Homeಕರ್ನಾಟಕನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯ ಕೊಡಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ, ಹಾಗಾಗಿ ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ಸಾಂತ್ವಾನ ಹೇಳಿ ನ್ಯಾಯ ನೀಡಬೇಕು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಕೆ.ವಿ ಸ್ಟ್ಯಾನ್ಲಿ ಒತ್ತಾಯಿಸಿದರು.

ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಮತ್ತು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ನಡೆದ  ‘ಮಕ್ಕಳೊಡನೆ ನಾವು’ ಬೃಹತ್ ಬೈಕ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ, ಸಮಾನತೆಯ ಹಕ್ಕುಗಳನ್ನು ಇಂದು ಕಿತ್ತುಕೊಳ್ಳಲಾಗುತ್ತಿದೆ. ತುಳಿತಕ್ಕೊಳಗಾದ ನಮ್ಮ ಮಕ್ಕಳು ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಕಾನೂನುಗಳನ್ನು ಪಾಲಿಸಬೇಕಾದ ಸರ್ಕಾರಗಳು ಉಳ್ಳವರನ್ನು ರಕ್ಷಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರುತ್ತಿದೆ. ಹಾಗಾಗಿ ಚಿತ್ರದುರ್ಗದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಆದರೆ ಈ ವ್ಯವಸ್ಥೆ ಮಕ್ಕಳ ವಿರುದ್ಧ ನಡೆದುಕೊಳ್ಳುತ್ತಿರುವುದನ್ನು ನೋಡಿ ರೋಸಿಹೋಗಿ ನಾವಿಲ್ಲಿ ಸೇರಿದ್ದೇವೆ. ಇಲ್ಲಿ ನಡೆಯುತ್ತಿರುವುದು ಬಡವರ, ದಲಿತರ, ಕಾರ್ಮಿಕರ ಮತ್ತು ನಿಜವಾದ ಧಾರ್ಮಿಕರ ಮೆರವಣಿಗೆಯಾಗಿದೆ. ಈ ಸರ್ಕಾರಕ್ಕಂತೂ ಮಕ್ಕಳಿಗೆ ನ್ಯಾಯ ಕೊಡುವ ಯೋಗ್ಯತೆ ಇಲ್ಲ. ಹಾಗಾಗಿ ಇಲ್ಲಿನ ಮಕ್ಕಳ ನೋವು ನ್ಯಾಯಾಂಗಕ್ಕೆ ಕೇಳಲಿ, ನ್ಯಾಯಮೂರ್ತಿಗಳು ಇದೇ ರೀತಿ ಅನ್ಯಾಯಕ್ಕೊಳಗಾದ ನೂರಾರು ಮಕ್ಕಳಿಗೆ ಸಾಂತ್ವಾನ ಹೇಳಿ, ತನಿಖೆ ನಡೆಸಿ ನ್ಯಾಯ ಕೊಡಿಸಲಿ ಎಂಬುದಕ್ಕಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಡಾ.ಶಿವಮೂರ್ತಿ ಶರಣರ ಮೇಲೆ ದೂರು ದಾಖಲಾಗಿ ಹಲವು ದಿವಸಗಳು ಕಳೆದಿವೆ. ಬಂಧನಕ್ಕೆ ವಿಳಂಬ ಮತ್ತು  ಸಾಕ್ಷಿ ನಾಶ ಮಾಡಲು ಆರೋಪಿಗೆ ಹಾಗೂ ಅವರ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ. ಆರೋಪಿಗಳ ಬಂಧನವಾದ ಮೇಲೂ ಸಹ ಆಸ್ಪತ್ರೆ ಹಾಗೂ ಜೈಲು ಸಿಬ್ಬಂದಿಗಳು ಆರೋಪಿಯನ್ನು ಬಚಾವ್ ಮಾಡಲು ನಡೆದುಕೊಂಡ ರೀತಿ ಹಲವು ಅನುಮಾನಗಳಿಗೆ ಅನುವು ಮಾಡಿಕೊಟ್ಟಿದೆ. ಹಾಗಾಗಿ ನ್ಯಾಯಾಂಗ ತನಿಖೆಯೊಂದೆ ನಮಗೆ ಭರವಸೆಯಾಗಿ ಕಾಣುತ್ತಿದೆ ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇನ್ನೊಂದೆಡೆ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆನೇಕ ಜನರು ಹಿಂದೆ ಘಟಿಸಿದ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅತ್ಯಾಚಾರ, ಗರ್ಭಪಾತ ತೆಗಿಸಿ ಹಾಕಿರುವ ಪ್ರಕರಣಗಳು, ಅಲ್ಲದೆ ಅಪಾರ ಪ್ರಮಾಣದ ಹಣಕಾಸು ಆಸ್ತಿ ನೀಡಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವನ್ನು ಕಾನೂನಿನ ಕಣ್ಣಿನಿಂದ ತಪ್ಪಿಸಿದ್ದಾರೆ ಎನ್ನುವುದರ ಬಗ್ಗೆ ವಿವರಗಳು ಜನರಿಂದ, ಸಂತ್ರಸ್ತರಿಂದ, ಇತರೆ ಸ್ವಾಮೀಜಿಗಳಿಂದ, ಅಲ್ಲದೆ ಪತ್ರಕರ್ತರಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಒಂದು ಪುರಾತನ ಪ್ರತಿಷ್ಠಿತ ಇತಿಹಾಸವುಳ್ಳ ಮುರುಘಾ ಮಠದ ಮೇಲೆ ನಮಗಿರುವ ಗೌರವದ ಹೊರತಾಗಿಯೂ ಸಮಾಜ ಹಾಗೂ ಸರ್ಕಾರಗಳ ಮೇಲೆ ಅದರ ಪ್ರಭಾವವನ್ನು ಹಲ್ಲೆಗಳೆಯುವಂತಿಲ್ಲ. ಆಡಳಿತ ರೂಢ ಸರ್ಕಾರದ ಅನೇಕ ನಾಯಕರು, ಮಂತ್ರಿಗಳು, ಸಚಿವರು, ಆರೋಪಿಯ ಪರ ನಿಂತು ಸಾಂತ್ವನ ಹೇಳಿರುವುದನ್ನು ಹಾಗೂ ಸ್ವಾಮೀಜಿ ತಪ್ಪು ಮಾಡಿಲ್ಲ ಎಂಬ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ದೇಶವೇ ಗಮನಿಸಿದೆ. ಸಂತ್ರಸ್ಥ ಮಕ್ಕಳ ಪರವಾಗಿ ನಿಲ್ಲಬೇಕಾಗಿದ್ದ ಯಾರೊಬ್ಬ ಸಚಿವರು ಸಂತ್ರಸ್ತರಿಗೆ ಧೈರ್ಯ ಹೇಳದಿರುವುದು ವಿಷಾಧನೀಯ ಸಂಗತಿಯಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಆರೋಪಿಗಳ ನಿಂತಿದೆಯೇನೋ ಎಂಬ ಆತಂಕ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...