Homeಅಂಕಣಗಳುಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

ಕಾಂಗ್ರೆಸ್ ಪಕ್ಷವನ್ನು ಮೌಲ್ಯಾಧಾರಿತವಾಗಿ ಮರುಕಟ್ಟಲು ಡಿಕೆಶಿ ಮುಂದಾಗಲಿ: ಎಚ್.ಎಸ್ ದೊರೆಸ್ವಾಮಿ

- Advertisement -
- Advertisement -

ಬಿ.ಎ ತೇಜಸ್ವಿಯವರು ಹಿಂದಿನ ವಾರದ ನ್ಯಾಯಪಥದಲ್ಲಿ ಕಾಂಗ್ರೆಸ್‍ಗೆ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷವನ್ನು ಎದುರಿಸುವ ಸಾಮಥ್ರ್ಯ ಹೊಂದಿದೆಯೇ? ಕಾಂಗ್ರೆಸ್ಸಿನ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಭಾಜಪವನ್ನು ಸೋಲಿಸುವ ಅರ್ಥಾತ್ ಮತದಾರರ ಮನ ಗೆಲ್ಲುವ ಸಾಮಥ್ರ್ಯ ಹೊಂದಿದ್ದಾರೆಯೇ ಎಂದು ಕೇಳುತ್ತಾರೆ. ಅವರು ಪ್ರಸ್ತಾಪಿಸಿರುವ ವಿಚಾರಗಳು ಇಂತಿವೆ.

ಭಾರತೀಯ ಜನತಾಪಕ್ಷ ಕ್ಯಾಡರ್ ಬೇಸ್ಡ್. ಅವರಿಗೆ ಹಿಂದುತ್ವ ಪ್ರತಿಪಾದನೆಯ ಕಾರ್ಯಕ್ರಮಗಳನ್ನು ಸೂಚಿಸಲು ಆರ್‍ಎಸ್‍ಎಸ್ ನಂತಹ ಕ್ಯಾಡರ್ ಬೇಸ್ಡ್ ಸಂಸ್ಥೆ ಮಾರ್ಗದರ್ಶಕನಂತಿದೆ. ಆರ್‍ಎಸ್‍ಎಸ್‍ನ್ನು ಬೆಂಬಲಿಸುವ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸೇನೆ, ಯುವ ಮೋರ್ಚಾ, ವಿದ್ಯಾರ್ಥಿ ಪರಿಷತ್, ಮಹಿಳಾ ಸಂಘಟನೆಗಳು ಇವೆ. ಬಿಜೆಪಿಗೆ ಮೋದಿ ಮತ್ತು ಷಾ ಅವರೇ ನಾಯಕರು. ಇನ್ನೆಲ್ಲರೂ ಅವರ ಆಜ್ಞಾಪಾಲಕರು. ಕಾಂಗ್ರೆಸಿನಲ್ಲಿ ಎಲ್ಲ ನಾಯಕರೂ ಇನ್ನೊಬ್ಬರ ಕಾಲೆಳೆಯುವವರೇ ಅಲ್ಲದೆ ಕೇಂದ್ರ ಕಾಂಗ್ರೆಸ್ಸಿನಲ್ಲಿ ಅಖಿಲ ಭಾರತದ ಮನ್ನಣೆಗೆ ಪಾತ್ರರಾದವರು ಯಾರೂ ಇಲ್ಲ. ಅಲ್ಲಿ ನಾಯಕತ್ವ ಬದಲಾಗಬೇಕೆಂಬ ಕೂಗು ಬಹುಕಾಲದಿಂದ ಇದೆ. ಆದರೆ ಹಾಗೆ ಕೂಗುವವರು ಬೆರಳೆಣಿಕೆಯಷ್ಟು ಜನ. ಮಿಕ್ಕವರೆಲ್ಲ ಸೋನಿಯ ಗಾಂಧಿಯವರ ಸೈಕೋ ಫ್ಯಾಂಟ್ಸ್ ಪರಿಸ್ಥಿತಿ ಹೀಗಿರುವಾಗ ನೂತನ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ಸನ್ನು ಹೇಗೆ ನಿಭಾಯಿಸುವರು ಎಂಬುದು ಒಂದು ಯಕ್ಷ ಪ್ರಶ್ನೆ. ಆರ್ಯ ವಿದ್ಯಾಶಾಲೆಯ ಆಡಳಿತವನ್ನು ಕಬ್ಜಾ ಮಾಡಿಕೊಂಡಷ್ಟು ಸುಲಭವಲ್ಲ, ಕಾಂಗ್ರೆಸ್ಸನ್ನು ನಿಭಾಯಿಸುವುದು ಎಂದು ತಿಳಿಯದಿರುವಷ್ಟು ಮೂರ್ಖರಲ್ಲ ಡಿ.ಕೆ ಶಿವಕುಮಾರ್ ಎಂದು ನಾನು ಭಾವಿಸಿದ್ದೇನೆ.

ಹೋರಾಟಗಾರರಾಗಿ ಎಂದೂ ಶಿವಕುಮಾರ್ ರಾಜಕೀಯದಲ್ಲಿ ಕಾಣಿಸಿಕೊಂಡಿಲ್ಲ. ರೆಸಾರ್ಟ್ ರಾಜಕೀಯ ಚೆನ್ನಾಗಿಯೇ ನಿರ್ವಹಿಸಬಲ್ಲರು ಎಂಬ ಅಭಿಪ್ರಾಯ ಕಾಂಗ್ರೆಸ್ಸಿಗರಲ್ಲಿದೆ. ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಇವರ ನಾಯಕತ್ವದ ಕಿತ್ತಾಟದಲ್ಲಿ, ಲಕ್ಷ್ಮಿ ಹೆಬ್ಬಾಳಕ್ಕರ್ ಪರ ವಹಿಸಲುಹೋದ ಡಿ.ಕೆ ಶಿವಕುಮಾರ್ ತಮ್ಮ ಪ್ರಯತ್ನವನ್ನು ಅರ್ಧಕ್ಕೇ ನಿಲ್ಲಿಸಿ ಹಿಂತಿರುಗಬೇಕಾಯಿತು.

ಯಡಿಯೂರಪ್ಪನವರು ಲಿಂಗಾಯತ ಮಠಗಳವರನ್ನು ಸರ್ಕಾರದ ಹಣಕೊಟ್ಟು ತಮ್ಮವರನ್ನಾಗಿ ಮಾಡಿಕೊಂಡಿದ್ದಾರೆ. ಅಲ್ಲದೆ ಅವರು ಲಿಂಗಾಯತರು. ಶಿವಕುಮಾರ್ ಒಕ್ಕಲಿಗ ಸಮುದಾಯವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಲ್ಲರೇ? ಈ ವಿಚಾರದಲ್ಲಿ ಪ್ರತಿಸ್ಪರ್ಧಿಯಾಗಿ ದೇವೇಗೌಡರು ಕುಮಾರಸ್ವಾಮಿ ಇದ್ದಾರೆ. ಚುನಾವಣೆಗಳಲ್ಲಿ ಒಕ್ಕಲಿಗ ಸಮುದಾಯವನ್ನು ತಮ್ಮ ಕಡೆಗೆ ಎಳೆದುಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಒಕ್ಕಲಿಗ ಅಭ್ಯರ್ಥಿಗಳು ಗೆಲ್ಲುವಂತೆ ಮಾಡುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಈ ವಿಚಾರದಲ್ಲಿ ದೇವೇಗೌಡರಿಗಿರುವಷ್ಟು ಚಾಕಚಕ್ಯತೆ ಡಿಕೆಶಿಯವರಿಗೆ ಇದೇಯೇ? ಬಿಜೆಪಿಯನ್ನು ಮಣಿಸುವುದಕ್ಕೆ ಇಷ್ಟೆಲ್ಲ ಅಡೆತಡೆಗಳಿದ್ದರೂ, ಅವುಗಳನ್ನೆಲ್ಲ ತಡೆಗಟ್ಟುವ ಮಾರ್ಗಗಳನ್ನು ಡಿ.ಕೆ ಶಿವಕುಮಾರ್ ಹುಡುಕಿಕೊಳ್ಳುವುದಾದರೆ, ಕಾಂಗ್ರೆಸ್ಸಿಗೆ ಅದರಲ್ಲೂ ಮುಖ್ಯವಾಗಿ ಕರ್ನಾಟಕ ಕಾಂಗ್ರೆಸ್ಸಿನ ಬಲವರ್ಧನೆಗೆ ಸಹಾಯಕವಾಗಬಹುದು. ನಿಷ್ಠಾವಂತ ಪ್ರಭಾವಶಾಲಿ ಜನಾನುರಾಗಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ಅವರಷ್ಟೇ ಶ್ರದ್ಧೆಯುಳ್ಳ ಕಾಂಗ್ರೆಸಿಗರ ಕ್ಯಾಡರ್‍ಗಳನ್ನು ರಚಿಸಲು ಡಿಕೆಶಿಗೆ ಸಾಧ್ಯವೇ?

ಕೋವಿಡ್ ಸಂದರ್ಭದಲ್ಲಿ ಮೋದಿ, ಷಾ ಮತ್ತು ಯಡಿಯೂರಪ್ಪನವರು ಎಡವಿದ್ದು ಎಲ್ಲಿ ಎನ್ನುವುದರ ಅಧ್ಯಯನ ಮಾಡಿ ಅದನ್ನು ಕರ್ನಾಟಕದ ಉದ್ದಗಲಕ್ಕೂ ಪ್ರಚಾರ ಮಾಡಬೇಕು. ಬಿಜೆಪಿ ಮೇಲಿನ ಮತದಾರರ ಒಲವನ್ನು ದೂರ ಮಾಡಲು ಯಾವ ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂಬುದನ್ನು ಕಾಂಗ್ರೆಸ್ ನಾಯಕರೆಲ್ಲ ಕೂಡಿಕೊಂಡು ತೀರ್ಮಾನಿಸಬೇಕು. ಚುನಾವಣೆಗಳಲ್ಲಿ ಹಣದ ಪ್ರಭಾವ, ಪಕ್ಷಾಂತರ ಪಿಡುಗು ಇವುಗಳನ್ನು ತಡೆಗಟ್ಟಲು ಕಠಿಣ ನಿಯಮಗಳನ್ನು ರೂಪಿಸಬೇಕೆಂದು ಚುನಾವಣಾ ಆಯೋಗದ ಮುಂದೆ ಧರಣಿ – ಸತ್ಯಾಗ್ರಹ ಹೂಡಬೇಕು. ಆಶ್ವಾಸನೆ ದೊರೆಯುವವರೆಗೂ ಈ ಸತ್ಯಾಗ್ರಹ ಮುಂದುವರೆಯಬೇಕು.

ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಹಳ ಕೆಟ್ಟದಾಗಿ ನಡೆದುಕೊಂಡಿವೆ. ಸರ್ವೋಚ್ಛ ನ್ಯಾಯಾಲಯ ಕೂಡ ಮೋದಿ ಸರ್ಕಾರದ ಮೇಲೆ ಚಾಟಿ ಬೀಸಿದೆ. ವಲಸೆ ಕಾರ್ಮಿಕರ ರಿಜಿಸ್ಟ್ರೇಷನ್ ಕಡ್ಡಾಯವಾಗಿ ಆಗಬೇಕು. ಅವರಿಗೆ ಕರ್ನಾಟಕದಲ್ಲಿ ಕೆಲಸದ ಭದ್ರತೆ, ಆರೋಗ್ಯ ಭದ್ರತೆ, ವಸತಿ ಸೌಕರ್ಯ ಎಲ್ಲವನ್ನೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒದಗಿಸುವ ಕೆಲಸವನ್ನು ಕೂಡಲೇ ಮಾಡಿಸಬೇಕು.

ಜನಸಾಮಾನ್ಯರನ್ನು ಕಾಡುವ ಬಡತನ, ಅಪೌಷ್ಠಿಕತೆ, ಅಸಮಾನತೆ ಮುಂತಾದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಯೋಜನೆಗಳನ್ನು ರೂಪಿಸಲು ಕಾಂಗ್ರೆಸ್ ಶಾಸಕರಿಗೆ ಸೂಕ್ತ ಮಾರ್ಗದರ್ಶನ ಮಾಡಬೇಕು. ಸರ್ಕಾರವನ್ನು ಈ ವಿಚಾರದಲ್ಲಿ ಮಣಿಸಬೇಕು. ಸಮಾಜವನ್ನು ಒಡೆಯುವ ಕಾನೂನುಗಳನ್ನು ಸರ್ಕಾರ ಹಿಂತೆಗೆದುಕೊಳ್ಳಲು, ಜೈಲ್ ಭರೋ ಕಾರ್ಯಕ್ರಮ, ಅಸಹಕಾರ ಚಳವಳಿಗಳನ್ನು ರೂಪಿಸಬೇಕು.
ಪ್ರತಿ ಜಿಲ್ಲೆಯಲ್ಲೂ ರಾಜಕೀಯ ಸಮ್ಮೇಳನಗಳನ್ನ ನಡೆಸಿ ಬಿಜೆಪಿ ಸರ್ಕಾರದ ವೈಫಲ್ಯತೆಗಳನ್ನು ಕುರಿತು ಚರ್ಚಿಸಬೇಕು. ಮತದಾರರ ಜಾಗೃತಿ ಕೆಲಸ ಮಾಡಬೇಕು. ಹೋರಾಟಕ್ಕೆ ಜನತೆಯನ್ನು ಅಣಿಮಾಡುವ ಕೆಲಸ ಕೂಡಲೇ ಆರಂಭವಾಗಬೇಕು. ಜೈಲ್‍ಭರೋ ಕಾರ್ಯಕ್ರಮವನ್ನು ಆರಂಭಿಸುವುದಕ್ಕೆ ಇದು ಸಕಾಲವಾಗಿದೆ.

ಸರ್ಕಾರದ ಭೂಸುಧಾರಣೆ ಶಾಸನ ತಿದ್ದುಪಡಿ, ಕೇಂದ್ರ ಸರ್ಕಾರ ಸಾರ್ವಜನಿಕ ಒಡೆತನದ ಸಂಸ್ಥೆಗಳ ಷೇರುಗಳನ್ನು ಮಾರಾಟ ಮಾಡಲು ಹೊರಟಿರುವುದು, ಕಲ್ಲಿದ್ದಲು ಗಣಿಗಳನ್ನು ಹರಾಜು ಮಾಡಲು ತೊಡಗಿರುವುದು ಮುಂತಾದ ಜ್ವಲಂತ ಆರ್ಥಿಕ ನೀತಿಯನ್ನು ತಡೆಗಟ್ಟಲು ಈ ವರ್ಷದ ಕೊನೆಯೊಳಗಾಗಿ ರಣತಂತ್ರ ರೂಪಿಸಬೇಕು.

ಡಿಕೆಶಿಯವರು ತಾವೊಬ್ಬರೇ ಬೆಳೆದುಕೊಳ್ಳಬೇಕೆಂದು ಬಯಸದೆ ಇದ್ದರೆ, ಅಹಂ ಬಿಟ್ಟರೆ ಕರ್ನಾಟಕದಲ್ಲಿ ಕಾಂಗ್ರೆಸ್ ಪತಾಕೆಯನ್ನು ಮತ್ತೆ ಹಾರಿಸಬಹುದು. ಗಾಂಧೀಜಿ ಕಾಂಗ್ರೆಸ್ಸನ್ನು ವಿಸರ್ಜನೆ ಮಾಡಿ ಅದನ್ನು ಲೋಕಸೇವಕ ಸಂಘ ಎಂಬ ರಾಜಕೀಯ ಕಾವಲುಗಾರ ಸಂಘಟನೆಯನ್ನಾಗಿ ಪರಿವರ್ತಿಸಬೇಕೆಂದು ಬಯಸಿದ್ದರು. ರಾಜಕೀಯ ಶುದ್ಧೀಕರಣ ಅವರ ಮುಖ್ಯ ಗುರಿಯಾಗಿತ್ತು.

ಈಗ ರಾಜಕೀಯ ಅನೈತಿಕತೆಯ ಗೂಡಾಗಿದೆ. ಜಾತಿ, ದ್ವೇಷ ಬೆಳೆಯುತ್ತಿದೆ. ದುಡ್ಡಿದ್ದವರು, ಭ್ರಷ್ಟಾದಿಧ್ರಷ್ಟರು, ಗೂಂಡಾಗಳು ರಾಜಕೀಯವನ್ನು ಕಬ್ಜಾ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್, ಜನರ ಸಮಸ್ಯೆಗಳ ನಿವಾರಣೆಗೆ ಟೊಂಕಕಟ್ಟಿ ನಿಂತ ಸಂಸ್ಥೆಯಾಗಿತ್ತು. ಜನಪರ ಹೋರಾಟದ ಏಕೈಕ ಸಂಸ್ಥೆಯಾಗಿತ್ತು. ಜನಸೇವೆಯೇ ಪರಮಧರ್ಮ ಎಂಬುದು ಕಾಂಗ್ರೆಸ್ಸಿನ ಏಕೈಕ ಗುರಿಯಾಗಿತ್ತು. ಡಿಕೆಶಿಯವರ ಅಧ್ಯಕ್ಷತೆಯಲ್ಲಿ ಅದು ಮತ್ತೆ ಮೌಲ್ಯಾಧಾರಿತ ಸಂಸ್ಥೆಯಾಗಿ ಪರಿವರ್ತನೆಯಾಗಲಿ ಎಂಬುದು ಎಲ್ಲರ ಹಾರೈಕೆ.


ಇದನ್ನು ಓದಿ: 6 ವರ್ಷಗಳಲ್ಲಿ 18 ಲಕ್ಷ ಕೋಟಿ ರೂ ಅಬಕಾರಿ ಸುಂಕ ಲೂಟಿ: ಸಿದ್ದರಾಮಯ್ಯ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...