Homeಕರ್ನಾಟಕಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ: HDK ಸವಾಲ್

ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ- ಕುಮಾರಸ್ವಾಮಿ

- Advertisement -
- Advertisement -

“ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ ಕೇವಲ 5 ಸ್ಥಾನ ಗೆದ್ದು ತೋರಿಸಲಿ” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ. ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಗಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ಕಪ್ಪು ಹಿಮ ಬಿದ್ದಾಗ ಬಿಜೆಪಿ ಸೇರುತ್ತೇನೆ: ಗುಲಾಂ ನಬಿ ಆಜಾದ್

“ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು. ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ‌. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಭಾರತದ ಭೂಪ್ರದೇಶವನ್ನು ಚೀನಾಗೆ ಬಿಟ್ಟುಕೊಟ್ಟ ಪ್ರಧಾನಿ ಮೋದಿ ಒಬ್ಬ ಹೇಡಿ: ರಾಹುಲ್ ಗಾಂಧಿ

“ಉತ್ತರ ಕರ್ನಾಟಕದಲ್ಲಿ ಜೆಡಿಎಸ್‌ಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ‌. ಅಲ್ಲಿಯವರೆಗೆ ಅವರು ತಾಳಲಿ. ಜೆಡಿಎಸ್‌ನಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯ‌ನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಜೆಡಿಎಸ್‌ಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್‌ಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ರಾಯಚೂರಿನಲ್ಲಿ ಅನಾವರಣಗೊಂಡ ಅಲೆಮಾರಿಗಳ ಸಾಂಸ್ಕೃತಿಕ ಕಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...