Homeಮುಖಪುಟಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಲಂಚ, ಕಮಿಷನ್‌ಗಳು ಮಿತಿ ಮೀರಿವೆ. ಹಾಗಾಗಿ ಲೋಕಾಯುಕ್ತ ದಾಳಿಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರನ್ನು ಕೂಡಲೇ ಬಂಧಿಸಬೇಕು ಮತ್ತು ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ.

ಸಿಎಂ ಮನೆ ಮುತ್ತಿಗೆ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಲಂಚ ಸ್ವೀಕಾರದ ವಿಚಾರದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು. ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಈಗ ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಇನ್ನೂ ಸಾಕ್ಷಿ ಬೇಕೆ? ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಬೊಮ್ಮಾಯಿ ಯಾವ ಮುಖ ಇಟ್ಟುಕೊಂಡು ಇನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ. ಈಗ ನಿಮ್ಮ ಶಾಸಕರ ವಿಚಾರ ನೋಡಿದ್ದೀರಲ್ಲ, ಇದಕ್ಕೆ ಈಗೇನು ಹೇಳುತ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಅಮಿತ್ ಶಾ ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತಿತ್ತೇನೋ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್ ಎಸ್ ಎಸ್ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಕೆಜೆ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು. ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ. ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐಗೆ ವಹಿಸಿದ್ದೆ. ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ʼಬಿʼ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ ಎಂದರು.

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಶಾಸಕರಾದ ರಾಮಲಿಂಗಾರೆಡ್ಡಿ ಮಾತನಾಡಿದರು. ನಂತರ ಸಿಎಂ ಮನೆ ಮುತ್ತಿಗೆಗೆ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಮುಂದಾದಾದ ಪೊಲೀಸರು ಅವರನ್ನು ತಡೆದಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...