Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...