Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...