Homeಮುಖಪುಟದಿಲ್ಜಿತ್ ತಾನು ಖಲಿಸ್ತಾನಿ ಅಲ್ಲ ಎಂದು ಸಾಬೀತುಪಡಿಸಲಿ: ಕಂಗನಾ ರಾಣಾವತ್‌

ದಿಲ್ಜಿತ್ ತಾನು ಖಲಿಸ್ತಾನಿ ಅಲ್ಲ ಎಂದು ಸಾಬೀತುಪಡಿಸಲಿ: ಕಂಗನಾ ರಾಣಾವತ್‌

- Advertisement -
- Advertisement -

ರೈತ ಪ್ರತಿಭಟನೆ ಕುರಿತು ಟ್ವಿಟರ್‌ನಲ್ಲಿ ವಾಕ್ಸಮರ ನಡೆಸುತ್ತಿದ್ದ ಪಂಜಾಬಿ ಗಾಯಕ-ನಟ ದಿಲ್ಜಿತ್‌ ದೋಸಾಂಜ್ ಅವರೊಂದಿಗೆ ಬಾಲಿವುಡ್ ನಟಿ ಕಂಗನಾ ರಾಣಾವತ್ ಮತ್ತೆ‌ ವಾಕ್ಸಮರಕ್ಕೆ ಇಳಿದಿದ್ದಾರೆ. ದಿಲ್ಜಿತ್‌ ತಾನು ‘ಖಲಿಸ್ತಾನಿಯಲ್ಲ’ ಎಂದು ಸಾಬೀತುಪಡಿಸಲಿ ಎಂದು ಕಂಗನಾ ಸವಾಲು ಹಾಕಿದ್ದಾರೆ.

“ನೀವು ಖಲಿಸ್ತಾನಿಯಲ್ಲ ಎಂದು ಒಮ್ಮೆ ಹೇಳಬೇಕೆಂದು ನಾನು ಅವರಿಗೆ ಬಹಿರಂಗವಾಗಿ ಸವಾಲು ಹಾಕಿದ್ದೆ. ಆದರೆ ಅವರು ಅದಕ್ಕೆ ಉತ್ತರಿಸಲಿಲ್ಲ. ಯುವಕರನ್ನು ದಾರಿ ತಪ್ಪಿಸಲಾಗುತ್ತಿದೆ, ಅವರಿಗೆ ಖಲಿಸ್ತಾನ್ ಬಗ್ಗೆ ಕನಸನ್ನು ಬಿತ್ತಲಾಗುತ್ತಿದೆ” ಎಂದು ಕಂಗನಾ ಹೇಳಿದ್ದಾರೆ.

ರಿಪಬ್ಲಿಕ್‌ ಟಿವಿಯ ಅರ್ನಾಬ್‌‌ ಗೋಸ್ವಾಮಿ ಅವರೊಂದಿಗಿನ ಸಂದರ್ಶನದಲ್ಲಿ ಕಂಗನಾ ಹಲವಾರು ಹೇಳಿಕೆಗಳನ್ನು ನೀಡಿದ್ದು, ಗ್ರೇಟಾ ಥನ್‌ಬರ್ಗ್ ಅವರು ತಪ್ಪಾಗಿ ಹಂಚಿಕೊಂಡಿದ್ದಾರೆಂದು ಹೇಳಲಾದ ‘ಪ್ರತಿಭಟನಾ ಟೂಲ್ಕಿಟ್’ ಅನ್ನು ಕೂಡಾ ಉಲ್ಲೇಖಿಸಿ ಮಾತನಾಡಿದ್ದಾರೆ.

ಇದನ್ನೂ ಓದಿ: ಹೋರಾಟನಿರತ ರೈತರ ಸ್ಪೆಟರ್, ಹೊದಿಕೆ‌ಗಾಗಿ 1 ಕೋಟಿ ರೂ. ದೇಣಿಗೆ ನೀಡಿದ ಗಾಯಕ ದಿಲ್ಜಿತ್​ ದೋಸಂಜ್

“ನಾವು ಯುವಕರನ್ನು ರಚನಾತ್ಮಕವಾಗಿ ತೊಡಗಿಸುವಂತಾಗಬೇಕೆ ಹೊರತು ರಾಷ್ಟ್ರದ ಹೊರೆಯಾಗಿಸಬಾರದು. ಟಿಕ್‌ಟಾಕ್‌ನಂತೆಯೇ ಟ್ವಿಟರ್‌ಗೆ ಕೂಡಾ ನಿಷೇಧ ಹೇರಬೇಕು. ಈ ದೇಶವನ್ನು ಕಮ್ಯುನಿಸ್ಟ್‌ ಕೊಳಕುನಿಂದ ಸ್ವಚ್ಛಗೊಳಿಸಬೇಕು” ಎಂದು ಕಂಗನಾ ಹೇಳಿದ್ದಾರೆ.

ನಾನು ಧ್ವನಿ ಎತ್ತಿದರ ಪರಿಣಾಮವಾಗಿ ಕಷ್ಟಕ್ಕೆ ಒಳಗಾಗಿದ್ದೇನೆ ಎಂದಿರುವ ಕಂಗನಾ, “ನನ್ನ ಮನೆಯನ್ನು ಒಡೆಯಲಾಗಿದೆ, ಅದು ಇನ್ನೂ ಹಾಗೆ ಇದೆ. ಇದರಿಂದಾಗಿ ನಾನು 10-15 ಕೋಟಿ ರೂ. ನಷ್ಟವನ್ನು ಅನುಭವಿಸಿದೆ. ನನ್ನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ, ಕನಿಷ್ಠ 6-7 ವಕೀಲರು ಆ ಪ್ರಕರಣಗಳನ್ನು ನಿರ್ವಹಿಸುತ್ತಿದ್ದಾರೆ. ದೇಶದ್ರೋಹದ ಹೊರತಾಗಿ ನನ್ನ ವಿರುದ್ಧ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ” ಎಂದು ಹೇಳಿದ್ದಾರೆ.

“ಜಾವೇದ್ ಅಖ್ತರ್ ಅವರು ಚಿತ್ರರಂಗದಿಂದ ನನಗೆ ಸಮನ್ಸ್ ಕಳುಹಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ನನ್ನ ವಿರುದ್ಧ ಮುಗಿಬಿದ್ದಿದ್ದಾರೆ. ನಾನೇನು ನಾಯಕಿಯಲ್ಲ, ನನಗೆ ಏನೂ ಇಲ್ಲ. ಅವರ ಅಧಿಕೃತ ಹ್ಯಾಂಡಲ್‌ಗಳು ಇಡೀ ದಿನ ನನ್ನನ್ನು ಟ್ರೋಲ್ ಮಾಡುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...