Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...