Homeಮುಖಪುಟಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ಭ್ರಷ್ಟಾಚಾರದ ಹೊಣೆಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

- Advertisement -
- Advertisement -

ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಲಂಚ, ಕಮಿಷನ್‌ಗಳು ಮಿತಿ ಮೀರಿವೆ. ಹಾಗಾಗಿ ಲೋಕಾಯುಕ್ತ ದಾಳಿಗೊಳಗಾದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪನವರನ್ನು ಕೂಡಲೇ ಬಂಧಿಸಬೇಕು ಮತ್ತು ಭ್ರಷ್ಟಾಚಾರದ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಬೃಹತ್ ಪ್ರತಿಭಟನೆ ನಡೆಸಿದೆ.

ಸಿಎಂ ಮನೆ ಮುತ್ತಿಗೆ ಹೋರಾಟಕ್ಕೆ ಕರೆ ನೀಡಿರುವ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಮಾತನಾಡಿ, “ಲಂಚ ಸ್ವೀಕಾರದ ವಿಚಾರದಲ್ಲಿ ಕೇವಲ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸುವುದಲ್ಲ, ಅವರ ತಂದೆ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ತಕ್ಷಣ ಬಂಧಿಸಬೇಕು. ಬೊಮ್ಮಾಯಿ ರಾಜೀನಾಮೆ ನೀಡಬೇಕೆಂದು” ಒತ್ತಾಯಿಸಿದರು.

ರಾಜ್ಯ ಸರ್ಕಾರದ ವಿರುದ್ಧದ ಎಲ್ಲಾ ಭ್ರಷ್ಟಾಚಾರದ ಆರೋಪಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ದಾಖಲೆ ಕೇಳುತ್ತಾರೆ. ಈಗ ಬಿಜೆಪಿ ಶಾಸಕನ ಮಗನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಸಿಕ್ಕಿವೆ. ಇನ್ನೂ ಸಾಕ್ಷಿ ಬೇಕೆ? ಈ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದೆಯಾ? ಅಧಿಕಾರಕ್ಕೆ ಅಂಟಿಕೊಂಡು ಕೂತಿದ್ದಾರೆ. ಒಂದನ್ನಾದರೂ ತನಿಖೆ ಮಾಡಿಸಿದ್ರಾ? ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸೇರಿಕೊಂಡು ಮಂತ್ರಿಗಳು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಇಂತಿಷ್ಟು ಲಂಚ ಕಲೆಕ್ಷನ್ ಮಾಡಿಕೊಡಬೇಕು ಎಂದು ನಿಗದಿ ಮಾಡಿದ್ದಾರೆ. ಬೊಮ್ಮಾಯಿ ಯಾವ ಮುಖ ಇಟ್ಟುಕೊಂಡು ಇನ್ನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರ ಎಐಸಿಸಿಗೆ ಎಟಿಎಂ ಆಗಿತ್ತು ಎಂದು ಅಮಿತ್ ಶಾ ಅವರು ನಿನ್ನೆ ಆರೋಪ ಮಾಡಿದ್ದಾರೆ. ಈಗ ನಿಮ್ಮ ಶಾಸಕರ ವಿಚಾರ ನೋಡಿದ್ದೀರಲ್ಲ, ಇದಕ್ಕೆ ಈಗೇನು ಹೇಳುತ್ತೀರಿ ಶಾ? ಗಡಿಪಾರಾಗಿದ್ದ, ಜೈಲಿಗೆ ಹೋಗಿದ್ದ ಅಮಿತ್ ಶಾ ಅವರಿಂದ ನಾವು ಪಾಠ ಕಲಿಯಬೇಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಅವರಿಗೆ ಯಡಿಯೂರಪ್ಪ ಅವರ ಮೇಲೆ ನಿಜವಾಗಿ ಕಾಳಜಿ ಇಲ್ಲ. ಅವರ ಮೇಲೆ ಇದ್ದಕ್ಕಿದ್ದಂತೆ ಸಿಂಪತಿ ಬಂದಂತೆ ನಾಟಕ ಮಾಡುತ್ತಿದ್ದಾರೆ. ಯಡಿಯೂರಪ್ಪ ಅವರು ಕೇಂದ್ರ ನಾಯಕರು ಕೇಳಿದಷ್ಟು ದುಡ್ಡು ಕಳಿಸುತ್ತಿರಲಿಲ್ಲ ಎಂದು ಕಾಣುತ್ತಿತ್ತೇನೋ ಅದಕ್ಕೆ ಅವರನ್ನು ಅಧಿಕಾರದಿಂದ ಇಳಿಸಿ, ಆರ್ ಎಸ್ ಎಸ್ ನ ಕೈಗೊಂಬೆಯಂತೆ ಕೆಲಸ ಮಾಡುವ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಪಾಪ ಯಡಿಯೂರಪ್ಪ ಅವರು ಕಣ್ಣೀರು ಹಾಕುತ್ತಾ ಅಧಿಕಾರದಿಂದ ಇಳಿಯುವ ಹಾಗೆ ಮಾಡಿದ್ರಲ್ಲ ಮೋದಿಜಿ, ಈಗ ಓಟಿಗಾಗಿ ಅವರ ಕೈ ಹಿಡಿದುಕೊಂಡು ಹೊಗಳುತ್ತೀರಾ ಎಂದರು.

ನಮ್ಮ ಸರ್ಕಾರದ ಅವಧಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಾಗ ಕೆಜೆ ಜಾರ್ಜ್ ಅವರು ತಪ್ಪು ಮಾಡದಿದ್ದರೂ ರಾಜೀನಾಮೆ ನೀಡಿದ್ದರು. ನಾನು ಜಾರ್ಜ್ ಅವರಿಗೆ ನೀವು ರಾಜೀನಾಮೆ ಕೊಡುವುದು ಬೇಡ ಎಂದು ಹೇಳಿದ್ದೆ. ಆದರೂ ಅವರು ನೈತಿಕತೆ ಆಧಾರದಲ್ಲಿ ರಾಜೀನಾಮೆ ನೀಡಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ದೇವೇಗೌಡರು ನಮ್ಮ ವಿರುದ್ಧ ಒಂದಂಕಿ ಲಾಟರಿ ಆರೋಪ ಮಾಡಿದಾಗ ಕೂಡಲೇ ಪತ್ರಿಕಾಗೋಷ್ಠಿ ಕರೆದು ಅದನ್ನು ಸಿಬಿಐಗೆ ವಹಿಸಿದ್ದೆ. ಪರೇಶ್ ಮೇಸ್ತಾ ಎಂಬ ಯುವಕ ಕಾಲುಜಾರಿ ಬಿದ್ದು ಸತ್ತಾಗ ಅದನ್ನು ಕೊಲೆ ಎಂದು ದೊಂಬಿ, ಗಲಾಟೆ ಎಬ್ಬಿಸಿದರು, ಅದನ್ನು ಕೂಡ ಸಿಬಿಐ ತನಿಖೆಗೆ ವಹಿಸಿದ್ದೆ. ಈ ಯಾವುದೇ ಪ್ರಕರಣದಲ್ಲಿ ನಾವು ಬಿಜೆಪಿಯವರಿಂದ ದಾಖಲೆ ಕೇಳಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಒಟ್ಟು 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಿದ್ದೆ, ಇಂದು ಆ ಎಲ್ಲಾ ಪ್ರಕರಣಗಳಲ್ಲಿ ಸಿಬಿಐ ʼಬಿʼ ರಿಪೋರ್ಟ್ ನೀಡಿದೆ. ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿದೆ ಎಂದರು.

“ಸಾಕಪ್ಪ ಸಾಕು 40% ಸರ್ಕಾರ” ಎಂದು ಇಂದು ಜನ ಹೇಳುತ್ತಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ 40% ಕಮಿಷನ್ ಹಗರಣದ ಬಗ್ಗೆ ಮಾತನಾಡಿ ಸರ್ ಎಂದು ಜನರೇ ಕೇಳುತ್ತಿದ್ದಾರೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರು, ರುಪ್ಸಾ ಅಧ್ಯಕ್ಷರು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪತ್ರ ಬರೆದ ಉದಾಹರಣೆ ಹಿಂದೆ ಇದೆಯಾ? ಮಠಗಳಿಗೆ ನೀಡುವ ಅನುದಾನಕ್ಕೂ ಲಂಚ ಕೊಡಬೇಕು ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಇಷ್ಟೊಂದು ಲಜ್ಜೆಗೆಟ್ಟು ಲಂಚ ತಿನ್ನುವ ಸರ್ಕಾರವನ್ನು ನಾನು ನೋಡಿಯೇ ಇರಲಿಲ್ಲ ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿ ಕಾರ್ಯದರ್ಶಿ ರಣ್‌ದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಶಾಸಕರಾದ ರಾಮಲಿಂಗಾರೆಡ್ಡಿ ಮಾತನಾಡಿದರು. ನಂತರ ಸಿಎಂ ಮನೆ ಮುತ್ತಿಗೆಗೆ ಎಲ್ಲಾ ಕಾಂಗ್ರೆಸ್ ಶಾಸಕರು ಮತ್ತು ಕಾರ್ಯಕರ್ತರು ಮುಂದಾದಾದ ಪೊಲೀಸರು ಅವರನ್ನು ತಡೆದಿದ್ದಾರೆ. ಸಿದ್ದರಾಮಯ್ಯ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 20 ಕೋಟಿ ರೂ. ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ; ಮತ್ತೊಂದು ಸಮಸ್ಯೆಯಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...