Homeನೂರರ ನೋಟಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

ಕೊರೋನಾ ಕೊನೆಗೊಳ್ಳಲಿ : ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ

- Advertisement -
- Advertisement -

ಮೋದಿ ಷಾ ಅವರ ಮಟ್ಟಿಗೆ ಕೊರೋನಾ ಒಂದು ವರವಾಗಿ ಪರಿಣಮಿಸಿತು. ಅವರ ಮೇಲಿನ ಹೋರಾಟ ಮುಂದಕ್ಕೆ ಹೋಯಿತು. ಮುಂದಕ್ಕೆ ಹೋಯಿತೇ ಹೊರತು ನಿಲ್ಲುವುದಲ್ಲ. ಕೊರೋನಾ ಬರದಿದ್ದರೆ ಈ ವೇಳೆಗೆ ಮೋದಿ ಮತ್ತು ಷಾ ಜನಗಣತಿ ಆರಂಭಿಸುತ್ತಿದ್ದರು. ಯಾರು ಯಾರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಬಹುದೆಂದು home work ಆರಂಭಿಸುತ್ತಿದ್ದರು. ಇದರ ಜೊತೆಜೊತೆಗೇ ಮೋದಿ ಸರ್ಕಾರದ ವಿರುದ್ಧ ಘರ್ಷಣೆ ಆರಂಭವಾಗುತ್ತಿತ್ತು. ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಇತ್ಯಾದಿಗಳನ್ನು ಹಿಂಪಡೆಯಿರಿ ಎಂದು ದಲಿತರು, ಅದಿವಾಸಿಗಳು, ಮುಸ್ಲಿಮರು ದೇಶವ್ಯಾಪ್ತಿ ಚಳುವಳಿ ಆರಂಭಿಸುತ್ತಿದ್ದರು. ಕೊರೋನಾ ಸೈತಾನನ ಸಲುವಾಗಿ ಹಿಂದುತ್ವ ಮಂತಾಧರ ವಿರುದ್ಧ, ನಿಷ್ಕ್ರಿಯ ಸರ್ಕಾರದ ವಿರುದ್ಧ ನಡೆಯಬೇಕಿದ್ದ ಧರ್ಮಯುದ್ದವನ್ನು ಮುಂದೂಡಬೇಕಾದ ಅನಿವಾರ್ಯ ಸೃಷ್ಟಿಯಾಯಿತು.

ಮೋದಿ ಷಾ ನಮಗೆಲ್ಲ 5, 5 ಸಾವಿರ ಕೊಟ್ಟರು ಎಂದು ಜನ ಅಂದುಕೊಂಡಾರು ಎಂಬ ಬ್ರಾಂತಿ ಮೋದಿ-ಷಾಗಳಿಗಿದೆ. ಕೊರೋನಾ ನಮ್ಮ ಅನ್ನ ಕಿತ್ತುಕೊಂಡಿತು, ನಮ್ಮ ಉದ್ಯೋಗ ಕಿತ್ತು ಕೊಂಡಿತು, ನಾವು ನಮ್ಮೂರಿಗೆ ಹೋಗುತ್ತೇವೆ ಎಂದು ವಲಸೆ ಬಂದ ಕಾರ್ಮಿಕರು, ಅಸಂಖ್ಯಾತ ಅಸಂಘಟಿತ ಕಾರ್ಮಿಕರು ಈ ಸಂದರ್ಭದಲ್ಲಿ ಅನುಭವಿಸಿದ ಕಷ್ಟ ಕೋಟಲೆಗಳನ್ನು ಈ ಜನ್ಮದಲ್ಲಿ ಅವರು ಮರೆಯುವುದಿಲ್ಲ. ಸರ್ಕಾರ ಇವರಿಗೆ ಅಷ್ಟೊ ಇಷ್ಟೋ ಹಣ ನೀಡಿದ್ದರೆ ಅದು ಸರ್ಕಾರದ ಹಣವೇ ಹೊರತು ಅವರ ಔದಾರ್ಯವಲ್ಲ. ಸರ್ಕಾರ ತಾನು ಎರಚಿದ ಪುಡಿಕಾಸಿನ ನೆರವನ್ನು ಮತಗಳಿಕೆಯ ಸಾಧನವನ್ನಾಗಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ. ಆದರೆ ಈ ಬಗೆಯ ನೆರವು ನೀಡಿದ ಸರ್ಕಾರ ಶಿಸ್ತುಬದ್ಧನಾಗಿ ಎಲ್ಲ ತರದ ಬಡವರಿಗು ಹಂಚಿದ್ದರೆ ಭೇಷ್ ಅನ್ನಬಹುದಾಗಿತ್ತು. ಮೋದಿಯವರು ನಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಣ ಹಂಚಿದಾರಾದರೂ ಅದು ಬಕಾಸುರನ ಬಾಯಿಗೆ ಅರೆ ಮಜ್ಜಿಗೆ ಸುರಿದಂತೆ ಎಲ್ಲ ಜನಕ್ಕೂ ತಲುಪಲಿಲ್ಲ.

ಸರ್ಕಾರದ ವಿಚಾರದಲ್ಲಿ ಬಡಜನರ ಆಕ್ರೋಶ ಇದೆ. ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿರುವುದು ಇಡೀ ಸಮಾಜಕ್ಕೆ ಗೊತ್ತಾಗಿದೆ. ವಿವಿಧ ರಾಜ್ಯಗಳಿಂದ ಬಂದ ಅಸಂಘಟಿತ ಲಕ್ಷಾಂತರ ಕಾರ್ಮಿಕರು ತಮ್ಮ ಸಂಪಾದನೆ ನಿಂತುಹೋದ ಕಾರಣದಿಂದ ನಮ್ಮನ್ನು ನಮ್ಮ ಊರುಗಳಿಗೆ ಕಳುಹಿಸಿ ಕೊಡಿ ಎಂದು ದುಂಬಾಲು ಬಿದ್ದರು. ಕೊರೋನಾ ಆರಂಭವಾದ ಹೊತ್ತಿನಲ್ಲೆ ಪ್ರಾರ್ಥಿಸಿದರೂ ಸರ್ಕಾರ ಅವರಿಗೆ ಹೋಗಲು ತಡೆಹಾಕಿತು. ಕೊನೆಯ ಪಕ್ಷ ಕೊರೋನಾ ಸೋಂಕಿಲ್ಲದವರನ್ನಾದರು ಕಳುಹಿಸಬೇಕಾಗಿತ್ತು. ಸರ್ಕಾರ ಅವರನ್ನೆಲ್ಲ ಇಲ್ಲೆ ಬಂಧನದಲ್ಲಿಟ್ಟಂತೆ ಇಟ್ಟು ಅವರಿಗೆ ಅತ್ತ ಕೂಲಿಯೂ ಇಲ್ಲ ಇತ್ತ ಪರಿಹಾರವೂ ಇಲ್ಲ ಎಂದು ಸರ್ಕಾರ ಕೈಚೆಲ್ಲಿತು. ಇವರಲ್ಲಿ ಕೆಲವರಿಗೆ ಪರಹಾರ ಸಿಕ್ಕಿರುವುದೂ ಕೊರೋನಾ ಅಮರಿಕೊಂಡ 2-3 ತಿಂಗಳ ಮೇಲೆ? ಅವರು ಅರೆಜೀವ, ಕೊರೆಜೀವ ಇಟ್ಟುಕೊಂಡೆ ಆ ದಿನಗಳನ್ನು ಕಳೆದರು.

ಆನಂತರ 2 ತಿಂಗಳ ಮೇಲೆ ಕರ್ನಾಟಕದ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸುವ ನಿರ್ಧಾರಕ್ಕೆ ಸರ್ಕಾರ ಬಂತು. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಡಬಲ್ ಛಾರ್ಜ್ ವಸೂಲಿ ಮಾಡಿ ಎಂದು ಸರ್ಕಾರ ಹೇಳಿತು. ಅದಕ್ಕೆ ಪ್ರತಿಭಟನೆ ಬಂತು. ಆಗ ಸರ್ಕಾರ ಹೋಗುವ ಚಾರ್ಜ್ ಕೊಟ್ಟರೆ ಸಾಕು ಎಂದಿತು. ಕಾರ್ಮಿಕರು ನಾವೆಲ್ಲಿಂದ ತರೋಣ ಹಣ ಎಂದರು. ಸರ್ಕಾರ ತನ್ನ ಪಟ್ಟು ಬಿಡಲಿಲ್ಲ. ಆಗ ಕಾಂಗ್ರೆಸ್ ಸಂಸ್ಥೆಯವರು ನಾವು ಒಂದು ಕೋಟಿ ಚೆಕ್ ನೀಡುತ್ತೇವೆ ಅವರಿಂದ ಹಣ ವಸೂಲಿ ಮಾಡದೆ ಮರ್ಯಾದೆಯಿಂದ ಕಳುಹಿಸಿಕೊಡಿ ಎಂದು ಸವಾಲೊಡ್ಡಿತು. ಸರ್ಕಾರಕ್ಕೆ ಪೀಕಲಾಟ ಬಂತು.

ಟಿಕೆಟ್ ಹಣ ವಸೂಲಿ ಮಾಡದಿದ್ದರೆ ಕಾಂಗ್ರೆಸ್ಸಿನ ಒತ್ತಡಕ್ಕೆ ಸಿಲುಕಿದಂತಾಗುತ್ತದೆ. ವಸೂಲಿ ಮಾಡಿದರೆ ಆ ಜನ ಶಾಪ ಹಾಕುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮಗೆ ಮತ ಹಾಕದೆಯೂ ಇರಬಹುದು. ಇತ್ತ ಪುಲಿ ಅತ್ತ ದರಿ ಎನ್ನುವ ಸನ್ನಿವೇಶಕ್ಕೆ ಕಾಂಗ್ರೆಸ್ ನಮ್ಮನ್ನು ದೂಡಿದೆ. ಇದರ ಫಲವಾಗಿ ಕಾರ್ಮಿಕ ವರ್ಗ ಚುನಾವಣೆ ವೇಳೆಯಲ್ಲಿ ನಮ್ಮ ಎದುರು ಬಿದ್ದರೆ ಗತಿ ಏನು? ಎಂದು ಯೋಚಿಸಿ ಉಚಿತವಾಗಿ ಅವರನ್ನು ಸಾಗಿಸುವುದೇ ಬುದ್ಧಿವಂತಿಕೆ ಎಂಬ ತೀರ್ಮಾನಕ್ಕೆ ಬಂದರು. ಕಾಂಗ್ರೆಸ್ ಈ ಸಂದರ್ಭದಲ್ಲಿ ಟ್ರಂಪ್‌ಕಾರ್ಡ್ ಹಾಕಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸಿದಲ್ಲದೆ ಕಾರ್ಮಿಕರ ಕೃತಜ್ಞತೆಗೂ ಪಾತ್ರವಾಯಿತು.

ಕೊರೋನಾ ಆದಷ್ಟು ಬೇಗ ಮುಕ್ತಾಯಗೊಳ್ಳಲಿ ನಮ್ಮ ಮೋದಿ ಷಾ ವಿರುದ್ಧ ಹೋರಾಟ ಆರಂಭವಾಗಲಿ ಎಂದು ಆಶಿಸುತ್ತೇನೆ.


ಇದನ್ನೂ ಓದಿ: ಹಸಿದವರ ಮುಂದೆ ಮೃಷ್ಟಾನ್ನದ ಕತೆ ಹೇಳಿದವರು… 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...