Homeಮುಖಪುಟಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

- Advertisement -
- Advertisement -

ಒಳ ಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ಹಲವು ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನ ನಡೆಸಿದ್ದವು. ಈ ಸಂದರ್ಶನಗಳನ್ನು ಹುಲಿಕುಂಟೆ ಮೂರ್ತಿ ಮತ್ತು ವಿಕಾಸ್ ಮೌರ್ಯ ಸಂಯೋಜಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಅನುಸೂಯ ಕಾಂಬಳೆ ಉತ್ತರಿಸಿದ್ದಾರೆ. ಪ್ರಶ್ನೆಗಳು ಇಲ್ಲಿವೆ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿ ಜಾರಿಗೆ ಬಂದ ಸಂದರ್ಭ ಮತ್ತು ಬದಲಾದ ಇಂದಿನ ಪರಿಸ್ಥಿತಿ ಎರಡೂ ಬೇರೆ ಬೇರೆ. ಮೀಸಲಾತಿ ನಿಗದಿಗೊಳಿಸಿದಾಗ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ ನೂರಾಒಂದು ಜಾತಿಗಳನ್ನು ಆ ಪಟ್ಟಿಗೆ ಸೇರಿಸಿದಾಗಲೂ ಪ್ರತಿಶತ ಮೀಸಲಾತಿಯನ್ನು ಹೆಚ್ಚಿಸಿಲ್ಲ. ವಿಪರೀತ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ಸಾಂಕೇತಿಕವಾಗಿ ಮಾತ್ರ ಉಳಿದಿದೆ. ಮೀಸಲಾತಿಯಲ್ಲಿ ಹೆಚ್ಚಳ ಆಗಬೇಕು ಮತ್ತು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಹೋರಾಟಗಳು ಹುಟ್ಟಬೇಕಾದ ಸಂದರ್ಭದಲ್ಲಿ ಒಳಮೀಸಲಾತಿಯ ಚರ್ಚೆ ಮುನ್ನಲೆಗೆ ಬಂತು. ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಸಮಾನತೆ ಬರುತ್ತದೆ ಎಂದು ಹೇಳುತ್ತಿದ್ದಾರೆ.

ಹೀಗೆ ಹೇಳುವವರು ಸಮಾನತೆಯನ್ನು ಯಾವ ಮಾನದಂಡಗಳಿಂದ ಆಳೆಯುತ್ತಿದ್ದಾರೆ ಗೊತ್ತಿಲ್ಲ. ಆದರೆ ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಒಂದೇ. ಆದರೆ ಪರಿಸ್ಥಿತಿ ಭಿನ್ನ. ಪಟ್ಟಿಯಲ್ಲಿರುವ ಎಲ್ಲ ಕೆಳಜಾತಿಗಳನ್ನು ಒಂದು ಸಮೂಹವಾಗಿ ನಿಗದಿಗೊಳಿಸಿ ನೀಡಿದ್ದ ಮೀಸಲಾತಿಯನ್ನು ಇಂದು ಜಾತಿ-ಜಾತಿಗಳಾಗಿ ಒಡೆದು ಹಂಚಿಕೆ ಮಾಡಲು ಸೂಚಿಸುತ್ತಿದೆ. ಇದರಿಂದಾಗಿ ಸಮುದಾಯಗಳು ಒಂದೊಂದು ಪ್ರತ್ಯೇಕ ಜಾತಿಗಳಾಗಿ ಒಡೆದಿವೆ. ಒಳಮೀಸಲಾತಿ ಇಂದು ಒಂದುಗೂಡುವಿಕೆಯ ಆಶಯವಾಗಿ ಜಾರಿಗೊಳ್ಳಲಿ.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಜಾತಿ ಇರುವವರೆಗೆ ಮೀಸಲಾತಿ ಇರಬೇಕು ಮತ್ತು ಒಳಮೀಸಲಾತಿ ಜಾರಿಗೊಳ್ಳಬೇಕು ಎಂಬ ಬಿಕ್ಕಟ್ಟಿನ ಸಂದರ್ಭವಿದು. ಮೀಸಲಾತಿಯನ್ನು ಉಳಿಸಿಕೊಳ್ಳುವ ಮತ್ತು ಸಂವಿಧಾನದ ಉಳುವಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಒಂದು ರಾಜಕೀಯ ವಿಷಯವಾಗಿದೆ. ಪ.ಜಾ, ಪ.ಪಂ.ಗಳ ಜನರಷ್ಟೇ ಅಲ್ಲ, ಆ ಹತ್ತು ಪ್ರತಿಶತ ಮೀಸಲಾತಿಗೆ ಒಳಪಡದ ಎಲ್ಲ ಜಾತಿ ಜನರೂ ಹೋರಾಡಬೇಕಿದೆ. ಐವತ್ತರಿಂದ ಅರವತ್ತು ಪ್ರತಿಶತಕ್ಕೆ (ಸುಪ್ರೀಂ ಕೋರ್ಟ್ ಆದೇಶ ಮೀರಿಯೂ) ಹೆಚ್ಚಿದ್ದರಿಂದ ಬಾಕಿ ಉಳಿದ ನಲವತ್ತು ಪ್ರತಿಶತ ಮೀಸಲಾತಿ ಕೆಲವೇ ಜಾತಿ ಜನರಿಗೆ ಲಭಿಸುತ್ತದೆ. ಈ ಅಸಮಾನತೆಯನ್ನು ತೊಲಗಿಸಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸಿ ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿಯನ್ನು ಜಾರಿಗೊಳಿಸಬೇಕು. ಇದರಿಂದಾಗಿ ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನಿಡಲು ಸಾಧ್ಯವಾಗುತ್ತದೆ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಪ.ಜಾ, ಪ.ಪಂ.ಗಳ ಮೀಸಲಾತಿಯನ್ನು ಜಾರಿಗೊಳಿಸುವಾಗ ಕಾರಣಗಳನ್ನು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆಯ ನೋವು-ಅವಮಾನಗಳಿಗೆ ಒಳಗಾದವರು ಎಂಬುದೂ ಮುಖ್ಯವಾಗಿದೆ. ಆದ್ದರಿಂದ ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆ. ಸಮುದಾಯಗಳ ಕಾಳಜಿ ಉಳ್ಳವರಾಗಿದ್ದಾರೆ. ಒಳಮೀಸಲಾತಿ ಅವರನ್ನು ಒಡೆದು ಅಳುತ್ತಿರುವುದು ನಿಜ. ಕರ್ನಾಟಕದಲ್ಲಿ ಆಯಾ ಪ್ರದೇಶವಾರು ಎಡಗೈ ಮತ್ತು ಬಲಗೈಗಳವರ ಪರಿಸ್ಥಿತಿ ಭಿನ್ನವಾಗಿದ್ದರಿಂದ ಕೆಲವು ಭಾಗದಲ್ಲಿ ಎಡಗೈನವರು ಕೆಲವು ಭಾಗದಲ್ಲಿ ಬಲಗೈನವರು ಹೆಚ್ಚು ಮೀಸಲಾತಿಯ ಸೌಲಭ್ಯವನ್ನು ಪಡೆದಿದ್ದಾರೆಂಬ ವಾದವಿತ್ತಾದ್ದರಿಂದ ಅದು ಪರಸ್ಪರ ವಿರುದ್ಧ ಧ್ವನಿಯಾಗಿ ಕಂಡಿದೆ. ಪ್ರದೇಶವಾರು ಆಯಾ ಜಾತಿಗಳು ಪಡೆದ ಮೀಸಲಾತಿಯ ವರದಿಯೊಂದು ಸಿದ್ಧವಾಗಿದ್ದರೆ ವಾಸ್ತವದ ಅರಿವು ಮೂಡಿ ಒಂದಾಗಬಹುದಾಗಿತ್ತು. ಇದರಿಂದಾಗಿ ಇಬ್ಬರ ನಡುವೆ ಭಿನ್ನತೆ ಉಂಟಾಯಿತು. ಈಗ ಇಬ್ಬರಿಗೂ ಒಳಮೀಸಲಾತಿಯಿಂದಾಗಿ ರಾಜಕೀಯವಾಗಿ ಅಧಿಕಾರ ವಂಚಿತರಾಗುತ್ತಿರುವುದು ಮನದಟ್ಟಾಗಿದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಒಳಮೀಸಲಾತಿ ಇಟ್ಟುಕೊಂಡು ಒಡೆದು ಆಳುತ್ತಿರುವ ವಾಸ್ತವ ಸತ್ಯ. ಕಳೆದ ಲೋಕಸಭಾ ಚುನಾವಣೆ ಇದಕ್ಕೆ ನಿದರ್ಶನ. ಎರಡೂ ಬಣಗಳವರು ಒಳಮೀಸಲಾತಿ ಆದಷ್ಟು ಬೇಗ ಜಾರಿಗೆ ಬರಲಿ ಎಂಬ ಆಶಯವುಳ್ಳವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ತೀರ್ಪೂ ಬಂದಿದೆ. ಒಳಮೀಸಲಾತಿಗೂ ರಾಜಕೀಯಕ್ಕೂ ನೇರಾನೇರ ಸಂಬಂಧವಿರುವುದರಿಂದ ತಮ್ಮ ಒಗ್ಗಟ್ಟಿನಲ್ಲಿ ರಾಜಕೀಯ ಅಧಿಕಾರವಿದೆ ಎಂಬ ಅರಿವು ಮೂಡಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿ ಜಾರಿಗೆ ಬರಲಿ. ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸುವ ಸಂಬಂಧವಾಗಿ, ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿ ನೀಡಲು ಮತ್ತು ಖಾಸಗಿ ವಲಯಕ್ಕೂ ಮೀಸಲಾತಿಯನ್ನು ವಿಸ್ತರಿಸುವ ಹಿನ್ನೆಲೆಯಲ್ಲಿ ಸರ್ಕಾರವು ಆಯೋಗಗಳನ್ನು ರಚಿಸಲಿ.

 

ಡಾ. ಅನಸೂಯ ಕಾಂಬಳೆ

(ಬರಹಗಾರ್ತಿ ಅನಸೂಯ ಸಾಹಿತ್ಯದಲ್ಲಿ ದಲಿತ ಸಂವೇದನೆಯನ್ನು ದಾಖಲಿಸಿದ ಪ್ರಮುಖರಲ್ಲಿ ಒಬ್ಬರು. ‘ಮುಳ್ಳು ಕಂಟಿಯ ನಡುವೆ’ ಸೇರಿದಂತೆ ಹಲವು ಕವನಸಂಕಲನಗಳು ಪ್ರಕಟವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹಗಳ ಬಗ್ಗೆ ಅಧ್ಯಯನ ಮಾಡಿರುವುದಲ್ಲದೆ ಕನ್ನಡದ ಸಾಹಿತ್ಯದ ಮೇಲೆ ಬಾಬಾಸಾಹೇಬರ ಪ್ರಭಾವದ ಬಗ್ಗೆಯೂ ಪ್ರಬಂಧ ಮಂಡಿಸಿದ್ದಾರೆ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...