Homeಅಂಕಣಗಳುದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

ದೇಶದ ಮುಸ್ಲಿಮೇತರರು ಬೇರೆ ಕಣ್ಣು ಪಡೆಯಲಿ; ನ್ಯಾಯಪಥ ಸಂಪಾದಕೀಯ

- Advertisement -
- Advertisement -

ಈ ಸಂಚಿಕೆಯಲ್ಲಿ ಡಾ.ಕಫೀಲ್‌ ಖಾನ್‌ರವರ ಸಂದರ್ಶನವಿದೆ. ಇವರೊಂದು ಸೋಜಿಗ. ಜೆಎನ್‌ಯು ಕಾಣೆಯಾದ ವಿದ್ಯಾರ್ಥಿ ನಜೀಬ್‌ನ ತಾಯಿಯಂತೆ. ಇವರು ಕೆಲಕಾಲದ ಹಿಂದೆ ʼಸುತ್ತಲಿನ ನಾಲ್ಕು ಜನರಿಗೆ ಒಳ್ಳೆಯದುʼ ಮಾಡಿಕೊಂಡು ತಮ್ಮ ಪಾಡಿಗೆ ಇದ್ದವರು. ಆದರೆ ತಮ್ಮ ಬದುಕಿನಲ್ಲಾದ ʼಬೇರೆಯವರಾದರೆ ತತ್ತರಿಸಿ ಮೂಲೆಯಲ್ಲಿ ಕೂತುಬಿಡುವʼ ಭಯಾನಕ ಘಟನೆಗಳ ನಂತರ ಗಟ್ಟಿಯಾದವರು. ಕಫೀಲ್‌ ಖಾನ್‌ ಗೋರಖಪುರದ ತಾನು ಕೆಲಸ ಮಾಡುತ್ತಿದ್ದ ಬಿಆರ್‌ಡಿ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಕೊರತೆಯಿಂದ ಮಕ್ಕಳ ಸರಣಿ ಸಾವುಗಳಾಗುತ್ತಿದ್ದಾಗ ಸ್ವಂತ ಖರ್ಚಿನಿಂದ ನೆರವಾಗಿದ್ದರು. ಆಕ್ಸಿಜನ್‌ ಕೊರತೆಗೆ ಕಾರಣವಾಗಿದ್ದ ಸರ್ಕಾರವು, ಅಂತಹ ವ್ಯಕ್ತಿಯನ್ನು ಅಮಾನತು ಮಾಡಿತು, ಬಂಧಿಸಿತು.

ಬಂಧನದ ನಂತರ ಹೊರಬಂದ ವ್ಯಕ್ತಿ ಮತ್ತಷ್ಟು ಜನರ ಸೇವೆಯಲ್ಲಿ ತೊಡಗಿದರು. ಶಾಂತಿ ಸಾರುವ ಮಾತುಗಳನ್ನಾಡುತ್ತಾ ಹೋದವರನ್ನು, ಗಲಭೆಗೆ ಪ್ರಚೋದನೆ ನೀಡಿದರು ಎಂದು ಮತ್ತೆ ಬಂಧಿಸಲಾಯಿತು. ಬಂಧನದಿಂದ ಮತ್ತೆ ಹೊರಬಂದ ಮೇಲೆ ʼನನಗೆ ದೇಶದ ಜನರ ಸೇವೆ ಮಾಡಲು ಅವಕಾಶ ಕೊಡಿʼ ಎಂದು ಕೇಳಿದರು. ಇಡೀ ವ್ಯವಸ್ಥೆಯ ಮೇಲೆ, ದೇಶದ ಜನರ ಮೇಲೆ ಸಿಟ್ಟು ಮಾಡಿಕೊಂಡು ʼಎಲ್ಲಾ ಹಾಳಾಗಲಿʼ ಎನ್ನಬೇಕು, ಇಲ್ಲವೇ ಆತ್ಮಹತ್ಯೆ ಮಾಡಿಕೊಳ್ಳಬೇಕು ಎನ್ನುವ ವಾತಾವರಣವಿರುವೆಡೆ ಈ ಜೀವ ಪ್ರೀತಿ ಹೇಗೆ ಸಾಧ್ಯವಾಗಿದೆ?

ಡಾ.ಕಫೀಲ್ ಖಾನ್

ನಿನ್ನೆ ರಾತ್ರಿ ಹುಬ್ಬಳ್ಳಿಯಲ್ಲಿ ಒಬ್ಬರ ಭೇಟಿಯಾಯಿತು. ಮೂರು ಮಹಾನಗರಗಳಲ್ಲಿ ದೊಡ್ಡ ಹೋಟೆಲುಗಳ ಒಡೆಯರಾದ ಅಶ್ರಫ್‌ ಅಲಿಯವರು ಭಾರೀ ದೊಡ್ಡ ಕುಳ. ಅವರು ನಿನ್ನೆ ರಾತ್ರಿ ಖಾಸಗಿ ಆಸ್ಪತ್ರೆಗೆ ಸೇರಲಾಗದ ಜನರಿಗೆ ಸರ್ಕಾರೀ ಆಸ್ಪತ್ರೆಯಲ್ಲಿ ದಾಖಲಿಸಲು ಒದ್ದಾಡುತ್ತಿದ್ದರು. ಆಕ್ಸಿಜನ್‌ ಇರುವ ಬೆಡ್‌ ಇಲ್ಲ ಎಂದು ವೈದ್ಯರು ಹೇಳಿದಾಗ, ತಾನೇ ವಾರ್ಡ್‌ ವಾರ್ಡ್‌ ಸುತ್ತಾಡಿ, ಅಲ್ಲೊಂದು ಬೆಡ್‌ ಹುಡುಕಿ ರೋಗಿಯನ್ನು ದಾಖಲಿಸಿ ನಂತರ ನಮ್ಮನ್ನು ನೋಡಲು ಬಂದರು. ಹೋಟೆಲ್‌ಗಳನ್ನು ಕೊರೊನಾ ಐಸೋಲೇಷನ್‌ ವಾರ್ಡುಗಳಾಗಿ ಮಾಡಿ ದುಡ್ಡು ಮಾಡುವ ಸಂದರ್ಭ ಬರುವ ಮುಂಚೆಯೇ ತಮ್ಮ ಹೋಟೆಲ್‌ಅನ್ನು ಉಚಿತವಾಗಿ ಅದಕ್ಕಾಗಿ ಬಿಟ್ಟುಕೊಟ್ಟಿದ್ದರು. ಇದೆಲ್ಲಾ ಮಾಡಲು ಪ್ರೇರಣೆ ಏನು?

ಕೊರೊನಾದಿಂದ ಗುಣಮುಖನಾಗಿ ಬಂದ ನಾನು ಪ್ಲಾಸ್ಮಾ ಕೊಡಬಹುದು. ಆದರೆ, ಸ್ವಲ್ಪ ಸಮಯವೂ ಇಲ್ಲದಂತಹ ಸುತ್ತಾಟ ಮತ್ತು ಪ್ಲಾಸ್ಮಾ ಥೆರಪಿ ಬಗ್ಗೆ ವಿಶ್ವಾಸ ಇಲ್ಲದಿರುವ ಕಾರಣದಿಂದ ಅಷ್ಟು ಗಮನ ಹರಿಸಲಿಲ್ಲ. ಆದರೆ, ಯಾವುದೋ ಆಸ್ಪತ್ರೆಯಲ್ಲಿ ಯಾರೋ ಬಡ ರೋಗಿಗೆ ಪ್ಲಾಸ್ಮಾ ಹೊಂದಿಸಲು ಪ್ರಯತ್ನಿಸುತ್ತಿರುವ ಮರ್ಸಿ ಮಿಷನ್‌ (ಸ್ವಯಂಸೇವಕ ಮುಸ್ಲಿಂ ಯುವಕರ ಗುಂಪು) ವಾಲಂಟಿಯರ್‌ಗಳು ನಾನು ಪ್ಲಾಸ್ಮಾ ಕೊಡುವತನಕ ಬಿಡುವಂತೆ ಕಾಣುತ್ತಿಲ್ಲ. ಆ ಕಡೆ ಇರುವ ರೋಗಿಯನ್ನು ಅವರು ಧರ್ಮ ನೋಡಿ ನೆರವು ಕೊಡುತ್ತಿಲ್ಲ ಎಂಬುದು ಮಾತ್ರ ಖಚಿತ. ಬೆಂಗಳೂರಿನಲ್ಲಿ ಕ್ರಿಶ್ಚಿಯನ್‌, ಹಿಂದೂ ಜನರ ಅಂತ್ಯ ಸಂಸ್ಕಾರವನ್ನೂ, ಸತ್ತವರ ನಂಬಿಕೆಗನುಗುಣವಾಗಿ ಮಾಡಿದವರು. ಇವರನ್ನು ಕೈ ಹಿಡಿದು ನಡೆಸುತ್ತಿರುವುದು ಏನು?

ಅವರ ಪ್ರಕಾರ ಅವರು ಧರ್ಮದ ಕಾರ್ಯ ಮಾಡುತ್ತಿದ್ದಾರೆ. ಈ ದೇಶದ ಸಹಮನುಷ್ಯರಿಗೆ ಸಹಾಯ ಮಾಡುವುದು, ಸಂವಿಧಾನದ ತತ್ವಗಳಿಗನುಗುಣವಾಗಿ ನಡೆದುಕೊಳ್ಳುವುದು ಎಲ್ಲವೂ ಧರ್ಮದ ಭಾಗವೇ. ಇದೇ ದೇಶದಲ್ಲಿ, ಅವರದ್ದೇ ದೇಶವಾದರೂ ಅವರನ್ನು ಸತತವಾಗಿ ಅನ್ಯರನ್ನಾಗಿಸುತ್ತಿರುವ ದೇಶದಲ್ಲಿ ಅವರ ನಂಬಿಕೆ ಅವರನ್ನು ಮನುಷ್ಯರನ್ನಾಗಿ ಉಳಿಸಿದೆ.

ಹೌದು ಬಾಂಬ್‌ ಕಟ್ಟಿಕೊಂಡು ಸ್ಫೋಟಿಸಿ ಅಮಾಯಕರನ್ನು ಕೊಂದವರೂ ಈ ಧರ್ಮದಲ್ಲಿದ್ದರು. ಆದರೆ ಅವರ ಸಂಖ್ಯೆ ಬಹಳ ಬಹಳ ಕಡಿಮೆ. ಈ ದೇಶದ ಶೇ.1ರಷ್ಟು ಜನ ಮುಸ್ಲಿಮರು ಹಾಗೆ ಮಾಡಿದ್ದರೂ, ದೇಶವೇ ಉಳಿಯುತ್ತಿರಲಿಲ್ಲ. ಸಾಯಲು ಸಿದ್ಧರಾದವರಿಗೆ ಯಾವ ಭಯ?

ಆದರೆ ಅದೇ ಧರ್ಮ ಅವರಲ್ಲಿ ಮನುಷ್ಯಪ್ರೀತಿಯನ್ನು ಅರಳಿಸಿದ್ದಿದೆಯಲ್ಲಾ ಅದಕ್ಕೇನು ಹೇಳುವುದು? ಈ ದೇಶದ ಮುಸ್ಲಿಮರನ್ನು ನೋಡಲು ಮುಸ್ಲಿಮೇತರರಿಗೆ ಇನ್ನೊಂದು ಕಣ್ಣೂ ಬೇಕಿದೆ. ಇಲ್ಲವಾದರೆ ಧರ್ಮವೂ ಉಳಿಯುವುದಿಲ್ಲ, ದೇಶವೂ.


ಇದನ್ನೂ ಓದಿ: ಸೇನಾ V/s ಕಂಗನಾ ವಿವಾದ: ದೂರ ಉಳಿಯಲು ಕಾಂಗ್ರೆಸ್ ಯತ್ನ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...