Homeಕರ್ನಾಟಕಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

- Advertisement -
- Advertisement -

“ಲಸಿಕೆ ವಿಚಾರದಲ್ಲಿ ಸರ್ಕಾರ ತನ್ನ ಸಲಹೆಗಾರರಾದ ಗಗನ್ ದೀಪ್ ಕಾಂಗ್ ಅವರ ಮಾತು ಕೇಳಿದರೆ ಸಾಕು, ಪರಿಣಾಮಕಾಯಾಗಿ ಲಸಿಕೆ ವಿತರಣೆ ಮಾಡಬಹುದು. ಆದರೆ ಸರ್ಕಾರ ತನ್ನ ಸಲಹೆಗಾರರ ಮಾತನ್ನು ಒಪ್ಪಲು ಸಿದ್ಧವಿದೆಯೇ?” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ ಷ ಡಿ.ಕೆ. ಶಿವಕುಮಾರು ಪ್ರಶ್ನಿಸಿದ್ದಾರೆ.

ಕಾಂಗ್ ಅವರು ಖ್ಯಾತ ವೈರಾಣು ತಜ್ಞರಾಗಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ವೈರಾಣು ವಿಜ್ಞಾನ. ವಿಭಾಗದ ಪ್ರೊಫೆಸರ್ ಆಗಿದ್ದಾರೆ. ಕಳೆದ ತಿಂಗಳು ರಾಜ್ಯ ಸರ್ಕಾರ ಇವರನ್ನು ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿತ್ತು.

“ಕಾಂಗ್ ಅವರ ನೇಮಕವಾದಾಗ ಸರ್ಕಾರ ಕಡೆಗೂ ವಿಜ್ಞಾನಿಗಳ ಸಲಹೆ ಪಡೆಯಲು ಮುಂದಾಗಿದೆ ಎಂದು ಭಾವಿಸಿದ್ದೆವು. ಆದರೆ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ಹೊಂದಾಣಿಕೆಯೇ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಕೇವಲ ಪ್ರಚಾರಕ್ಕೆ ಮಾತ್ರ ಸಲಹೆಗಾರರನ್ನು ನೇಮಕ ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ ಅವರು ಕೊರೊನಾ ನಿರ್ವಹಣೆ ವಿಚಾರವಾಗಿ ವ್ಯಕ್ತಪಡಿಸಿರುವ 10 ಅಂಶಗಳನ್ನು ಡಿ.ಕೆ. ಶಿವಕುಮಾರ್ ಅವರು ಉಲ್ಲೇಖಿಸಿದ್ದು, ಕಾಂಗ್ ಅವರ ಅಭಿಪ್ರಾಯಗಳನ್ನು ಸರ್ಕಾರ ಪರಿಗಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

“ಲಸಿಕೆ ಖರೀದಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮಾಡಬೇಕೇ ಹೊರತು, ರಾಜ್ಯ ಸರ್ಕಾರವಲ್ಲ ಎಂದು ಸಲಹೆಗಾರರು ಅಭಿಪ್ರಾಯಪಟ್ಟಿದ್ದು, ಇದನ್ನು ಸರ್ಕಾರ ಒಪ್ಪುತ್ತದೆಯೇ? ಕೇಂದ್ರ ಸರಕಾರವು ಜಾಗತಿಕ ಕಂಪನಿಗಳಿಂದ ಲಸಿಕೆ ಖರೀದಿಯಲ್ಲಿ ವಿಳಂಬ ಮಾಡಿದೆ ಎಂಬುದನ್ನಾದರೂ ಸರ್ಕಾರ ಒಪ್ಪಿಕೊಳ್ಳುತ್ತದೆಯೇ?
ಕಾಂಗ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ‘ಇಡೀ ವಿಶ್ವ ಮುಂದಿನ ಒಂದು ವರ್ಷದಲ್ಲಿ ಎದುರಾಗುವ ಸವಾಲು ಎದುರಿಸಲು ಲಸಿಕೆ ಖರೀದಿ ಮಾಡುತ್ತಿದೆ. ಆದರೆ ನಮಗೆ ಮಾರುಕಟ್ಟೆಯಲ್ಲಿ ಸದ್ಯದ ಬೇಡಿಕೆಯಷ್ಟು ಮಾತ್ರ ಲಸಿಕೆ ಲಭ್ಯವಾಗುತ್ತಿದೆ. ಹೀಗಾಗಿ ನಾವು ಹೆಚ್ಚಿನ ಪ್ರಮಾಣದ ಲಸಿಕೆ ಖರೀದಿಸಬೇಕು’ ಎಂದಿದ್ದಾರೆ” ಎಂದು ಡಿಕೆಶಿ ಉಲ್ಲೇಖಿಸಿದ್ದಾರೆ.

“ಅಲ್ಲದೆ, ಕಾಂಗ್ ಅವರು ಜಾಗತಿಕ ಟೆಂಡರ್ ಅನ್ನು ಸಂಪನ್ಮೂಲದ ವ್ಯರ್ಥ ಎಂದು ಹೇಳಿರುವ ದಾಖಲೆಗಳಿವೆ. ಹಾಗಾದರೆ ಕರ್ನಾಟಕ ಸರ್ಕಾರವು ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿ ನಿರ್ಧಾರದಲ್ಲಿ ಸಲಹೆಗಾರರ ಅಭಿಪ್ರಾಯವನ್ನು ಪರಿಗಣಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗತಿಕ ಟೆಂಡರ್ ಮೂಲಕ ಎಷ್ಟು ಪ್ರಮಾಣದ ಲಸಿಕೆಯನ್ನು, ಯಾವಾಗ ಖರೀದಿ ಮಾಡಲಿದೆ ಎಂಬ ಮಾಹಿತಿ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

“ಕೇಂದ್ರ ಸರ್ಕಾರ ಈ ವರ್ಷ ಡಿಸೆಂಬರ್ ವೇಳೆಗೆ 2 ಕೋಟಿ ಡೋಸ್ ಲಸಿಕೆ ಖರೀದಿ ಮಾಡುವುದಾಗಿ ತಿಳಿಸಿದ್ದು, ಕಾಂಗ್ ಅವರು, ‘ಇದು ವಾಸ್ತವಾಂಶಕ್ಕೆ ದೂರವಾದದ್ದು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಒಪ್ಪುತ್ತದೆಯೇ? ಹಾಗೂ ರಾಜ್ಯದಲ್ಲಿರುವ ಎಲ್ಲ ವಯಸ್ಕರಿಗೂ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲು ಹಾಕಿಕೊಂಡಿರುವ ಕಾಲಮಿತಿಯ ಬಗ್ಗೆ ವಿವರ ನೀಡುತ್ತದೆಯೇ?” ಎಂದು ಕೇಳಿದ್ದಾರೆ.

“ಜನವರಿ ತಿಂಗಳಲ್ಲಿ ಕೋವ್ಯಾಕ್ಸಿನ್ ಅಂತಿಮ ಪರೀಕ್ಷೆ ವರದಿ ಪ್ರಕಟವಾಗುವ ಮುನ್ನವೇ ಅದರ ಬಳಕೆಗೆ ಅನುಮತಿ ನೀಡಿದ್ದನ್ನು ಡಾ. ಕಾಂಗ್ ಅವರು ಪ್ರಶ್ನಿಸಿದ್ದರು. ಜತೆಗೆ, ಕೋವ್ಯಾಕ್ಸಿನ್ ಅಂತಿಮ ಪರೀಕ್ಷಾ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಬೆಂಬಲಿಸುತ್ತದೆಯೇ” ಎಂದು ಸರ್ಕಾರವನ್ನು ಅವರು ಕೇಳಿದ್ದಾರೆ.

“ದೇಶದಲ್ಲಿ ಎರಡನೇ ಅಲೆ ವಿಚಾರವಾಗಿ ಭಾರತ ಸರ್ಕಾರದ ನಿರ್ಲಕ್ಷ್ಯವನ್ನು ಡಾ.ಕಾಂಗ್ ಅವರು ಪ್ರಶ್ನಿಸಿದ್ದರು. ‘ಸೋಂಕು ಹೆಚ್ಚಳದ ಬಗ್ಗೆ ನಾವು ಆರಂಭದಲ್ಲೇ ಗಮನ ಹರಿಸಬೇಕಿತ್ತು. ಕಡೇ ಪಕ್ಷ ಮಾರ್ಚ್ ಆರಂಭದಲ್ಲಾದರೂ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ನಾವದನ್ನು ಮಾಡಲಿಲ್ಲ’ ಎಂದು ಹೇಳಿದ್ದಾರೆ” ಎಂದು ಡಿಕೆಶಿ ಹೇಳಿದ್ದಾರೆ.

“ಅವರನ್ನು ರಾಜ್ಯದ ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡ ನಂತರವೂ ಸರ್ಕಾರ ಮಾರ್ಚ್ ತಿಂಗಳಲ್ಲಿ ಸೋಂಕು ಪ್ರಕರಣ ಹೆಚ್ಚಳದ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿತ್ತು ಎಂಬುದನ್ನು ಸರ್ಕಾರ ಒಪ್ಪಿಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

“ಗಗನ್ ದೀಪ್ ಕಾಂಗ್ ಅವರು ಸಂದರ್ಶನವೊಂದರಲ್ಲಿ, ‘ನಾವು ಪ್ರಸ್ತುತ ರೀತಿಯಲ್ಲೇ ಸಾಗಿದರೆ ನಿರಂತರವಾಗಿ ಸೋಂಕು ಹರಡುತ್ತಾ ಹೋಗುತ್ತದೆ. ನಂತರ ಅದು ಅತ್ಯಂತ ಮಾರಕ ವೈರಾಣುವಾಗಿ ರೂಪುಗೊಳ್ಳಬಹುದು. ಆಗ ಪ್ರತಿ ವರ್ಷ ಒಂದು ಅಥವಾ ಎರಡು ಅಲೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಈ ಸಲಹೆಯನ್ನಾದರೂ ಕೇಳುತ್ತದೆಯೇ? ಮಂದಗತಿಯಲ್ಲಿ ಲಸಿಕೆ ಹಾಕುವ ಮೂಲಕ ಸೋಂಕು ಹರಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ? ಅಥವಾ ಕೊರೊನಾವನ್ನು ಶಾಶ್ವತವಾಗಿ ಮಣಿಸಲು ಸಮೂಹ ಲಸಿಕೆ ಕಾರ್ಯಕ್ರಮದ ಬಗ್ಗೆ ಸರ್ಕಾರ ಏನಾದರೂ ಯೋಜನೆ ರೂಪಿಸಿದೆಯೇ?” ಎಂದು ಅವರು ಕೇಳಿದ್ದಾರೆ.

“ಅಂತಿಮವಾಗಿ ಡಾ. ಕಾಂಗ್ ಅವರು, ‘ಭಾರತ ಸರ್ಕಾರ ಸೋಂಕು ಪ್ರಕರಣ ಹಾಗೂ ಲಸಿಕೆ ಕುರಿತ ನೈಜ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಆಗ ಮಾತ್ರ ಕೋವಿಡ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯ’ ಎಂದು ಹೇಳಿದ್ದಾರೆ. ‘ಕಳಪೆ ಅಂಕಿ-ಅಂಶಗಳಿಂದಾಗಿ ಭಾರತದಲ್ಲಿ ಲಸಿಕೆ ಕಾರ್ಯಕ್ರಮದ ಪರಿಣಾಮವನ್ನು ಅಳೆಯಲು ಸಾಧ್ಯವಾಗುತ್ತಿಲ್ಲ ಎಂದೂ ತಿಳಿಸಿದ್ದಾರೆ. ಭಾರತದಲ್ಲಿ ಲಸಿಕೆ ಸಾಮರ್ಥ್ಯದ ಬಗ್ಗೆ ಅಧ್ಯಯನ, ಸಮೀಕ್ಷೆ, ವೈಜ್ಞಾನಿಕ ವಿಶ್ಲೇಷಣೆ ನಡೆಸಬೇಕು’ ಎಂದು ಅವರು ತಿಳಿಸಿದ್ದಾರೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

“ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಬಿಜೆಪಿ ನಾಯಕರು ಕಾಳಸಂತೆಯಲ್ಲಿ ಲಸಿಕೆ ಮಾರಿಕೊಳ್ಳಲು ಅವಕಾಶ ನೀಡುವುದನ್ನು ಬಿಟ್ಟು, ಕೊರೊನಾ ನಿರ್ವಹಣೆ ವಿಚಾರದಲ್ಲಿ ಮೊದಲು ತನ್ನ ಸಲಹೆಗಾರರ ಮಾತನ್ನು ಕೇಳಬೇಕಿದೆ” ಎಂದು ಡಿ.ಕೆ. ಶಿವಕುಮಾರ್‌‌ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...