Homeಕರ್ನಾಟಕಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

ಲಸಿಕೆ ವಿತರಣೆಗೆ ಸರ್ಕಾರ ತನ್ನ ಸಲಹೆಗಾರನ ಮಾತು ಕೇಳಲಿ: ಡಿ.ಕೆ ಶಿವಕುಮಾರ್

- Advertisement -
- Advertisement -

“ಲಸಿಕೆ ವಿಚಾರದಲ್ಲಿ ಸರ್ಕಾರ ತನ್ನ ಸಲಹೆಗಾರರಾದ ಗಗನ್ ದೀಪ್ ಕಾಂಗ್ ಅವರ ಮಾತು ಕೇಳಿದರೆ ಸಾಕು, ಪರಿಣಾಮಕಾಯಾಗಿ ಲಸಿಕೆ ವಿತರಣೆ ಮಾಡಬಹುದು. ಆದರೆ ಸರ್ಕಾರ ತನ್ನ ಸಲಹೆಗಾರರ ಮಾತನ್ನು ಒಪ್ಪಲು ಸಿದ್ಧವಿದೆಯೇ?” ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ ಷ ಡಿ.ಕೆ. ಶಿವಕುಮಾರು ಪ್ರಶ್ನಿಸಿದ್ದಾರೆ.

ಕಾಂಗ್ ಅವರು ಖ್ಯಾತ ವೈರಾಣು ತಜ್ಞರಾಗಿದ್ದು, ವೆಲ್ಲೂರಿನ ಕ್ರಿಶ್ಚಿಯನ್ ಮೆಡಿಕಲ್ ಕಾಲೇಜಿನಲ್ಲಿ ವೈರಾಣು ವಿಜ್ಞಾನ. ವಿಭಾಗದ ಪ್ರೊಫೆಸರ್ ಆಗಿದ್ದಾರೆ. ಕಳೆದ ತಿಂಗಳು ರಾಜ್ಯ ಸರ್ಕಾರ ಇವರನ್ನು ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡಿತ್ತು.

“ಕಾಂಗ್ ಅವರ ನೇಮಕವಾದಾಗ ಸರ್ಕಾರ ಕಡೆಗೂ ವಿಜ್ಞಾನಿಗಳ ಸಲಹೆ ಪಡೆಯಲು ಮುಂದಾಗಿದೆ ಎಂದು ಭಾವಿಸಿದ್ದೆವು. ಆದರೆ ಸಲಹೆಗಾರರ ಅಭಿಪ್ರಾಯಕ್ಕೂ ಸರ್ಕಾರದ ನಿರ್ಧಾರಗಳಿಗೂ ಹೊಂದಾಣಿಕೆಯೇ ಆಗುತ್ತಿಲ್ಲ. ಹೀಗಾಗಿ ಸರ್ಕಾರ ಕೇವಲ ಪ್ರಚಾರಕ್ಕೆ ಮಾತ್ರ ಸಲಹೆಗಾರರನ್ನು ನೇಮಕ ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಲಾಕ್‌ಡೌನ್‌ ಸಂಕಷ್ಟ – ಮಗನ ಚಿಕಿತ್ಸೆಗಾಗಿ ಪ್ರತಿ ತಿಂಗಳು 400 ಕಿ.ಮಿ. ಸೈಕಲ್‌ ಪ್ರಯಾಣ

ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ ಅವರು ಕೊರೊನಾ ನಿರ್ವಹಣೆ ವಿಚಾರವಾಗಿ ವ್ಯಕ್ತಪಡಿಸಿರುವ 10 ಅಂಶಗಳನ್ನು ಡಿ.ಕೆ. ಶಿವಕುಮಾರ್ ಅವರು ಉಲ್ಲೇಖಿಸಿದ್ದು, ಕಾಂಗ್ ಅವರ ಅಭಿಪ್ರಾಯಗಳನ್ನು ಸರ್ಕಾರ ಪರಿಗಣಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

“ಲಸಿಕೆ ಖರೀದಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮಾಡಬೇಕೇ ಹೊರತು, ರಾಜ್ಯ ಸರ್ಕಾರವಲ್ಲ ಎಂದು ಸಲಹೆಗಾರರು ಅಭಿಪ್ರಾಯಪಟ್ಟಿದ್ದು, ಇದನ್ನು ಸರ್ಕಾರ ಒಪ್ಪುತ್ತದೆಯೇ? ಕೇಂದ್ರ ಸರಕಾರವು ಜಾಗತಿಕ ಕಂಪನಿಗಳಿಂದ ಲಸಿಕೆ ಖರೀದಿಯಲ್ಲಿ ವಿಳಂಬ ಮಾಡಿದೆ ಎಂಬುದನ್ನಾದರೂ ಸರ್ಕಾರ ಒಪ್ಪಿಕೊಳ್ಳುತ್ತದೆಯೇ?
ಕಾಂಗ್ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ‘ಇಡೀ ವಿಶ್ವ ಮುಂದಿನ ಒಂದು ವರ್ಷದಲ್ಲಿ ಎದುರಾಗುವ ಸವಾಲು ಎದುರಿಸಲು ಲಸಿಕೆ ಖರೀದಿ ಮಾಡುತ್ತಿದೆ. ಆದರೆ ನಮಗೆ ಮಾರುಕಟ್ಟೆಯಲ್ಲಿ ಸದ್ಯದ ಬೇಡಿಕೆಯಷ್ಟು ಮಾತ್ರ ಲಸಿಕೆ ಲಭ್ಯವಾಗುತ್ತಿದೆ. ಹೀಗಾಗಿ ನಾವು ಹೆಚ್ಚಿನ ಪ್ರಮಾಣದ ಲಸಿಕೆ ಖರೀದಿಸಬೇಕು’ ಎಂದಿದ್ದಾರೆ” ಎಂದು ಡಿಕೆಶಿ ಉಲ್ಲೇಖಿಸಿದ್ದಾರೆ.

“ಅಲ್ಲದೆ, ಕಾಂಗ್ ಅವರು ಜಾಗತಿಕ ಟೆಂಡರ್ ಅನ್ನು ಸಂಪನ್ಮೂಲದ ವ್ಯರ್ಥ ಎಂದು ಹೇಳಿರುವ ದಾಖಲೆಗಳಿವೆ. ಹಾಗಾದರೆ ಕರ್ನಾಟಕ ಸರ್ಕಾರವು ಜಾಗತಿಕ ಟೆಂಡರ್ ಮೂಲಕ ಲಸಿಕೆ ಖರೀದಿ ನಿರ್ಧಾರದಲ್ಲಿ ಸಲಹೆಗಾರರ ಅಭಿಪ್ರಾಯವನ್ನು ಪರಿಗಣಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಜಾಗತಿಕ ಟೆಂಡರ್ ಮೂಲಕ ಎಷ್ಟು ಪ್ರಮಾಣದ ಲಸಿಕೆಯನ್ನು, ಯಾವಾಗ ಖರೀದಿ ಮಾಡಲಿದೆ ಎಂಬ ಮಾಹಿತಿ ನೀಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ವಿವಿಗಳಲ್ಲಿ ಯೋಗಿ ಆದಿತ್ಯನಾಥ್, ಬಾಬಾ ರಾಮದೇವ್ ಕುರಿತು ಪಠ್ಯ!

“ಕೇಂದ್ರ ಸರ್ಕಾರ ಈ ವರ್ಷ ಡಿಸೆಂಬರ್ ವೇಳೆಗೆ 2 ಕೋಟಿ ಡೋಸ್ ಲಸಿಕೆ ಖರೀದಿ ಮಾಡುವುದಾಗಿ ತಿಳಿಸಿದ್ದು, ಕಾಂಗ್ ಅವರು, ‘ಇದು ವಾಸ್ತವಾಂಶಕ್ಕೆ ದೂರವಾದದ್ದು’ ಎಂದು ಅಭಿಪ್ರಾಯಪಟ್ಟಿದ್ದಾರೆ. ಹಾಗಾದರೆ ರಾಜ್ಯ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಒಪ್ಪುತ್ತದೆಯೇ? ಹಾಗೂ ರಾಜ್ಯದಲ್ಲಿರುವ ಎಲ್ಲ ವಯಸ್ಕರಿಗೂ ಪೂರ್ಣ ಪ್ರಮಾಣದಲ್ಲಿ ಲಸಿಕೆ ನೀಡಲು ಹಾಕಿಕೊಂಡಿರುವ ಕಾಲಮಿತಿಯ ಬಗ್ಗೆ ವಿವರ ನೀಡುತ್ತದೆಯೇ?” ಎಂದು ಕೇಳಿದ್ದಾರೆ.

“ಜನವರಿ ತಿಂಗಳಲ್ಲಿ ಕೋವ್ಯಾಕ್ಸಿನ್ ಅಂತಿಮ ಪರೀಕ್ಷೆ ವರದಿ ಪ್ರಕಟವಾಗುವ ಮುನ್ನವೇ ಅದರ ಬಳಕೆಗೆ ಅನುಮತಿ ನೀಡಿದ್ದನ್ನು ಡಾ. ಕಾಂಗ್ ಅವರು ಪ್ರಶ್ನಿಸಿದ್ದರು. ಜತೆಗೆ, ಕೋವ್ಯಾಕ್ಸಿನ್ ಅಂತಿಮ ಪರೀಕ್ಷಾ ವರದಿ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದರು. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ತನ್ನ ಸಲಹೆಗಾರರ ಅಭಿಪ್ರಾಯವನ್ನು ಬೆಂಬಲಿಸುತ್ತದೆಯೇ” ಎಂದು ಸರ್ಕಾರವನ್ನು ಅವರು ಕೇಳಿದ್ದಾರೆ.

“ದೇಶದಲ್ಲಿ ಎರಡನೇ ಅಲೆ ವಿಚಾರವಾಗಿ ಭಾರತ ಸರ್ಕಾರದ ನಿರ್ಲಕ್ಷ್ಯವನ್ನು ಡಾ.ಕಾಂಗ್ ಅವರು ಪ್ರಶ್ನಿಸಿದ್ದರು. ‘ಸೋಂಕು ಹೆಚ್ಚಳದ ಬಗ್ಗೆ ನಾವು ಆರಂಭದಲ್ಲೇ ಗಮನ ಹರಿಸಬೇಕಿತ್ತು. ಕಡೇ ಪಕ್ಷ ಮಾರ್ಚ್ ಆರಂಭದಲ್ಲಾದರೂ ನಾವು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿತ್ತು. ಆದರೆ ನಾವದನ್ನು ಮಾಡಲಿಲ್ಲ’ ಎಂದು ಹೇಳಿದ್ದಾರೆ” ಎಂದು ಡಿಕೆಶಿ ಹೇಳಿದ್ದಾರೆ.

“ಅವರನ್ನು ರಾಜ್ಯದ ಲಸಿಕೆ ತಾಂತ್ರಿಕ ಸಲಹೆಗಾರರನ್ನಾಗಿ ನೇಮಕ ಮಾಡಿಕೊಂಡ ನಂತರವೂ ಸರ್ಕಾರ ಮಾರ್ಚ್ ತಿಂಗಳಲ್ಲಿ ಸೋಂಕು ಪ್ರಕರಣ ಹೆಚ್ಚಳದ ವಿಚಾರವಾಗಿ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿತ್ತು ಎಂಬುದನ್ನು ಸರ್ಕಾರ ಒಪ್ಪಿಕೊಳ್ಳುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

“ಗಗನ್ ದೀಪ್ ಕಾಂಗ್ ಅವರು ಸಂದರ್ಶನವೊಂದರಲ್ಲಿ, ‘ನಾವು ಪ್ರಸ್ತುತ ರೀತಿಯಲ್ಲೇ ಸಾಗಿದರೆ ನಿರಂತರವಾಗಿ ಸೋಂಕು ಹರಡುತ್ತಾ ಹೋಗುತ್ತದೆ. ನಂತರ ಅದು ಅತ್ಯಂತ ಮಾರಕ ವೈರಾಣುವಾಗಿ ರೂಪುಗೊಳ್ಳಬಹುದು. ಆಗ ಪ್ರತಿ ವರ್ಷ ಒಂದು ಅಥವಾ ಎರಡು ಅಲೆಗಳನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಈ ಸಲಹೆಯನ್ನಾದರೂ ಕೇಳುತ್ತದೆಯೇ? ಮಂದಗತಿಯಲ್ಲಿ ಲಸಿಕೆ ಹಾಕುವ ಮೂಲಕ ಸೋಂಕು ಹರಡಲು ಅವಕಾಶ ಕಲ್ಪಿಸಲಾಗುತ್ತಿದೆಯೇ? ಅಥವಾ ಕೊರೊನಾವನ್ನು ಶಾಶ್ವತವಾಗಿ ಮಣಿಸಲು ಸಮೂಹ ಲಸಿಕೆ ಕಾರ್ಯಕ್ರಮದ ಬಗ್ಗೆ ಸರ್ಕಾರ ಏನಾದರೂ ಯೋಜನೆ ರೂಪಿಸಿದೆಯೇ?” ಎಂದು ಅವರು ಕೇಳಿದ್ದಾರೆ.

“ಅಂತಿಮವಾಗಿ ಡಾ. ಕಾಂಗ್ ಅವರು, ‘ಭಾರತ ಸರ್ಕಾರ ಸೋಂಕು ಪ್ರಕರಣ ಹಾಗೂ ಲಸಿಕೆ ಕುರಿತ ನೈಜ ಅಂಕಿ ಅಂಶಗಳನ್ನು ಸಂಗ್ರಹಿಸಬೇಕು. ಆಗ ಮಾತ್ರ ಕೋವಿಡ್ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಸಾಧ್ಯ’ ಎಂದು ಹೇಳಿದ್ದಾರೆ. ‘ಕಳಪೆ ಅಂಕಿ-ಅಂಶಗಳಿಂದಾಗಿ ಭಾರತದಲ್ಲಿ ಲಸಿಕೆ ಕಾರ್ಯಕ್ರಮದ ಪರಿಣಾಮವನ್ನು ಅಳೆಯಲು ಸಾಧ್ಯವಾಗುತ್ತಿಲ್ಲ ಎಂದೂ ತಿಳಿಸಿದ್ದಾರೆ. ಭಾರತದಲ್ಲಿ ಲಸಿಕೆ ಸಾಮರ್ಥ್ಯದ ಬಗ್ಗೆ ಅಧ್ಯಯನ, ಸಮೀಕ್ಷೆ, ವೈಜ್ಞಾನಿಕ ವಿಶ್ಲೇಷಣೆ ನಡೆಸಬೇಕು’ ಎಂದು ಅವರು ತಿಳಿಸಿದ್ದಾರೆ” ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

“ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಬಿಜೆಪಿ ನಾಯಕರು ಕಾಳಸಂತೆಯಲ್ಲಿ ಲಸಿಕೆ ಮಾರಿಕೊಳ್ಳಲು ಅವಕಾಶ ನೀಡುವುದನ್ನು ಬಿಟ್ಟು, ಕೊರೊನಾ ನಿರ್ವಹಣೆ ವಿಚಾರದಲ್ಲಿ ಮೊದಲು ತನ್ನ ಸಲಹೆಗಾರರ ಮಾತನ್ನು ಕೇಳಬೇಕಿದೆ” ಎಂದು ಡಿ.ಕೆ. ಶಿವಕುಮಾರ್‌‌ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ, ಕಠಿಣ ಕಾಯ್ದೆ ರೂಪಿಸಲು IMA ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...