Homeಮುಖಪುಟ’ನಾವಿಬ್ಬರು ನಮಗಿಬ್ಬರು’ ಹೇಳಿಕೆಗೆ ’ಗೊ ಕೊರೊನಾ ಗೊ’ ಖ್ಯಾತಿಯ ಸಚಿವ ಅಠಾವಳೆ ಹೇಳಿದ್ದೇನು?

’ನಾವಿಬ್ಬರು ನಮಗಿಬ್ಬರು’ ಹೇಳಿಕೆಗೆ ’ಗೊ ಕೊರೊನಾ ಗೊ’ ಖ್ಯಾತಿಯ ಸಚಿವ ಅಠಾವಳೆ ಹೇಳಿದ್ದೇನು?

- Advertisement -
- Advertisement -

ರಾಹುಲ್‌‌‌ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಲು ಹೇಳಿದ್ದ ‘ನಾವಿಬ್ಬರು, ನಮಗಿಬ್ಬರು’ ಹೇಳಿಕೆಗೆ ’ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವ ರಾಮದಾಸ್ ಅಠಾವಳೆ ತಿರುಗೇಟು ನೀಡಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ದಲಿತ ಯುವತಿಯನ್ನು ವಿವಾಹವಾಗಲಿ ಎಂದು ಆಗ್ರಹಿಸಿದ್ದಾರೆ.

ರೈತ ಹೋರಾಟವನ್ನು ಬೆಂಬಲಿಸಿ ಇತ್ತೀಚೆಗೆ ಲೋಕಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕುಟುಂಬ ಯೋಜನೆಯೊಂದರ ಘೋಷಣೆಯಾದ ’ನಾವಿಬ್ಬರು ನಮಗಿಬ್ಬರು’ ಎಂಬ ಆಧಾರದಲ್ಲಿ, ದೇಶವನ್ನು ನಾಲ್ಕು ಜನರು ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿಗಳಾದ ಅಂಬಾನಿ-ಅದಾನಿಯ ಹೆಸರನ್ನು ಉಲ್ಲೇಖಿಸದೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

ಅವರು, “ಕುಟುಂಬ ಯೋಜನೆಗಾಗಿ ‘ನಾವಿಬ್ಬರು ನಮಗಿಬ್ಬರು’ ಎಂಬ ಘೋಷಣೆ ಇತ್ತು. ಕೊರೊನಾ ಮತ್ತೊಂದು ರೂಪದಲ್ಲಿ ಬಂದಂತೆ ಈ ಘೋಷಣೆಯು ಬೇರೆ ರೂಪದಲ್ಲಿ ಬಂದಿದೆ. ’ನಾವಿಬ್ಬರು ನಮಗಿಬ್ಬರು’ ಎಂಬಂತೆ ದೇಶವನ್ನು 4 ಜನರು ನಡೆಸುತ್ತಿದ್ದಾರೆ. ಎಲ್ಲರಿಗೂ ಅವರ ಹೆಸರು ತಿಳಿದಿದೆ, ಇದು ‘ನಾವಿಬ್ಬರು ನಮಗಿಬ್ಬರು’ ಸರ್ಕಾರ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಠಾವಳೆ, “ಹಿಂದೆ ನಾವಿಬ್ಬರು ನಮಗಿಬ್ಬರು ಘೋಷವಾಕ್ಯವನ್ನು ಕುಟುಂಬ ಯೋಜನೆಗಾಗಿ ಬಳಸಲಾಗುತ್ತಿತ್ತು. ಇದನ್ನು ಪ್ರೋತ್ಸಾಹಿಸಬೇಕೆಂದಿದ್ದರೆ ರಾಹುಲ್ ಗಾಂಧಿ ವಿವಾಹವಾಗಬೇಕಾಗುತ್ತದೆ. ಅವರು ದಲಿತ ಯುವತಿಯನ್ನು ವಿವಾಹವಾಗಿ ಜಾತಿ ವ್ಯವಸ್ಥೆಯನ್ನು ಅಂತ್ಯಗೊಳಿಸುವ ಮಹಾತ್ಮ ಗಾಂಧಿ ಕಂಡಿದ್ದ ಕನಸನ್ನು ಸಾಕಾರಗೊಳಿಸಬೇಕು” ಎಂದು ಹೇಳಿದ್ದಾರೆ

“ಇಂತಹ ಕ್ರಮ ಯುವಜನತೆಗೂ ಸ್ಫೂರ್ತಿದಾಯಕವಾಗಿದೆ. ಅಲ್ಲದೆ ನಮ್ಮ ಸಚಿವಾಲಯವು ಅಂತರ್ಜಾತಿ ವಿವಾಹಕ್ಕೆ ನೀಡುವ 2.5 ಲಕ್ಷ ರೂ.ಗಳ ಸಹಾಯಧನವನ್ನೂ ರಾಹುಲ್ ಗಾಂಧಿಗೆ ನೀಡುತ್ತೇವೆ” ಎಂದ ಅಠಾವಳೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಸರು ಹೇಳದಿದ್ದರೆ ಈ ಮುಟ್ಟಾಳ ನಿಗೆ ಆ ನಾಲ್ಕು ಜನರ ಹೆಸರು ಹೇಗೆ ಗೊತ್ತಾಯ್ತು
    ಅಂದಹಾಗೆ ರಾಹುಲ್ ಗಾಂಧಿ ಹೇಳಿದ್ದು ಸತ್ಯ ವಂತಾಯಿತು

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...