Homeಮುಖಪುಟಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

- Advertisement -
- Advertisement -

ಒಳ ಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ಹಲವು ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನ ನಡೆಸಿದ್ದವು. ಈ ಸಂದರ್ಶನಗಳನ್ನು ಹುಲಿಕುಂಟೆ ಮೂರ್ತಿ ಮತ್ತು ವಿಕಾಸ್ ಮೌರ್ಯ ಸಂಯೋಜಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಅನುಸೂಯ ಕಾಂಬಳೆ ಉತ್ತರಿಸಿದ್ದಾರೆ. ಪ್ರಶ್ನೆಗಳು ಇಲ್ಲಿವೆ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿ ಜಾರಿಗೆ ಬಂದ ಸಂದರ್ಭ ಮತ್ತು ಬದಲಾದ ಇಂದಿನ ಪರಿಸ್ಥಿತಿ ಎರಡೂ ಬೇರೆ ಬೇರೆ. ಮೀಸಲಾತಿ ನಿಗದಿಗೊಳಿಸಿದಾಗ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ ನೂರಾಒಂದು ಜಾತಿಗಳನ್ನು ಆ ಪಟ್ಟಿಗೆ ಸೇರಿಸಿದಾಗಲೂ ಪ್ರತಿಶತ ಮೀಸಲಾತಿಯನ್ನು ಹೆಚ್ಚಿಸಿಲ್ಲ. ವಿಪರೀತ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ಸಾಂಕೇತಿಕವಾಗಿ ಮಾತ್ರ ಉಳಿದಿದೆ. ಮೀಸಲಾತಿಯಲ್ಲಿ ಹೆಚ್ಚಳ ಆಗಬೇಕು ಮತ್ತು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಹೋರಾಟಗಳು ಹುಟ್ಟಬೇಕಾದ ಸಂದರ್ಭದಲ್ಲಿ ಒಳಮೀಸಲಾತಿಯ ಚರ್ಚೆ ಮುನ್ನಲೆಗೆ ಬಂತು. ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಸಮಾನತೆ ಬರುತ್ತದೆ ಎಂದು ಹೇಳುತ್ತಿದ್ದಾರೆ.

ಹೀಗೆ ಹೇಳುವವರು ಸಮಾನತೆಯನ್ನು ಯಾವ ಮಾನದಂಡಗಳಿಂದ ಆಳೆಯುತ್ತಿದ್ದಾರೆ ಗೊತ್ತಿಲ್ಲ. ಆದರೆ ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಒಂದೇ. ಆದರೆ ಪರಿಸ್ಥಿತಿ ಭಿನ್ನ. ಪಟ್ಟಿಯಲ್ಲಿರುವ ಎಲ್ಲ ಕೆಳಜಾತಿಗಳನ್ನು ಒಂದು ಸಮೂಹವಾಗಿ ನಿಗದಿಗೊಳಿಸಿ ನೀಡಿದ್ದ ಮೀಸಲಾತಿಯನ್ನು ಇಂದು ಜಾತಿ-ಜಾತಿಗಳಾಗಿ ಒಡೆದು ಹಂಚಿಕೆ ಮಾಡಲು ಸೂಚಿಸುತ್ತಿದೆ. ಇದರಿಂದಾಗಿ ಸಮುದಾಯಗಳು ಒಂದೊಂದು ಪ್ರತ್ಯೇಕ ಜಾತಿಗಳಾಗಿ ಒಡೆದಿವೆ. ಒಳಮೀಸಲಾತಿ ಇಂದು ಒಂದುಗೂಡುವಿಕೆಯ ಆಶಯವಾಗಿ ಜಾರಿಗೊಳ್ಳಲಿ.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಜಾತಿ ಇರುವವರೆಗೆ ಮೀಸಲಾತಿ ಇರಬೇಕು ಮತ್ತು ಒಳಮೀಸಲಾತಿ ಜಾರಿಗೊಳ್ಳಬೇಕು ಎಂಬ ಬಿಕ್ಕಟ್ಟಿನ ಸಂದರ್ಭವಿದು. ಮೀಸಲಾತಿಯನ್ನು ಉಳಿಸಿಕೊಳ್ಳುವ ಮತ್ತು ಸಂವಿಧಾನದ ಉಳುವಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಒಂದು ರಾಜಕೀಯ ವಿಷಯವಾಗಿದೆ. ಪ.ಜಾ, ಪ.ಪಂ.ಗಳ ಜನರಷ್ಟೇ ಅಲ್ಲ, ಆ ಹತ್ತು ಪ್ರತಿಶತ ಮೀಸಲಾತಿಗೆ ಒಳಪಡದ ಎಲ್ಲ ಜಾತಿ ಜನರೂ ಹೋರಾಡಬೇಕಿದೆ. ಐವತ್ತರಿಂದ ಅರವತ್ತು ಪ್ರತಿಶತಕ್ಕೆ (ಸುಪ್ರೀಂ ಕೋರ್ಟ್ ಆದೇಶ ಮೀರಿಯೂ) ಹೆಚ್ಚಿದ್ದರಿಂದ ಬಾಕಿ ಉಳಿದ ನಲವತ್ತು ಪ್ರತಿಶತ ಮೀಸಲಾತಿ ಕೆಲವೇ ಜಾತಿ ಜನರಿಗೆ ಲಭಿಸುತ್ತದೆ. ಈ ಅಸಮಾನತೆಯನ್ನು ತೊಲಗಿಸಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸಿ ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿಯನ್ನು ಜಾರಿಗೊಳಿಸಬೇಕು. ಇದರಿಂದಾಗಿ ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನಿಡಲು ಸಾಧ್ಯವಾಗುತ್ತದೆ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಪ.ಜಾ, ಪ.ಪಂ.ಗಳ ಮೀಸಲಾತಿಯನ್ನು ಜಾರಿಗೊಳಿಸುವಾಗ ಕಾರಣಗಳನ್ನು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆಯ ನೋವು-ಅವಮಾನಗಳಿಗೆ ಒಳಗಾದವರು ಎಂಬುದೂ ಮುಖ್ಯವಾಗಿದೆ. ಆದ್ದರಿಂದ ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆ. ಸಮುದಾಯಗಳ ಕಾಳಜಿ ಉಳ್ಳವರಾಗಿದ್ದಾರೆ. ಒಳಮೀಸಲಾತಿ ಅವರನ್ನು ಒಡೆದು ಅಳುತ್ತಿರುವುದು ನಿಜ. ಕರ್ನಾಟಕದಲ್ಲಿ ಆಯಾ ಪ್ರದೇಶವಾರು ಎಡಗೈ ಮತ್ತು ಬಲಗೈಗಳವರ ಪರಿಸ್ಥಿತಿ ಭಿನ್ನವಾಗಿದ್ದರಿಂದ ಕೆಲವು ಭಾಗದಲ್ಲಿ ಎಡಗೈನವರು ಕೆಲವು ಭಾಗದಲ್ಲಿ ಬಲಗೈನವರು ಹೆಚ್ಚು ಮೀಸಲಾತಿಯ ಸೌಲಭ್ಯವನ್ನು ಪಡೆದಿದ್ದಾರೆಂಬ ವಾದವಿತ್ತಾದ್ದರಿಂದ ಅದು ಪರಸ್ಪರ ವಿರುದ್ಧ ಧ್ವನಿಯಾಗಿ ಕಂಡಿದೆ. ಪ್ರದೇಶವಾರು ಆಯಾ ಜಾತಿಗಳು ಪಡೆದ ಮೀಸಲಾತಿಯ ವರದಿಯೊಂದು ಸಿದ್ಧವಾಗಿದ್ದರೆ ವಾಸ್ತವದ ಅರಿವು ಮೂಡಿ ಒಂದಾಗಬಹುದಾಗಿತ್ತು. ಇದರಿಂದಾಗಿ ಇಬ್ಬರ ನಡುವೆ ಭಿನ್ನತೆ ಉಂಟಾಯಿತು. ಈಗ ಇಬ್ಬರಿಗೂ ಒಳಮೀಸಲಾತಿಯಿಂದಾಗಿ ರಾಜಕೀಯವಾಗಿ ಅಧಿಕಾರ ವಂಚಿತರಾಗುತ್ತಿರುವುದು ಮನದಟ್ಟಾಗಿದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಒಳಮೀಸಲಾತಿ ಇಟ್ಟುಕೊಂಡು ಒಡೆದು ಆಳುತ್ತಿರುವ ವಾಸ್ತವ ಸತ್ಯ. ಕಳೆದ ಲೋಕಸಭಾ ಚುನಾವಣೆ ಇದಕ್ಕೆ ನಿದರ್ಶನ. ಎರಡೂ ಬಣಗಳವರು ಒಳಮೀಸಲಾತಿ ಆದಷ್ಟು ಬೇಗ ಜಾರಿಗೆ ಬರಲಿ ಎಂಬ ಆಶಯವುಳ್ಳವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ತೀರ್ಪೂ ಬಂದಿದೆ. ಒಳಮೀಸಲಾತಿಗೂ ರಾಜಕೀಯಕ್ಕೂ ನೇರಾನೇರ ಸಂಬಂಧವಿರುವುದರಿಂದ ತಮ್ಮ ಒಗ್ಗಟ್ಟಿನಲ್ಲಿ ರಾಜಕೀಯ ಅಧಿಕಾರವಿದೆ ಎಂಬ ಅರಿವು ಮೂಡಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿ ಜಾರಿಗೆ ಬರಲಿ. ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸುವ ಸಂಬಂಧವಾಗಿ, ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿ ನೀಡಲು ಮತ್ತು ಖಾಸಗಿ ವಲಯಕ್ಕೂ ಮೀಸಲಾತಿಯನ್ನು ವಿಸ್ತರಿಸುವ ಹಿನ್ನೆಲೆಯಲ್ಲಿ ಸರ್ಕಾರವು ಆಯೋಗಗಳನ್ನು ರಚಿಸಲಿ.

 

ಡಾ. ಅನಸೂಯ ಕಾಂಬಳೆ

(ಬರಹಗಾರ್ತಿ ಅನಸೂಯ ಸಾಹಿತ್ಯದಲ್ಲಿ ದಲಿತ ಸಂವೇದನೆಯನ್ನು ದಾಖಲಿಸಿದ ಪ್ರಮುಖರಲ್ಲಿ ಒಬ್ಬರು. ‘ಮುಳ್ಳು ಕಂಟಿಯ ನಡುವೆ’ ಸೇರಿದಂತೆ ಹಲವು ಕವನಸಂಕಲನಗಳು ಪ್ರಕಟವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹಗಳ ಬಗ್ಗೆ ಅಧ್ಯಯನ ಮಾಡಿರುವುದಲ್ಲದೆ ಕನ್ನಡದ ಸಾಹಿತ್ಯದ ಮೇಲೆ ಬಾಬಾಸಾಹೇಬರ ಪ್ರಭಾವದ ಬಗ್ಗೆಯೂ ಪ್ರಬಂಧ ಮಂಡಿಸಿದ್ದಾರೆ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...