Homeಮುಖಪುಟ’ನಾವಿಬ್ಬರು ನಮಗಿಬ್ಬರು’ ಹೇಳಿಕೆಗೆ ’ಗೊ ಕೊರೊನಾ ಗೊ’ ಖ್ಯಾತಿಯ ಸಚಿವ ಅಠಾವಳೆ ಹೇಳಿದ್ದೇನು?

’ನಾವಿಬ್ಬರು ನಮಗಿಬ್ಬರು’ ಹೇಳಿಕೆಗೆ ’ಗೊ ಕೊರೊನಾ ಗೊ’ ಖ್ಯಾತಿಯ ಸಚಿವ ಅಠಾವಳೆ ಹೇಳಿದ್ದೇನು?

- Advertisement -
- Advertisement -

ರಾಹುಲ್‌‌‌ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಲು ಹೇಳಿದ್ದ ‘ನಾವಿಬ್ಬರು, ನಮಗಿಬ್ಬರು’ ಹೇಳಿಕೆಗೆ ’ಗೋ ಕೊರೊನಾ ಗೋ’ ಖ್ಯಾತಿಯ ಕೇಂದ್ರ ಸಚಿವ ರಾಮದಾಸ್ ಅಠಾವಳೆ ತಿರುಗೇಟು ನೀಡಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ದಲಿತ ಯುವತಿಯನ್ನು ವಿವಾಹವಾಗಲಿ ಎಂದು ಆಗ್ರಹಿಸಿದ್ದಾರೆ.

ರೈತ ಹೋರಾಟವನ್ನು ಬೆಂಬಲಿಸಿ ಇತ್ತೀಚೆಗೆ ಲೋಕಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಕುಟುಂಬ ಯೋಜನೆಯೊಂದರ ಘೋಷಣೆಯಾದ ’ನಾವಿಬ್ಬರು ನಮಗಿಬ್ಬರು’ ಎಂಬ ಆಧಾರದಲ್ಲಿ, ದೇಶವನ್ನು ನಾಲ್ಕು ಜನರು ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿಗಳಾದ ಅಂಬಾನಿ-ಅದಾನಿಯ ಹೆಸರನ್ನು ಉಲ್ಲೇಖಿಸದೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಾವಿಬ್ಬರು, ನಮಗಿಬ್ಬರು ಎಂದು 4 ಜನರು ದೇಶ ಆಳುತ್ತಿದ್ದಾರೆ: ರಾಹುಲ್ ಗಾಂಧಿ

ಅವರು, “ಕುಟುಂಬ ಯೋಜನೆಗಾಗಿ ‘ನಾವಿಬ್ಬರು ನಮಗಿಬ್ಬರು’ ಎಂಬ ಘೋಷಣೆ ಇತ್ತು. ಕೊರೊನಾ ಮತ್ತೊಂದು ರೂಪದಲ್ಲಿ ಬಂದಂತೆ ಈ ಘೋಷಣೆಯು ಬೇರೆ ರೂಪದಲ್ಲಿ ಬಂದಿದೆ. ’ನಾವಿಬ್ಬರು ನಮಗಿಬ್ಬರು’ ಎಂಬಂತೆ ದೇಶವನ್ನು 4 ಜನರು ನಡೆಸುತ್ತಿದ್ದಾರೆ. ಎಲ್ಲರಿಗೂ ಅವರ ಹೆಸರು ತಿಳಿದಿದೆ, ಇದು ‘ನಾವಿಬ್ಬರು ನಮಗಿಬ್ಬರು’ ಸರ್ಕಾರ” ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಠಾವಳೆ, “ಹಿಂದೆ ನಾವಿಬ್ಬರು ನಮಗಿಬ್ಬರು ಘೋಷವಾಕ್ಯವನ್ನು ಕುಟುಂಬ ಯೋಜನೆಗಾಗಿ ಬಳಸಲಾಗುತ್ತಿತ್ತು. ಇದನ್ನು ಪ್ರೋತ್ಸಾಹಿಸಬೇಕೆಂದಿದ್ದರೆ ರಾಹುಲ್ ಗಾಂಧಿ ವಿವಾಹವಾಗಬೇಕಾಗುತ್ತದೆ. ಅವರು ದಲಿತ ಯುವತಿಯನ್ನು ವಿವಾಹವಾಗಿ ಜಾತಿ ವ್ಯವಸ್ಥೆಯನ್ನು ಅಂತ್ಯಗೊಳಿಸುವ ಮಹಾತ್ಮ ಗಾಂಧಿ ಕಂಡಿದ್ದ ಕನಸನ್ನು ಸಾಕಾರಗೊಳಿಸಬೇಕು” ಎಂದು ಹೇಳಿದ್ದಾರೆ

“ಇಂತಹ ಕ್ರಮ ಯುವಜನತೆಗೂ ಸ್ಫೂರ್ತಿದಾಯಕವಾಗಿದೆ. ಅಲ್ಲದೆ ನಮ್ಮ ಸಚಿವಾಲಯವು ಅಂತರ್ಜಾತಿ ವಿವಾಹಕ್ಕೆ ನೀಡುವ 2.5 ಲಕ್ಷ ರೂ.ಗಳ ಸಹಾಯಧನವನ್ನೂ ರಾಹುಲ್ ಗಾಂಧಿಗೆ ನೀಡುತ್ತೇವೆ” ಎಂದ ಅಠಾವಳೆ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಸರು ಹೇಳದಿದ್ದರೆ ಈ ಮುಟ್ಟಾಳ ನಿಗೆ ಆ ನಾಲ್ಕು ಜನರ ಹೆಸರು ಹೇಗೆ ಗೊತ್ತಾಯ್ತು
    ಅಂದಹಾಗೆ ರಾಹುಲ್ ಗಾಂಧಿ ಹೇಳಿದ್ದು ಸತ್ಯ ವಂತಾಯಿತು

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...