Homeಮುಖಪುಟದೊರೆಸ್ವಾಮಿಯವರು ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಲಿ: ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸೋಮಣ್ಣ

ದೊರೆಸ್ವಾಮಿಯವರು ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಲಿ: ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸೋಮಣ್ಣ

ವಿಜಯಪುರದಲ್ಲಿ ಇಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಸನಗೌಡ ಯತ್ನಾಳ್, ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ, ದೇಶ ವಿರೋಧಿಗಳಿಗೆ ಬಿರಿಯಾನಿ ತಿನ್ನಿಸುವ ಕಾಲ ಮುಗೀತು. ಇನ್ನೇನಿದ್ದರೂ ಕಂಡಲ್ಲಿ ಗುಂಡು ಹೊಡೆಯುತ್ತೇವೆ ಎಂದಿದ್ದಾರೆ.

- Advertisement -
- Advertisement -

ಯತ್ನಾಳ್‌ ಏನು ಹೇಳಿದ್ದಾರೋ ಗೊತ್ತಿಲ್ಲ. ಆದರೆ ದೊರೆಸ್ವಾಮಿಯವರು ಸಹ ತಮ್ಮ ನಾಲಿಗೆ ಬಿಗಿಹಿಡಿದು ಮಾತನಾಡಬೇಕು. ಭಾಷೆ ತನ್ನತನವನ್ನು ಎತ್ತಿ ತೋರಿಸುತ್ತದೆ ಎಂದು ಹೇಳುವ ಮೂಲಕ ವಸತಿ ಸಚಿವ ವಿ.ಸೋಮಣ್ಣ ದೊರೆಸ್ವಾಮಿಯವರನ್ನು ಟೀಕಿಸಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೊರೆಸ್ವಾಮಿಯವರು ನಮ್ಮ ತಾಲ್ಲೂಕಿನವರು, ನಮ್ಮ ಊರಿನವರು. ಆದರೆ ನೂರು ವರ್ಷ ವಯಸ್ಸಾಗಿದೆ. ಇಷ್ಟು ದಿನ ದೇವರು ಇಷ್ಟು ದಿನ ಇರೋಕೆ ಬಿಟ್ಟಿದ್ದಾನೆ. ನಾನು ಈ ದೇಶದಲ್ಲಿ ಇರೋದು. ಈ ಕರ್ಮಭೂಮಿಯಲ್ಲಿ ಒಂದು ದೊಡ್ಡ ಇತಿಹಾಸವಿದೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳವೇ ಬೇಡವೋ ನೀವೆ ಹೇಳಿ ಎಂದು ಅವರು ಪ್ರಶ್ನಿಸಿದ್ದಾರೆ.

ಯತ್ನಾಳ್‌

ದೊರೆಸ್ವಾಮಿಯವರು ನಾಲಿಗೆ ಬಿಗಿಹಿಡಿದು ಮಾತಾಡಲಿ. ಯತ್ನಾಳ್‌ ಹೇಳಿಕೆ ಸಮರ್ಥಿಸಿಕೊಂಡ ವಸತಿ ಸಚಿವ ವಿ.ಸೋಮಣ್ಣ

Posted by Naanu Gauri on Wednesday, February 26, 2020

ನಮಗೂ ಮಾತನಾಡಲ್ಲಿಕ್ಕೆ ಬರುತ್ತದೆ. ಯತ್ನಾಳ್‌ ಭಾವಾವೇಶದಲ್ಲಿ ಮಾತನಾಡಿರಬಹುದು. ಆದರೆ ಅದಕ್ಕೆ ಅವಕಾಶ ಮಾಡಿಕೊಟ್ಟವರು ಯಾರು? ನಾನು ಯಾವುದು ಸರಿ ಯಾವುದು ತಪ್ಪು ಎಂದು ನಾನು ಹೇಳುವುದಿಲ್ಲ. ನನಗೆ ಎಷ್ಟು ಮೈ ಉರಿಯುತ್ತದೆಯೆಂದರೆ, ಒಳ್ಳೇ ಕೆಲಸ ಮಾಡುತ್ತಿರುವವರು ನೂರಾರು ಜನ ಇದ್ದಾರೆ ಅಲ್ಲವೇ? ಎಂದು ಪರೋಕ್ಷವಾಗಿ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ದೇಶದ್ರೋಹದ ಘೋಷಣೆ ಕೂಗಿದರೆ ಇನ್ನು ಮುಂದೆ ಪೊಲೀಸರು ಬೇಕಿಲ್ಲ. ಜನರೇ ಕೈಗೆ ಬಡಿಗೆಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಪ್ರಚೋದನೆ ಸಹ ನೀಡಿದ್ದಾರೆ.

ಇನ್ನೊಂದೆಡೆ ವಿಜಯಪುರದಲ್ಲಿ ಇಂದು ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಸನಗೌಡ ಯತ್ನಾಳ್, ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ, ದೇಶ ವಿರೋಧಿಗಳಿಗೆ ಬಿರಿಯಾನಿ ತಿನ್ನಿಸುವ ಕಾಲ ಮುಗೀತು. ಇನ್ನೇನಿದ್ದರೂ ಕಂಡಲ್ಲಿ ಗುಂಡು ಹೊಡೆಯುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್‌ ನನ್ನ ವಿರುದ್ಧ ಮಾತನಾಡುವ ನೈತಿಕತೆ ಹೊಂದಿಲ್ಲ. ದೇಶದ್ರೋಹಿಗಳ ವಿರುದ್ಧ ಬೇಕಾದರೆ ಹೋರಾಟ ಮಾಡಲಿ ಎಂದು ಯತ್ನಾಳ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...