟೀಕೆಗೆ ಗುರಿಯಾಗಿದೆ. ಎನ್ ಪಿ ಆರ್ ಮುಂದೆ ನಡೆಯಲಿರುವ ಎನ್ ಸಿ ಆರ್ (ರಾಷ್ಟ್ರೀಯ ಪೌರತ್ವ ನೊಂದಣಿ) ಪ್ರಕ್ರಿಯೆಗೆ ಪೂರ್ವಭಾವಿ ಅಭ್ಯಾಸ ಎಂದು ಹಲವು ನಾಗರಿಕರಲ್ಲಿ ಆತಂಕ ಮನೆಮಾಡಿದೆ. ಎನ್ ಪಿ ಆರ್ ಪ್ರಕ್ರಿಯೆಯಲ್ಲಿ, ಕೆಲವು ನಾಗರಿಕರ ಪೌರತ್ವದ ಬಗ್ಗೆ ಸಂದೇಹವನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಕೂಡ ಹಲವು ನಾಗರಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈಗ ದೇಶದ ಮತ್ತು ವಿಶ್ವದ ಸುಮಾರು 190 ಜನ ಆರ್ಥಿಕ ತಜ್ಞರು ಮತ್ತು ಸಮಾಜ ವಿಜ್ಞಾನಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದು, 2021ರ ಜನಗಣತಿ ಪ್ರಕ್ರಿಯೆ ಮತ್ತು ಎನ್‌ಪಿಆರ್‌ಗಳನ್ನು ಪ್ರತ್ಯೇಕಿಸುವಂತೆ ಆಗ್ರಹಿಸಿದ್ದಾರೆ. ಈ ಎರಡೂ ಪ್ರಕ್ರಿಯೆಗಳನ್ನು ಒಟ್ಟಿಗೆ ನಡೆಸಿದರೆ, ಭಾರತೀಯ ದತ್ತಾಂಶ ವ್ಯವಸ್ಥೆಯ ಮೇಲೆ ಆಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರತಿ ಮನೆಗಳಲ್ಲಿ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುವ ಜನಗಣತಿ ಮಾಹಿತಿ ಬಹಳ ಗೌಪ್ಯವಾದದ್ದು ಮತ್ತು ಇದನ್ನು ಕಾಯ್ದುಕೊಳ್ಳುವುದು ಅತಿ ಮುಖ್ಯ. ಈ ಮಾಹಿತಿಯನ್ನು ಸುರಕ್ಷಿತವಾಗಿ ಕಾಪಡಿಕೊಳ್ಳುವುದು ಮತ್ತು ಅದು ಇತರ ಪ್ರಕ್ರಿಯೆಗಳಿಂದ ಕಲುಷಿತಗೊಳ್ಳದಂತೆ ಎಚ್ಚರವಹಿಸಬೇಕಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

NPR ಮಾಹಿತಿ ಸಂಗ್ರಹದ ಸಮಯದಲ್ಲಿ ನಾಗರಿಕರ ಪೌರತ್ವದ ಬಗ್ಗೆ “ಸಂಶಯ” ವ್ಯಕ್ತಪಡಿಸಲು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ಸಮಾಜದ ಹಲವು ವಲಯಗಳಲ್ಲಿ ಆತಂಕ ಬೆಳೆಯುತ್ತಿದೆ. ಇದು ದೇಶದ ಹಲವೆಡೆ ಸಾರ್ವಜನಿಕ ಸಂಶಯಕ್ಕೆ ಎಡೆಮಾಡಿಕೊಟ್ಟಿರುವುದಲ್ಲದೆ, NPR ನಿಂದ ಇರುವ ಹೆಚ್ಚಿನ ಉಪಯೋಗಗಳ ಬಗ್ಗೆ ಯಾವುದೇ ಸ್ಪಷ್ಟತೆ ಕೂಡ ಇಲ್ಲ ಎಂದು ತಿಳಿಸಿದ್ದಾರೆ.

ಎನ್ ಪಿ ಆರ್ ಪ್ರಕ್ರಿಯೆಯನ್ನು 2021ರ ಜನಗಣತಿ ಜೊತೆಗೆ ನಡೆಸುವುದು ಸೆನ್ಸಸ್ ಕಾಯ್ದೆ 1948ರ 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ಆ ವಿಧಿ ಜನಗಣತಿ ಅಧಿಕಾರಿ ಕಾರ್ಯ ನಿರ್ವಹಿಸುವಾಗ ಸಿದ್ಧಪಡಿಸುವ ಪುಸ್ತಕ, ನೊಂದಣಿ ಅಥವಾ ದಾಖಲೆಯನ್ನು ಮತ್ಯಾರೂ ಉಪಯೋಗಿಸದಂತೆ ತಡೆಯುತ್ತದೆ ಎಂದು ಕೂಡ ತಿಳಿಸಿದ್ದಾರೆ.

ಹರ್ಷಮಂದರ್, ಜೆ ಎನ್ ಯು ನ ಹಿಮಾಂಶು, ಲಂಡನ್ ವಿಶ್ವವಿದ್ಯಾಲಯದ ಜಾನ್ ಹ್ಯಾರಿಸ್, ದೆಹಲಿ ವಿಶ್ವವಿದ್ಯಾಲಯದ ನಂದಿನಿ ಸುಂದರ್, ಪ್ರಭಾತ್ ಪಟ್ನಾಯಕ್, ಉಮಾ ಚಕ್ರವರ್ತಿ ಹೀಗೆ 190 ಸಮಾಜ ವಿಜ್ಞಾನಿ ಮತ್ತು ಆರ್ಥಿಕ ತಜ್ಞರು ಪತ್ರಕ್ಕೆ ಸಹಿ ಮಾಡಿದ್ದು, 2021ರ ಜನಗಣತಿಯ ಸಮಗ್ರತೆಯನ್ನು ಉಳಿಸಿಕೊಳ್ಳಲು NPR ಪ್ರಕ್ರಿಯ ಜೊತೆಗೆ ಅದನ್ನು ಬೇರ್ಪಡಿಸಬೇಕು ಎಂದು ಆಗ್ರಹಿಸಿರುವುದಲ್ಲದೆ, ಸದ್ಯಕ್ಕೆ ಎನ್‌ಪಿಆರ್ ಅಡಿ ಮಾಹಿತಿ ಸಂಗ್ರಹವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...