Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...