Homeಮುಖಪುಟಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

- Advertisement -
- Advertisement -

ಒಳ ಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ಹಲವು ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನ ನಡೆಸಿದ್ದವು. ಈ ಸಂದರ್ಶನಗಳನ್ನು ಹುಲಿಕುಂಟೆ ಮೂರ್ತಿ ಮತ್ತು ವಿಕಾಸ್ ಮೌರ್ಯ ಸಂಯೋಜಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಅನುಸೂಯ ಕಾಂಬಳೆ ಉತ್ತರಿಸಿದ್ದಾರೆ. ಪ್ರಶ್ನೆಗಳು ಇಲ್ಲಿವೆ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿ ಜಾರಿಗೆ ಬಂದ ಸಂದರ್ಭ ಮತ್ತು ಬದಲಾದ ಇಂದಿನ ಪರಿಸ್ಥಿತಿ ಎರಡೂ ಬೇರೆ ಬೇರೆ. ಮೀಸಲಾತಿ ನಿಗದಿಗೊಳಿಸಿದಾಗ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ ನೂರಾಒಂದು ಜಾತಿಗಳನ್ನು ಆ ಪಟ್ಟಿಗೆ ಸೇರಿಸಿದಾಗಲೂ ಪ್ರತಿಶತ ಮೀಸಲಾತಿಯನ್ನು ಹೆಚ್ಚಿಸಿಲ್ಲ. ವಿಪರೀತ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ಸಾಂಕೇತಿಕವಾಗಿ ಮಾತ್ರ ಉಳಿದಿದೆ. ಮೀಸಲಾತಿಯಲ್ಲಿ ಹೆಚ್ಚಳ ಆಗಬೇಕು ಮತ್ತು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಹೋರಾಟಗಳು ಹುಟ್ಟಬೇಕಾದ ಸಂದರ್ಭದಲ್ಲಿ ಒಳಮೀಸಲಾತಿಯ ಚರ್ಚೆ ಮುನ್ನಲೆಗೆ ಬಂತು. ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಸಮಾನತೆ ಬರುತ್ತದೆ ಎಂದು ಹೇಳುತ್ತಿದ್ದಾರೆ.

ಹೀಗೆ ಹೇಳುವವರು ಸಮಾನತೆಯನ್ನು ಯಾವ ಮಾನದಂಡಗಳಿಂದ ಆಳೆಯುತ್ತಿದ್ದಾರೆ ಗೊತ್ತಿಲ್ಲ. ಆದರೆ ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಒಂದೇ. ಆದರೆ ಪರಿಸ್ಥಿತಿ ಭಿನ್ನ. ಪಟ್ಟಿಯಲ್ಲಿರುವ ಎಲ್ಲ ಕೆಳಜಾತಿಗಳನ್ನು ಒಂದು ಸಮೂಹವಾಗಿ ನಿಗದಿಗೊಳಿಸಿ ನೀಡಿದ್ದ ಮೀಸಲಾತಿಯನ್ನು ಇಂದು ಜಾತಿ-ಜಾತಿಗಳಾಗಿ ಒಡೆದು ಹಂಚಿಕೆ ಮಾಡಲು ಸೂಚಿಸುತ್ತಿದೆ. ಇದರಿಂದಾಗಿ ಸಮುದಾಯಗಳು ಒಂದೊಂದು ಪ್ರತ್ಯೇಕ ಜಾತಿಗಳಾಗಿ ಒಡೆದಿವೆ. ಒಳಮೀಸಲಾತಿ ಇಂದು ಒಂದುಗೂಡುವಿಕೆಯ ಆಶಯವಾಗಿ ಜಾರಿಗೊಳ್ಳಲಿ.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಜಾತಿ ಇರುವವರೆಗೆ ಮೀಸಲಾತಿ ಇರಬೇಕು ಮತ್ತು ಒಳಮೀಸಲಾತಿ ಜಾರಿಗೊಳ್ಳಬೇಕು ಎಂಬ ಬಿಕ್ಕಟ್ಟಿನ ಸಂದರ್ಭವಿದು. ಮೀಸಲಾತಿಯನ್ನು ಉಳಿಸಿಕೊಳ್ಳುವ ಮತ್ತು ಸಂವಿಧಾನದ ಉಳುವಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಒಂದು ರಾಜಕೀಯ ವಿಷಯವಾಗಿದೆ. ಪ.ಜಾ, ಪ.ಪಂ.ಗಳ ಜನರಷ್ಟೇ ಅಲ್ಲ, ಆ ಹತ್ತು ಪ್ರತಿಶತ ಮೀಸಲಾತಿಗೆ ಒಳಪಡದ ಎಲ್ಲ ಜಾತಿ ಜನರೂ ಹೋರಾಡಬೇಕಿದೆ. ಐವತ್ತರಿಂದ ಅರವತ್ತು ಪ್ರತಿಶತಕ್ಕೆ (ಸುಪ್ರೀಂ ಕೋರ್ಟ್ ಆದೇಶ ಮೀರಿಯೂ) ಹೆಚ್ಚಿದ್ದರಿಂದ ಬಾಕಿ ಉಳಿದ ನಲವತ್ತು ಪ್ರತಿಶತ ಮೀಸಲಾತಿ ಕೆಲವೇ ಜಾತಿ ಜನರಿಗೆ ಲಭಿಸುತ್ತದೆ. ಈ ಅಸಮಾನತೆಯನ್ನು ತೊಲಗಿಸಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸಿ ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿಯನ್ನು ಜಾರಿಗೊಳಿಸಬೇಕು. ಇದರಿಂದಾಗಿ ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನಿಡಲು ಸಾಧ್ಯವಾಗುತ್ತದೆ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಪ.ಜಾ, ಪ.ಪಂ.ಗಳ ಮೀಸಲಾತಿಯನ್ನು ಜಾರಿಗೊಳಿಸುವಾಗ ಕಾರಣಗಳನ್ನು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆಯ ನೋವು-ಅವಮಾನಗಳಿಗೆ ಒಳಗಾದವರು ಎಂಬುದೂ ಮುಖ್ಯವಾಗಿದೆ. ಆದ್ದರಿಂದ ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆ. ಸಮುದಾಯಗಳ ಕಾಳಜಿ ಉಳ್ಳವರಾಗಿದ್ದಾರೆ. ಒಳಮೀಸಲಾತಿ ಅವರನ್ನು ಒಡೆದು ಅಳುತ್ತಿರುವುದು ನಿಜ. ಕರ್ನಾಟಕದಲ್ಲಿ ಆಯಾ ಪ್ರದೇಶವಾರು ಎಡಗೈ ಮತ್ತು ಬಲಗೈಗಳವರ ಪರಿಸ್ಥಿತಿ ಭಿನ್ನವಾಗಿದ್ದರಿಂದ ಕೆಲವು ಭಾಗದಲ್ಲಿ ಎಡಗೈನವರು ಕೆಲವು ಭಾಗದಲ್ಲಿ ಬಲಗೈನವರು ಹೆಚ್ಚು ಮೀಸಲಾತಿಯ ಸೌಲಭ್ಯವನ್ನು ಪಡೆದಿದ್ದಾರೆಂಬ ವಾದವಿತ್ತಾದ್ದರಿಂದ ಅದು ಪರಸ್ಪರ ವಿರುದ್ಧ ಧ್ವನಿಯಾಗಿ ಕಂಡಿದೆ. ಪ್ರದೇಶವಾರು ಆಯಾ ಜಾತಿಗಳು ಪಡೆದ ಮೀಸಲಾತಿಯ ವರದಿಯೊಂದು ಸಿದ್ಧವಾಗಿದ್ದರೆ ವಾಸ್ತವದ ಅರಿವು ಮೂಡಿ ಒಂದಾಗಬಹುದಾಗಿತ್ತು. ಇದರಿಂದಾಗಿ ಇಬ್ಬರ ನಡುವೆ ಭಿನ್ನತೆ ಉಂಟಾಯಿತು. ಈಗ ಇಬ್ಬರಿಗೂ ಒಳಮೀಸಲಾತಿಯಿಂದಾಗಿ ರಾಜಕೀಯವಾಗಿ ಅಧಿಕಾರ ವಂಚಿತರಾಗುತ್ತಿರುವುದು ಮನದಟ್ಟಾಗಿದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಒಳಮೀಸಲಾತಿ ಇಟ್ಟುಕೊಂಡು ಒಡೆದು ಆಳುತ್ತಿರುವ ವಾಸ್ತವ ಸತ್ಯ. ಕಳೆದ ಲೋಕಸಭಾ ಚುನಾವಣೆ ಇದಕ್ಕೆ ನಿದರ್ಶನ. ಎರಡೂ ಬಣಗಳವರು ಒಳಮೀಸಲಾತಿ ಆದಷ್ಟು ಬೇಗ ಜಾರಿಗೆ ಬರಲಿ ಎಂಬ ಆಶಯವುಳ್ಳವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ತೀರ್ಪೂ ಬಂದಿದೆ. ಒಳಮೀಸಲಾತಿಗೂ ರಾಜಕೀಯಕ್ಕೂ ನೇರಾನೇರ ಸಂಬಂಧವಿರುವುದರಿಂದ ತಮ್ಮ ಒಗ್ಗಟ್ಟಿನಲ್ಲಿ ರಾಜಕೀಯ ಅಧಿಕಾರವಿದೆ ಎಂಬ ಅರಿವು ಮೂಡಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿ ಜಾರಿಗೆ ಬರಲಿ. ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸುವ ಸಂಬಂಧವಾಗಿ, ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿ ನೀಡಲು ಮತ್ತು ಖಾಸಗಿ ವಲಯಕ್ಕೂ ಮೀಸಲಾತಿಯನ್ನು ವಿಸ್ತರಿಸುವ ಹಿನ್ನೆಲೆಯಲ್ಲಿ ಸರ್ಕಾರವು ಆಯೋಗಗಳನ್ನು ರಚಿಸಲಿ.

 

ಡಾ. ಅನಸೂಯ ಕಾಂಬಳೆ

(ಬರಹಗಾರ್ತಿ ಅನಸೂಯ ಸಾಹಿತ್ಯದಲ್ಲಿ ದಲಿತ ಸಂವೇದನೆಯನ್ನು ದಾಖಲಿಸಿದ ಪ್ರಮುಖರಲ್ಲಿ ಒಬ್ಬರು. ‘ಮುಳ್ಳು ಕಂಟಿಯ ನಡುವೆ’ ಸೇರಿದಂತೆ ಹಲವು ಕವನಸಂಕಲನಗಳು ಪ್ರಕಟವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹಗಳ ಬಗ್ಗೆ ಅಧ್ಯಯನ ಮಾಡಿರುವುದಲ್ಲದೆ ಕನ್ನಡದ ಸಾಹಿತ್ಯದ ಮೇಲೆ ಬಾಬಾಸಾಹೇಬರ ಪ್ರಭಾವದ ಬಗ್ಗೆಯೂ ಪ್ರಬಂಧ ಮಂಡಿಸಿದ್ದಾರೆ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...