Homeಮುಖಪುಟಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

- Advertisement -
- Advertisement -

ಒಳ ಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ಹಲವು ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನ ನಡೆಸಿದ್ದವು. ಈ ಸಂದರ್ಶನಗಳನ್ನು ಹುಲಿಕುಂಟೆ ಮೂರ್ತಿ ಮತ್ತು ವಿಕಾಸ್ ಮೌರ್ಯ ಸಂಯೋಜಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಅನುಸೂಯ ಕಾಂಬಳೆ ಉತ್ತರಿಸಿದ್ದಾರೆ. ಪ್ರಶ್ನೆಗಳು ಇಲ್ಲಿವೆ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿ ಜಾರಿಗೆ ಬಂದ ಸಂದರ್ಭ ಮತ್ತು ಬದಲಾದ ಇಂದಿನ ಪರಿಸ್ಥಿತಿ ಎರಡೂ ಬೇರೆ ಬೇರೆ. ಮೀಸಲಾತಿ ನಿಗದಿಗೊಳಿಸಿದಾಗ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ ನೂರಾಒಂದು ಜಾತಿಗಳನ್ನು ಆ ಪಟ್ಟಿಗೆ ಸೇರಿಸಿದಾಗಲೂ ಪ್ರತಿಶತ ಮೀಸಲಾತಿಯನ್ನು ಹೆಚ್ಚಿಸಿಲ್ಲ. ವಿಪರೀತ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ಸಾಂಕೇತಿಕವಾಗಿ ಮಾತ್ರ ಉಳಿದಿದೆ. ಮೀಸಲಾತಿಯಲ್ಲಿ ಹೆಚ್ಚಳ ಆಗಬೇಕು ಮತ್ತು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಹೋರಾಟಗಳು ಹುಟ್ಟಬೇಕಾದ ಸಂದರ್ಭದಲ್ಲಿ ಒಳಮೀಸಲಾತಿಯ ಚರ್ಚೆ ಮುನ್ನಲೆಗೆ ಬಂತು. ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಸಮಾನತೆ ಬರುತ್ತದೆ ಎಂದು ಹೇಳುತ್ತಿದ್ದಾರೆ.

ಹೀಗೆ ಹೇಳುವವರು ಸಮಾನತೆಯನ್ನು ಯಾವ ಮಾನದಂಡಗಳಿಂದ ಆಳೆಯುತ್ತಿದ್ದಾರೆ ಗೊತ್ತಿಲ್ಲ. ಆದರೆ ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಒಂದೇ. ಆದರೆ ಪರಿಸ್ಥಿತಿ ಭಿನ್ನ. ಪಟ್ಟಿಯಲ್ಲಿರುವ ಎಲ್ಲ ಕೆಳಜಾತಿಗಳನ್ನು ಒಂದು ಸಮೂಹವಾಗಿ ನಿಗದಿಗೊಳಿಸಿ ನೀಡಿದ್ದ ಮೀಸಲಾತಿಯನ್ನು ಇಂದು ಜಾತಿ-ಜಾತಿಗಳಾಗಿ ಒಡೆದು ಹಂಚಿಕೆ ಮಾಡಲು ಸೂಚಿಸುತ್ತಿದೆ. ಇದರಿಂದಾಗಿ ಸಮುದಾಯಗಳು ಒಂದೊಂದು ಪ್ರತ್ಯೇಕ ಜಾತಿಗಳಾಗಿ ಒಡೆದಿವೆ. ಒಳಮೀಸಲಾತಿ ಇಂದು ಒಂದುಗೂಡುವಿಕೆಯ ಆಶಯವಾಗಿ ಜಾರಿಗೊಳ್ಳಲಿ.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಜಾತಿ ಇರುವವರೆಗೆ ಮೀಸಲಾತಿ ಇರಬೇಕು ಮತ್ತು ಒಳಮೀಸಲಾತಿ ಜಾರಿಗೊಳ್ಳಬೇಕು ಎಂಬ ಬಿಕ್ಕಟ್ಟಿನ ಸಂದರ್ಭವಿದು. ಮೀಸಲಾತಿಯನ್ನು ಉಳಿಸಿಕೊಳ್ಳುವ ಮತ್ತು ಸಂವಿಧಾನದ ಉಳುವಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಒಂದು ರಾಜಕೀಯ ವಿಷಯವಾಗಿದೆ. ಪ.ಜಾ, ಪ.ಪಂ.ಗಳ ಜನರಷ್ಟೇ ಅಲ್ಲ, ಆ ಹತ್ತು ಪ್ರತಿಶತ ಮೀಸಲಾತಿಗೆ ಒಳಪಡದ ಎಲ್ಲ ಜಾತಿ ಜನರೂ ಹೋರಾಡಬೇಕಿದೆ. ಐವತ್ತರಿಂದ ಅರವತ್ತು ಪ್ರತಿಶತಕ್ಕೆ (ಸುಪ್ರೀಂ ಕೋರ್ಟ್ ಆದೇಶ ಮೀರಿಯೂ) ಹೆಚ್ಚಿದ್ದರಿಂದ ಬಾಕಿ ಉಳಿದ ನಲವತ್ತು ಪ್ರತಿಶತ ಮೀಸಲಾತಿ ಕೆಲವೇ ಜಾತಿ ಜನರಿಗೆ ಲಭಿಸುತ್ತದೆ. ಈ ಅಸಮಾನತೆಯನ್ನು ತೊಲಗಿಸಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸಿ ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿಯನ್ನು ಜಾರಿಗೊಳಿಸಬೇಕು. ಇದರಿಂದಾಗಿ ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನಿಡಲು ಸಾಧ್ಯವಾಗುತ್ತದೆ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಪ.ಜಾ, ಪ.ಪಂ.ಗಳ ಮೀಸಲಾತಿಯನ್ನು ಜಾರಿಗೊಳಿಸುವಾಗ ಕಾರಣಗಳನ್ನು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆಯ ನೋವು-ಅವಮಾನಗಳಿಗೆ ಒಳಗಾದವರು ಎಂಬುದೂ ಮುಖ್ಯವಾಗಿದೆ. ಆದ್ದರಿಂದ ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆ. ಸಮುದಾಯಗಳ ಕಾಳಜಿ ಉಳ್ಳವರಾಗಿದ್ದಾರೆ. ಒಳಮೀಸಲಾತಿ ಅವರನ್ನು ಒಡೆದು ಅಳುತ್ತಿರುವುದು ನಿಜ. ಕರ್ನಾಟಕದಲ್ಲಿ ಆಯಾ ಪ್ರದೇಶವಾರು ಎಡಗೈ ಮತ್ತು ಬಲಗೈಗಳವರ ಪರಿಸ್ಥಿತಿ ಭಿನ್ನವಾಗಿದ್ದರಿಂದ ಕೆಲವು ಭಾಗದಲ್ಲಿ ಎಡಗೈನವರು ಕೆಲವು ಭಾಗದಲ್ಲಿ ಬಲಗೈನವರು ಹೆಚ್ಚು ಮೀಸಲಾತಿಯ ಸೌಲಭ್ಯವನ್ನು ಪಡೆದಿದ್ದಾರೆಂಬ ವಾದವಿತ್ತಾದ್ದರಿಂದ ಅದು ಪರಸ್ಪರ ವಿರುದ್ಧ ಧ್ವನಿಯಾಗಿ ಕಂಡಿದೆ. ಪ್ರದೇಶವಾರು ಆಯಾ ಜಾತಿಗಳು ಪಡೆದ ಮೀಸಲಾತಿಯ ವರದಿಯೊಂದು ಸಿದ್ಧವಾಗಿದ್ದರೆ ವಾಸ್ತವದ ಅರಿವು ಮೂಡಿ ಒಂದಾಗಬಹುದಾಗಿತ್ತು. ಇದರಿಂದಾಗಿ ಇಬ್ಬರ ನಡುವೆ ಭಿನ್ನತೆ ಉಂಟಾಯಿತು. ಈಗ ಇಬ್ಬರಿಗೂ ಒಳಮೀಸಲಾತಿಯಿಂದಾಗಿ ರಾಜಕೀಯವಾಗಿ ಅಧಿಕಾರ ವಂಚಿತರಾಗುತ್ತಿರುವುದು ಮನದಟ್ಟಾಗಿದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಒಳಮೀಸಲಾತಿ ಇಟ್ಟುಕೊಂಡು ಒಡೆದು ಆಳುತ್ತಿರುವ ವಾಸ್ತವ ಸತ್ಯ. ಕಳೆದ ಲೋಕಸಭಾ ಚುನಾವಣೆ ಇದಕ್ಕೆ ನಿದರ್ಶನ. ಎರಡೂ ಬಣಗಳವರು ಒಳಮೀಸಲಾತಿ ಆದಷ್ಟು ಬೇಗ ಜಾರಿಗೆ ಬರಲಿ ಎಂಬ ಆಶಯವುಳ್ಳವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ತೀರ್ಪೂ ಬಂದಿದೆ. ಒಳಮೀಸಲಾತಿಗೂ ರಾಜಕೀಯಕ್ಕೂ ನೇರಾನೇರ ಸಂಬಂಧವಿರುವುದರಿಂದ ತಮ್ಮ ಒಗ್ಗಟ್ಟಿನಲ್ಲಿ ರಾಜಕೀಯ ಅಧಿಕಾರವಿದೆ ಎಂಬ ಅರಿವು ಮೂಡಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿ ಜಾರಿಗೆ ಬರಲಿ. ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸುವ ಸಂಬಂಧವಾಗಿ, ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿ ನೀಡಲು ಮತ್ತು ಖಾಸಗಿ ವಲಯಕ್ಕೂ ಮೀಸಲಾತಿಯನ್ನು ವಿಸ್ತರಿಸುವ ಹಿನ್ನೆಲೆಯಲ್ಲಿ ಸರ್ಕಾರವು ಆಯೋಗಗಳನ್ನು ರಚಿಸಲಿ.

 

ಡಾ. ಅನಸೂಯ ಕಾಂಬಳೆ

(ಬರಹಗಾರ್ತಿ ಅನಸೂಯ ಸಾಹಿತ್ಯದಲ್ಲಿ ದಲಿತ ಸಂವೇದನೆಯನ್ನು ದಾಖಲಿಸಿದ ಪ್ರಮುಖರಲ್ಲಿ ಒಬ್ಬರು. ‘ಮುಳ್ಳು ಕಂಟಿಯ ನಡುವೆ’ ಸೇರಿದಂತೆ ಹಲವು ಕವನಸಂಕಲನಗಳು ಪ್ರಕಟವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹಗಳ ಬಗ್ಗೆ ಅಧ್ಯಯನ ಮಾಡಿರುವುದಲ್ಲದೆ ಕನ್ನಡದ ಸಾಹಿತ್ಯದ ಮೇಲೆ ಬಾಬಾಸಾಹೇಬರ ಪ್ರಭಾವದ ಬಗ್ಗೆಯೂ ಪ್ರಬಂಧ ಮಂಡಿಸಿದ್ದಾರೆ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...