Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...