Homeಕರ್ನಾಟಕಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಜನರಿಗೆ ಪಾಠ ಹೇಳುವ ಮೊದಲು ಮೋದಿ ಆತ್ಮಾವಲೋಕನ ಮಾಡಿಕೊಳ್ಳಲಿ: ಸಿದ್ದರಾಮಯ್ಯ

ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಖರ್ಚಿನ ವಿವರಗಳೇನು?

- Advertisement -
- Advertisement -

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ಮೋದಿಯವರು ಇಂದಿನ ತಮ್ಮ ಭಾಷಣದಲ್ಲಿ ದೇಶದ ಜನತೆಗೆ ತಿಳಿಸಬೇಕಾಗಿತ್ತು” ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು ಎಂದು ಸಿದ್ದು ಹೇಳಿದ್ದಾರೆ.

ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ. ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನ ನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ರೂ.20 ಲಕ್ಷ ಕೋಟಿ ಪ್ಯಾಕೇಜ್ ಏನಾಯಿತು? ಯಾರಿಗೆ ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದಿದ್ದಾರೆ.

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು. ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು 7 ರಿಂದ 5 ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಲಾಕ್‌ಡೌನ್‌ ಮುಗಿದಿದೆ, ಆದರೆ ಕೊರೊನಾ ಮುಗಿದಿಲ್ಲ: ಪ್ರಧಾನಿ ಮೋದಿ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...