Homeಮುಖಪುಟಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಖಾಸಗಿ ವಲಯಕ್ಕೂ ಮೀಸಲಾತಿ ವಿಸ್ತರಿಸಲು ಸರ್ಕಾರ ಆಯೋಗ ರಚಿಸಲಿ: ಡಾ. ಅನಸೂಯ ಕಾಂಬಳೆ

ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

- Advertisement -
- Advertisement -

ಒಳ ಮೀಸಲಾತಿ ಚರ್ಚೆಯ ಹಿನ್ನಲೆಯಲ್ಲಿ ಮೂಡಿಬರುತ್ತಿರುವ ಈ ವಿಶೇಷ ಸಂಚಿಕೆಯಲ್ಲಿ ಕರ್ನಾಟಕದ ಹಲವು ಹೋರಾಟಗಾರರು ಮತ್ತು ಸಾಹಿತಿಗಳ ಸಂದರ್ಶನ ನಡೆಸಿದ್ದವು. ಈ ಸಂದರ್ಶನಗಳನ್ನು ಹುಲಿಕುಂಟೆ ಮೂರ್ತಿ ಮತ್ತು ವಿಕಾಸ್ ಮೌರ್ಯ ಸಂಯೋಜಿಸಿದ್ದಾರೆ. ನಮ್ಮ ಪ್ರಶ್ನೆಗಳಿಗೆ ಅನುಸೂಯ ಕಾಂಬಳೆ ಉತ್ತರಿಸಿದ್ದಾರೆ. ಪ್ರಶ್ನೆಗಳು ಇಲ್ಲಿವೆ.

1. ಒಳಮೀಸಲಾತಿಯ ಬಗ್ಗೆ ನಿಮ್ಮ ನಿಲುವೇನು?

ಮೀಸಲಾತಿ ಜಾರಿಗೆ ಬಂದ ಸಂದರ್ಭ ಮತ್ತು ಬದಲಾದ ಇಂದಿನ ಪರಿಸ್ಥಿತಿ ಎರಡೂ ಬೇರೆ ಬೇರೆ. ಮೀಸಲಾತಿ ನಿಗದಿಗೊಳಿಸಿದಾಗ ಪಟ್ಟಿಯಲ್ಲಿ ಆರು ಜಾತಿಗಳಿದ್ದವು. ಈಗ ನೂರಾಒಂದು ಜಾತಿಗಳನ್ನು ಆ ಪಟ್ಟಿಗೆ ಸೇರಿಸಿದಾಗಲೂ ಪ್ರತಿಶತ ಮೀಸಲಾತಿಯನ್ನು ಹೆಚ್ಚಿಸಿಲ್ಲ. ವಿಪರೀತ ಖಾಸಗೀಕರಣದಿಂದಾಗಿ ಸರ್ಕಾರಿ ವಲಯದ ಶಿಕ್ಷಣ ಮತ್ತು ನೌಕರಿಯಲ್ಲಿ ಮೀಸಲಾತಿ ಸಾಂಕೇತಿಕವಾಗಿ ಮಾತ್ರ ಉಳಿದಿದೆ. ಮೀಸಲಾತಿಯಲ್ಲಿ ಹೆಚ್ಚಳ ಆಗಬೇಕು ಮತ್ತು ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು ಎಂಬ ಹೋರಾಟಗಳು ಹುಟ್ಟಬೇಕಾದ ಸಂದರ್ಭದಲ್ಲಿ ಒಳಮೀಸಲಾತಿಯ ಚರ್ಚೆ ಮುನ್ನಲೆಗೆ ಬಂತು. ಒಳಮೀಸಲಾತಿಯಿಂದ ಪರಿಶಿಷ್ಟ ಜಾತಿ ಸಮುದಾಯಗಳಲ್ಲಿ ಸಮಾನತೆ ಬರುತ್ತದೆ ಎಂದು ಹೇಳುತ್ತಿದ್ದಾರೆ.

ಹೀಗೆ ಹೇಳುವವರು ಸಮಾನತೆಯನ್ನು ಯಾವ ಮಾನದಂಡಗಳಿಂದ ಆಳೆಯುತ್ತಿದ್ದಾರೆ ಗೊತ್ತಿಲ್ಲ. ಆದರೆ ಇದುವರೆಗೂ ಮೀಸಲಾತಿಯ ಫಲಾನುಭವಿಗಳಾಗದ ಜನರಿಗೆ ಮೀಸಲಾತಿ ದೊರೆಯುವಂತೆ ಮಾಡುವುದು ನ್ಯಾಯ. ಅದಕ್ಕಾಗಿ ಒಳಮೀಸಲಾತಿಯ ಅವಶ್ಯಕತೆ ಇದೆ.

2. ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಭಿನ್ನವೇ ಅಥವಾ ಒಂದೆಯೇ?

ಒಳಮೀಸಲಾತಿ ಮತ್ತು ಮೀಸಲಾತಿ ಎರಡರ ತಾತ್ವಿಕತೆಯೂ ಒಂದೇ. ಆದರೆ ಪರಿಸ್ಥಿತಿ ಭಿನ್ನ. ಪಟ್ಟಿಯಲ್ಲಿರುವ ಎಲ್ಲ ಕೆಳಜಾತಿಗಳನ್ನು ಒಂದು ಸಮೂಹವಾಗಿ ನಿಗದಿಗೊಳಿಸಿ ನೀಡಿದ್ದ ಮೀಸಲಾತಿಯನ್ನು ಇಂದು ಜಾತಿ-ಜಾತಿಗಳಾಗಿ ಒಡೆದು ಹಂಚಿಕೆ ಮಾಡಲು ಸೂಚಿಸುತ್ತಿದೆ. ಇದರಿಂದಾಗಿ ಸಮುದಾಯಗಳು ಒಂದೊಂದು ಪ್ರತ್ಯೇಕ ಜಾತಿಗಳಾಗಿ ಒಡೆದಿವೆ. ಒಳಮೀಸಲಾತಿ ಇಂದು ಒಂದುಗೂಡುವಿಕೆಯ ಆಶಯವಾಗಿ ಜಾರಿಗೊಳ್ಳಲಿ.

3. ಮೀಸಲಾತಿಗೆ ಶೇ.50 ರ ಮಿತಿ ಹೇರಿಕೆ, ಶೇ.3 ರಷ್ಟಿರುವ ಸಮುದಾಯಗಳಿಗೆ ಶೇ. 10 ಮೀಸಲಾತಿ ಕಲ್ಪಿಸಿರುವುದರ ವಿರುದ್ಧ ಹೋರಾಟಗಳಾಗಲಿಲ್ಲವೇಕೆ?

ಜಾತಿ ಇರುವವರೆಗೆ ಮೀಸಲಾತಿ ಇರಬೇಕು ಮತ್ತು ಒಳಮೀಸಲಾತಿ ಜಾರಿಗೊಳ್ಳಬೇಕು ಎಂಬ ಬಿಕ್ಕಟ್ಟಿನ ಸಂದರ್ಭವಿದು. ಮೀಸಲಾತಿಯನ್ನು ಉಳಿಸಿಕೊಳ್ಳುವ ಮತ್ತು ಸಂವಿಧಾನದ ಉಳುವಿಗಾಗಿ ಹೋರಾಡಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ನೀಡಿದ ಮೀಸಲಾತಿ ಒಂದು ರಾಜಕೀಯ ವಿಷಯವಾಗಿದೆ. ಪ.ಜಾ, ಪ.ಪಂ.ಗಳ ಜನರಷ್ಟೇ ಅಲ್ಲ, ಆ ಹತ್ತು ಪ್ರತಿಶತ ಮೀಸಲಾತಿಗೆ ಒಳಪಡದ ಎಲ್ಲ ಜಾತಿ ಜನರೂ ಹೋರಾಡಬೇಕಿದೆ. ಐವತ್ತರಿಂದ ಅರವತ್ತು ಪ್ರತಿಶತಕ್ಕೆ (ಸುಪ್ರೀಂ ಕೋರ್ಟ್ ಆದೇಶ ಮೀರಿಯೂ) ಹೆಚ್ಚಿದ್ದರಿಂದ ಬಾಕಿ ಉಳಿದ ನಲವತ್ತು ಪ್ರತಿಶತ ಮೀಸಲಾತಿ ಕೆಲವೇ ಜಾತಿ ಜನರಿಗೆ ಲಭಿಸುತ್ತದೆ. ಈ ಅಸಮಾನತೆಯನ್ನು ತೊಲಗಿಸಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸಿ ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿಯನ್ನು ಜಾರಿಗೊಳಿಸಬೇಕು. ಇದರಿಂದಾಗಿ ಭಾರತೀಯ ವ್ಯವಸ್ಥೆಯಲ್ಲಿ ರಾಜಕೀಯ, ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಅಸಮಾನತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರಿಯಾದ ಹೆಜ್ಜೆಗಳನ್ನಿಡಲು ಸಾಧ್ಯವಾಗುತ್ತದೆ.

4. ಸ್ಪೃಶ್ಯರನ್ನು ಪರಿಶಿಷ್ಠ ಜಾತಿ ಪಟ್ಟಿಯಿಂದ ಹೊರಗಿಡಬೇಕೆಂಬುದರ ಬಗ್ಗೆ ನಿಮ್ಮ ಅಭಿಪ್ರಾಯವೇನು?

ಪ.ಜಾ, ಪ.ಪಂ.ಗಳ ಮೀಸಲಾತಿಯನ್ನು ಜಾರಿಗೊಳಿಸುವಾಗ ಕಾರಣಗಳನ್ನು ಸಂವಿಧಾನದಲ್ಲಿ ಸ್ಪಷ್ಟಪಡಿಸಲಾಗಿದೆ. ಅಸ್ಪೃಶ್ಯತೆಯ ನೋವು-ಅವಮಾನಗಳಿಗೆ ಒಳಗಾದವರು ಎಂಬುದೂ ಮುಖ್ಯವಾಗಿದೆ. ಆದ್ದರಿಂದ ಅಸ್ಪೃಶ್ಯ ಜಾತಿಗಳ ಪಟ್ಟಿಯಿಂದ ಸ್ಪೃಶ್ಯ ಜಾತಿಗಳನ್ನು ಹೊರತೆಗೆದು ಅವರಿಗೆ ಪ್ರತ್ಯೇಕ ಮೀಸಲಾತಿಯನ್ನು ನೀಡಬೇಕು.

5. ಕೆಲವು ಬಲಗೈ ರಾಜಕಾರಣಿಗಳು ಒಳಮೀಸಲಾತಿ ವಿರುದ್ಧವಾಗಿ ದನಿ ಎತ್ತಿದ ಕಾರಣಕ್ಕೆ ಹೊಲೆಮಾದಿಗರ ನಡುವೆ ಭಿನ್ನತೆ ಉಂಟಾಯಿತು ಎನ್ನಲಾಗುತ್ತದೆ. ನಿಜಕ್ಕೂ ಆಯಾ ದಲಿತ ಜಾತಿಗಳನ್ನು ಪ್ರತಿನಿಧಿಸುವ ಪ್ರಾಮಾಣಿಕ ರಾಜಕಾರಣಿಗಳು ಇಂದಿಗೂ ಇದ್ದಾರೆಯೇ?

ಪ್ರಾಮಾಣಿಕ ರಾಜಕಾರಣಿಗಳು ಇದ್ದಾರೆ. ಸಮುದಾಯಗಳ ಕಾಳಜಿ ಉಳ್ಳವರಾಗಿದ್ದಾರೆ. ಒಳಮೀಸಲಾತಿ ಅವರನ್ನು ಒಡೆದು ಅಳುತ್ತಿರುವುದು ನಿಜ. ಕರ್ನಾಟಕದಲ್ಲಿ ಆಯಾ ಪ್ರದೇಶವಾರು ಎಡಗೈ ಮತ್ತು ಬಲಗೈಗಳವರ ಪರಿಸ್ಥಿತಿ ಭಿನ್ನವಾಗಿದ್ದರಿಂದ ಕೆಲವು ಭಾಗದಲ್ಲಿ ಎಡಗೈನವರು ಕೆಲವು ಭಾಗದಲ್ಲಿ ಬಲಗೈನವರು ಹೆಚ್ಚು ಮೀಸಲಾತಿಯ ಸೌಲಭ್ಯವನ್ನು ಪಡೆದಿದ್ದಾರೆಂಬ ವಾದವಿತ್ತಾದ್ದರಿಂದ ಅದು ಪರಸ್ಪರ ವಿರುದ್ಧ ಧ್ವನಿಯಾಗಿ ಕಂಡಿದೆ. ಪ್ರದೇಶವಾರು ಆಯಾ ಜಾತಿಗಳು ಪಡೆದ ಮೀಸಲಾತಿಯ ವರದಿಯೊಂದು ಸಿದ್ಧವಾಗಿದ್ದರೆ ವಾಸ್ತವದ ಅರಿವು ಮೂಡಿ ಒಂದಾಗಬಹುದಾಗಿತ್ತು. ಇದರಿಂದಾಗಿ ಇಬ್ಬರ ನಡುವೆ ಭಿನ್ನತೆ ಉಂಟಾಯಿತು. ಈಗ ಇಬ್ಬರಿಗೂ ಒಳಮೀಸಲಾತಿಯಿಂದಾಗಿ ರಾಜಕೀಯವಾಗಿ ಅಧಿಕಾರ ವಂಚಿತರಾಗುತ್ತಿರುವುದು ಮನದಟ್ಟಾಗಿದೆ.

6. ಒಳಮೀಸಲಾತಿ ದಲಿತರನ್ನು ಒಡೆದು ಆಳುತ್ತದೆ ಎಂದು ಆರಂಭದಲ್ಲಿ ಭಯ ಬೀಳಿಸಿದ್ದಿದೆ. ಆದರೆ ಈಗ ಒಳಮೀಸಲಾತಿ ಜಾರಿಯಾಗದಿದ್ದರೆ ದಲಿತರ ಒಗ್ಗಟ್ಟು ಸಂಪೂರ್ಣ ಮುರಿದು ಬೀಳುತ್ತದೆ ಎಂಬ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ನಿಮ್ಮ ಅಭಿಪ್ರಾಯವೇನು?

ಒಳಮೀಸಲಾತಿ ಇಟ್ಟುಕೊಂಡು ಒಡೆದು ಆಳುತ್ತಿರುವ ವಾಸ್ತವ ಸತ್ಯ. ಕಳೆದ ಲೋಕಸಭಾ ಚುನಾವಣೆ ಇದಕ್ಕೆ ನಿದರ್ಶನ. ಎರಡೂ ಬಣಗಳವರು ಒಳಮೀಸಲಾತಿ ಆದಷ್ಟು ಬೇಗ ಜಾರಿಗೆ ಬರಲಿ ಎಂಬ ಆಶಯವುಳ್ಳವರಾಗಿದ್ದಾರೆ. ಇದೇ ಸಂದರ್ಭದಲ್ಲಿ ಸುಪ್ರೀಂ ಕೋರ್ಟಿನ ತೀರ್ಪೂ ಬಂದಿದೆ. ಒಳಮೀಸಲಾತಿಗೂ ರಾಜಕೀಯಕ್ಕೂ ನೇರಾನೇರ ಸಂಬಂಧವಿರುವುದರಿಂದ ತಮ್ಮ ಒಗ್ಗಟ್ಟಿನಲ್ಲಿ ರಾಜಕೀಯ ಅಧಿಕಾರವಿದೆ ಎಂಬ ಅರಿವು ಮೂಡಿದೆ.

7. ಸದಾಶಿವ ಆಯೋಗದ ವರದಿ ಜಾರಿ ಮಾಡುವುದರ ಕುರಿತು ನಿಮ್ಮ ಅನಿಸಿಕೆ ಏನು?

ಸದಾಶಿವ ಆಯೋಗದ ವರದಿ ಜಾರಿಗೆ ಬರಲಿ. ಎಲ್ಲಾ ಜಾತಿಗಳಿಗೂ ಮೀಸಲಾತಿಯನ್ನು ನಿಗದಿಗೊಳಿಸುವ ಸಂಬಂಧವಾಗಿ, ನೂರಕ್ಕೆ ನೂರರಷ್ಟು ಜಾತಿ ಜನಸಂಖ್ಯಾವಾರು ಮೀಸಲಾತಿ ನೀಡಲು ಮತ್ತು ಖಾಸಗಿ ವಲಯಕ್ಕೂ ಮೀಸಲಾತಿಯನ್ನು ವಿಸ್ತರಿಸುವ ಹಿನ್ನೆಲೆಯಲ್ಲಿ ಸರ್ಕಾರವು ಆಯೋಗಗಳನ್ನು ರಚಿಸಲಿ.

 

ಡಾ. ಅನಸೂಯ ಕಾಂಬಳೆ

(ಬರಹಗಾರ್ತಿ ಅನಸೂಯ ಸಾಹಿತ್ಯದಲ್ಲಿ ದಲಿತ ಸಂವೇದನೆಯನ್ನು ದಾಖಲಿಸಿದ ಪ್ರಮುಖರಲ್ಲಿ ಒಬ್ಬರು. ‘ಮುಳ್ಳು ಕಂಟಿಯ ನಡುವೆ’ ಸೇರಿದಂತೆ ಹಲವು ಕವನಸಂಕಲನಗಳು ಪ್ರಕಟವಾಗಿವೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹಗಳ ಬಗ್ಗೆ ಅಧ್ಯಯನ ಮಾಡಿರುವುದಲ್ಲದೆ ಕನ್ನಡದ ಸಾಹಿತ್ಯದ ಮೇಲೆ ಬಾಬಾಸಾಹೇಬರ ಪ್ರಭಾವದ ಬಗ್ಗೆಯೂ ಪ್ರಬಂಧ ಮಂಡಿಸಿದ್ದಾರೆ.)


ಇದನ್ನೂ ಓದಿ: ಒಳ ಮೀಸಲಾತಿ: ಕಣ್ಣ ಗಾಯವನರಿಯುವ ಕ್ರಮ – ಹುಲಿಕುಂಟೆ ಮೂರ್ತಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...