Homeಮುಖಪುಟಮಮತಾ ಬ್ಯಾನರ್ಜಿ ನನ್ನ ವಿರುದ್ಧ ಒಮ್ಮೆ ಸ್ಪರ್ಧಿಸಲಿ: ಅಧೀರ್ ರಂಜನ್ ಚೌಧರಿ ಸವಾಲು

ಮಮತಾ ಬ್ಯಾನರ್ಜಿ ನನ್ನ ವಿರುದ್ಧ ಒಮ್ಮೆ ಸ್ಪರ್ಧಿಸಲಿ: ಅಧೀರ್ ರಂಜನ್ ಚೌಧರಿ ಸವಾಲು

- Advertisement -
- Advertisement -

ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಅಧೀರ್ ರಂಜನ್ ಚೌಧರಿ ಅವರು ಸೋಮವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಹ್ರಾಂಪುರದಿಂದ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಸವಾಲು ಹಾಕಿದ್ದಾರೆ.

ಮಮತಾ ಬ್ಯಾನರ್ಜಿಯವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರನ್ನು ಬೆಹ್ರಾಂಪೋರ್ ಕ್ಷೇತ್ರದಿಂದ ಕಣಕ್ಕಿಳಿಸಿದ ಒಂದು ದಿನದ ನಂತರ ಅಧೀರ್ ರಂಜನ್ ಅವರ ಹೇಳಿಕೆ ಬಂದಿದೆ. ಯೂಸುಫ್ ಪಠಾಣ್ ಗುಜರಾತ್‌ನ ವಡೋದರ ಮೂಲದವರಾಗಿದ್ದು, ಈ ಹಿಂದೆ ಐಪಿಎಲ್ ತಂಡದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಪರ ಆಡಿದ್ದರು.

ಯೂಸುಫ್ ಪಠಾಣ್ ಅವರ ಹೆಸರು ಘೋಷಣೆಯ ಕುರಿತು ಮಾತನಾಡಿದ ಅಧೀರ್ ರಂಜನ್ ಚೌಧರಿ, ‘ಭಾರತದ ಯಾವುದೇ ನಾಗರಿಕರು ದೇಶದ ಯಾವುದೇ ಭಾಗದಲ್ಲಿ ಮತ ಚಲಾಯಿಸಬಹುದು. ಮಮತಾ ಅವರೇ ಗೋವಾದಲ್ಲಿ ಯಾವುದೇ ತೊಂದರೆಯಿಲ್ಲದೆ ಹೋಗಿ ಸ್ಪರ್ಧಿಸಬಹುದಿತ್ತು. ಮಮತಾ ಬ್ಯಾನರ್ಜಿ ಅವರು ಒಮ್ಮೆ ನನ್ನ ವಿರುದ್ಧ ನಿಲ್ಲಬೇಕೆಂದು ನಾನು ಬಯಸುತ್ತೇನೆ. ನಾನು ಸವಾಲು ಹಾಕುತ್ತೇನೆ; ಅವರು ನನ್ನ ವಿರುದ್ಧ ಸ್ಪರ್ಧಿಸಲಿ ಅಥವಾ ನನ್ನ ವಿರುದ್ಧ ‘ಖೋಕಾಬಾಬು’ (ಅಭಿಷೇಕ್ ಬ್ಯಾನರ್ಜಿಯನ್ನು ಗೇಲಿ ಮಾಡಿ) ಕಳುಹಿಸಬೇಕು’ ಎದು ಲೇವಡಿ ಮಾಡಿದರು.

ಮಾರ್ಚ್ 10 ರಂದು ಮಾತನಾಡಿದ ಅಧೀರ್ ರಂಜನ್, ತೃಣಮೂಲ ಕಾಂಗ್ರೆಸ್ ಯೂಸುಫ್ ಪಠಾಣ್ ಅವರನ್ನು ಗೌರವಿಸಲು ಬಯಸಿದರೆ, ಅವರು ಹೊರಗಿನವರನ್ನು ಕಣಕ್ಕಿಳಿಸುವ ಬದಲು ರಾಜ್ಯಸಭೆಗೆ ಕಳುಹಿಸಬೇಕಿತ್ತು’ ಎಂದಿದ್ದರು.

“ಯೂಸುಫ್ ಪಠಾಣ್ ಬಗ್ಗೆ ಮಮತಾ ಬ್ಯಾನರ್ಜಿ ಅವರಿಗೆ ಒಳ್ಳೆಯ ಉದ್ದೇಶವಿದ್ದರೆ, ಅವರು ಗುಜರಾತ್‌ನಲ್ಲಿ (ಯೂಸುಫ್ ಪಠಾಣ್) ಅವರಿಗೆ (ಯೂಸುಫ್ ಪಠಾಣ್) ಸ್ಥಾನಕ್ಕಾಗಿ ಮೈತ್ರಿ ಪಕ್ಷಗಳನ್ನು ಕೇಳುತ್ತಿದ್ದರು. ಆದರೆ ಇಲ್ಲಿ ಪಶ್ಚಿಮ ಬಂಗಾಳದಲ್ಲಿ, ಸಾಮಾನ್ಯ ಜನರನ್ನು ಧ್ರುವೀಕರಿಸಲು ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿಗೆ ಸಹಾಯ ಮಾಡಲು, ಇದರಿಂದ ಕಾಂಗ್ರೆಸ್ ಅನ್ನು ಸೋಲಿಸಬಹುದು’ ಎಂದು ಅಧೀರ್ ರಂಜನ್ ಹೇಳಿದ್ದಾರೆ.

ಅಧೀರ್ ರಂಜನ್ ಚೌಧರಿ ಅವರು 1999 ರಿಂದ ಮುಸ್ಲಿಂ ಬಹುಸಂಖ್ಯಾತ ಜನಸಂಖ್ಯೆಯನ್ನು ಹೊಂದಿರುವ ಬೆಹ್ರಾಂಪುರದಿಂದ ಸಂಸತ್ ಸದಸ್ಯರಾಗಿದ್ದಾರೆ. ‘ಇಂಡಿಯಾ ಮೈತ್ರಿಕೂಟದಲ್ಲಿ ಮುಂದುವರಿದರೆ ಪ್ರಧಾನಿ ಮೋದಿ ಅತೃಪ್ತರಾಗುತ್ತಾರೆ ಎಂಬ ಭಯದಲ್ಲಿ ಮಮತಾ ಬ್ಯಾನರ್ಜಿ ಇದ್ದಾರೆ. ನನ್ನ ಬಗ್ಗೆ ಅತೃಪ್ತರಾಗಬೇಡಿ, ನಾನು ಬಿಜೆಪಿ ವಿರುದ್ಧ ಹೋರಾಡಲು ನಿಂತಿಲ್ಲ ಎಂದು ವಿಪಕ್ಷಗಳ ಮೈತ್ರಿಕೂಟದಿಂದ ಬೇರ್ಪಡುವ ಮೂಲಕ ಅವರು ಪಿಎಂಒಗೆ ಸಂದೇಶವನ್ನು ಕಳುಹಿಸಿದ್ದಾರೆ’ ಎಂದರು.

ಮಾರ್ಚ್ 10 ರಂದು ತೃಣಮೂಲ ಕಾಂಗ್ರೆಸ್ ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿತು. ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಸೀಟು ಹಂಚಿಕೆಯ ಮಾತುಕತೆ ವಿಫಲವಾದ ನಂತರ ಮಮತಾ ಬ್ಯಾನರ್ಜಿ ಅವರ ಪಕ್ಷವು ಸಾರ್ವತ್ರಿಕ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲು ನಿರ್ಧರಿಸಿತ್ತು.

ಕುತೂಹಲಕಾರಿಯಾಗಿ, ತೃಣಮೂಲ ಕಾಂಗ್ರೆಸ್ ವಿಫಲ ಮಾತುಕತೆಗೆ ಅಧೀರ್ ರಂಜನ್ ಚೌಧುರಿ ಅವರನ್ನು ದೂಷಿಸಿದ್ದು, ಎರಡು ಪಕ್ಷಗಳ ನಡುವಿನ ಸಂಬಂಧದಲ್ಲಿ ಅವರನ್ನು ‘ದೊಡ್ಡ ಅಡಚಣೆ’ ಎಂದು ಕರೆದಿದೆ.

ಇದನ್ನೂ ಓದಿ; ಇಂದಿನಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ; ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...