Homeಕರ್ನಾಟಕಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ- ಕುಮಾರಸ್ವಾಮಿ

- Advertisement -
- Advertisement -

“ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ. ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

“ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು. ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

“ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ. ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್‌ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್‌ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...