Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...