Homeಮುಖಪುಟಮೊದಲು ನಿತೀಶ್ ಕುಮಾರ್ 'ಲವ್ ಜಿಹಾದ್' ಕಾಯ್ದೆ ತರಲಿ, ನಾವು ನಂತರ ಯೋಚಿಸುತ್ತೇವೆ: ಸಂಜಯ್ ರಾವತ್

ಮೊದಲು ನಿತೀಶ್ ಕುಮಾರ್ ‘ಲವ್ ಜಿಹಾದ್’ ಕಾಯ್ದೆ ತರಲಿ, ನಾವು ನಂತರ ಯೋಚಿಸುತ್ತೇವೆ: ಸಂಜಯ್ ರಾವತ್

ಆರ್ಥಿಕ ಕುಸಿತ, ನಿರುದ್ಯೋಗ ಮತ್ತು ಬೆಲೆ ಏರಿಕೆ ಇಂದಿನ ಪ್ರಮುಖ ವಿಷಯಗಳಾಗಿವೆ ಎಂದು ನಾವು ಭಾವಿಸುತ್ತೇವೆ - ಸಂಜಯ್ ರಾವತ್

- Advertisement -
- Advertisement -

ಬಿಹಾರ ಸಿಎಂ ನಿತೀಶ್ ಕುಮಾರ್ ಸರ್ಕಾರ ಮೊದಲು ‘ಲವ್ ಜಿಹಾದ್’ ಕಾಯ್ದೆ ತರಲಿ, ನಂತರ ಮಹಾರಾಷ್ಟ್ರ ಸರ್ಕಾರ ಅದರ ಬಗ್ಗೆ ಅಧ್ಯಯನ ನಡೆಸುತ್ತದೆ ಎಂದು ಶಿವಸೇನೆ ಸಂಸದ ಮತ್ತು ವಕ್ತಾರ ಸಂಜಯ್ ರಾವತ್ ತಿಳಿಸಿದ್ದಾರೆ.

ಮುಂಬೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರಾಜ್ಯದ ಬಿಜೆಪಿಯ ಕೆಲ ಪ್ರಮುಖ ನಾಯಕರು ರಾಜ್ಯದಲ್ಲಿ ಲವ್ ಜಿಹಾದ್ ಕಾಯ್ದೆ ತರಬೇಕೇಂದು ಮಾತನಾಡುತ್ತಿದ್ದಾರೆ. ಅವರು ತಾವು ಆಳ್ವಿಕೆಯಲ್ಲಿರುವ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶಗಳಲ್ಲಿ ಈ ಕಾಯ್ದೆಯನ್ನು ಜಾರಿಗೊಳಿಸಲಿ. ಎಲ್ಲಕ್ಕಿಂತ ಬಿಹಾರದಲ್ಲಿ ಮೊದಲು ಜಾರಿಗೊಳಿಸಲಿ. ನಂತರ ನಾವು ಅದರ ಬಗ್ಗೆ ಯೋಚಿಸುತ್ತೇವೆ’ ಎಂದಿದ್ದಾರೆ.

ಆರ್ಥಿಕ ಕುಸಿತ, ನಿರುದ್ಯೋಗ ಮತ್ತು ಬೆಲೆ ಏರಿಕೆ ಇಂದಿನ ಪ್ರಮುಖ ವಿಷಯಗಳಾಗಿವೆ ಎಂದು ನಾವು ಭಾವಿಸುತ್ತೇವೆ. ಆದರೆ ಲವ್ ಜಿಹಾದ್ ಸಮಸ್ಯೆಯನ್ನು ಹೆಚ್ಚು ಮುಖ್ಯವೆಂದು ಅವರು ಭಾವಿಸಿದರೆ ಅವುಗಳನ್ನು ಚರ್ಚಿಸುತ್ತೇವೆ ಎಂದು ಸಂಜಯ್ ರಾವತ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಕಳೆದ ವಾರ ರಾಜ್ಯದಲ್ಲಿಯೂ ಲವ್ ಜಿಹಾದ್ ಕಾಯ್ದೆ ತರಬೇಕೆಂದು ಒತ್ತಾಯಿಸಿದ್ದರು. ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಬಿಜೆಪಿ ಸರ್ಕಾರಗಳು ಈ ಕಾಯ್ದೆ ತರುತ್ತೇವೆಂದು ಘೋಷಿಸಿದ್ದಾರೆ. ಹಿಂದೂ ಮಹಿಳೆಯರು ಮುಸ್ಲಿಂ ಪುರುಷರನ್ನು ಪ್ರೀತಿಸಿ ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುತ್ತಾರೆ. ಅದನ್ನು ತಡೆಗಟ್ಟಲು ಈ ಕಾನೂನು ಅಗತ್ಯವಿದೆ ಎಂದು ಬಿಜೆಪಿ ವಾದಿಸುತ್ತಿದೆ.

ಆದರೆ ಫೆಬ್ರವರಿ 4 ರಂದು, ಮೋದಿ ಸರ್ಕಾರವು ಸಂಸತ್ತಿನಲ್ಲಿ ಲವ್‌ ಜಿಹಾದ್‌ ವಿಷಯದ ಬಗ್ಗೆ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. “ಲವ್ ಜಿಹಾದ್ ಎಂಬ ಪದವನ್ನು ಈಗಿರುವ ಯಾವುದೇ ಕಾನೂನುಗಳ ಅಡಿಯಲ್ಲಿ ವ್ಯಾಖ್ಯಾನಿಸಲಾಗಿಲ್ಲ. ಅಲ್ಲದೇ ಇದುವರೆಗೂ ‘ಲವ್ ಜಿಹಾದ್’ ಪ್ರಕರಣವನ್ನು ಯಾವುದೇ ಕೇಂದ್ರ ಏಜೆನ್ಸಿಗಳು ವರದಿ ಮಾಡಿಲ್ಲ” ಎಂದು ಬಿಜೆಪಿ ಮುಖಂಡ ಮತ್ತು ಗೃಹ ವ್ಯವಹಾರಗಳ ಸಚಿವ ಜಿ. ಕಿಶನ್ ರೆಡ್ಡಿ ಲೋಕಸಭೆಗೆ ತಿಳಿಸಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ಬಿಜೆಪಿಯ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿದ್ದಾರೆ. ’ಲವ್ ಜಿಹಾದ್’ ಎಂಬುದು ದೇಶ ಒಡೆಯಲು ಬಿಜೆಪಿ ಸೃಷ್ಟಿಸಿದ ಪದ ಎಂದು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ವಾದಿಸಿದರೆ, ‘ರಾಜ್ಯದಲ್ಲಿ ಲವ್ ಜಿಹಾದ್ ಕಾನೂನು ತರಲು ಸಾಧ್ಯವಿಲ್ಲ’ ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಇದುವರೆಗೂ ಯಾವುದೇ ಲವ್‌ ಜಿಹಾದ್‌ ನಡೆದಿಲ್ಲವೆಂದ ಮೋದಿ ಸರ್ಕಾರ : ಇದು ಬಿಜೆಪಿ V/S ಬಿಜೆಪಿಯ ಕದನ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...