Homeಕರ್ನಾಟಕನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯ ಕೊಡಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ, ಹಾಗಾಗಿ ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ಸಾಂತ್ವಾನ ಹೇಳಿ ನ್ಯಾಯ ನೀಡಬೇಕು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಕೆ.ವಿ ಸ್ಟ್ಯಾನ್ಲಿ ಒತ್ತಾಯಿಸಿದರು.

ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಮತ್ತು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ನಡೆದ  ‘ಮಕ್ಕಳೊಡನೆ ನಾವು’ ಬೃಹತ್ ಬೈಕ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ, ಸಮಾನತೆಯ ಹಕ್ಕುಗಳನ್ನು ಇಂದು ಕಿತ್ತುಕೊಳ್ಳಲಾಗುತ್ತಿದೆ. ತುಳಿತಕ್ಕೊಳಗಾದ ನಮ್ಮ ಮಕ್ಕಳು ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಕಾನೂನುಗಳನ್ನು ಪಾಲಿಸಬೇಕಾದ ಸರ್ಕಾರಗಳು ಉಳ್ಳವರನ್ನು ರಕ್ಷಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರುತ್ತಿದೆ. ಹಾಗಾಗಿ ಚಿತ್ರದುರ್ಗದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಆದರೆ ಈ ವ್ಯವಸ್ಥೆ ಮಕ್ಕಳ ವಿರುದ್ಧ ನಡೆದುಕೊಳ್ಳುತ್ತಿರುವುದನ್ನು ನೋಡಿ ರೋಸಿಹೋಗಿ ನಾವಿಲ್ಲಿ ಸೇರಿದ್ದೇವೆ. ಇಲ್ಲಿ ನಡೆಯುತ್ತಿರುವುದು ಬಡವರ, ದಲಿತರ, ಕಾರ್ಮಿಕರ ಮತ್ತು ನಿಜವಾದ ಧಾರ್ಮಿಕರ ಮೆರವಣಿಗೆಯಾಗಿದೆ. ಈ ಸರ್ಕಾರಕ್ಕಂತೂ ಮಕ್ಕಳಿಗೆ ನ್ಯಾಯ ಕೊಡುವ ಯೋಗ್ಯತೆ ಇಲ್ಲ. ಹಾಗಾಗಿ ಇಲ್ಲಿನ ಮಕ್ಕಳ ನೋವು ನ್ಯಾಯಾಂಗಕ್ಕೆ ಕೇಳಲಿ, ನ್ಯಾಯಮೂರ್ತಿಗಳು ಇದೇ ರೀತಿ ಅನ್ಯಾಯಕ್ಕೊಳಗಾದ ನೂರಾರು ಮಕ್ಕಳಿಗೆ ಸಾಂತ್ವಾನ ಹೇಳಿ, ತನಿಖೆ ನಡೆಸಿ ನ್ಯಾಯ ಕೊಡಿಸಲಿ ಎಂಬುದಕ್ಕಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಡಾ.ಶಿವಮೂರ್ತಿ ಶರಣರ ಮೇಲೆ ದೂರು ದಾಖಲಾಗಿ ಹಲವು ದಿವಸಗಳು ಕಳೆದಿವೆ. ಬಂಧನಕ್ಕೆ ವಿಳಂಬ ಮತ್ತು  ಸಾಕ್ಷಿ ನಾಶ ಮಾಡಲು ಆರೋಪಿಗೆ ಹಾಗೂ ಅವರ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ. ಆರೋಪಿಗಳ ಬಂಧನವಾದ ಮೇಲೂ ಸಹ ಆಸ್ಪತ್ರೆ ಹಾಗೂ ಜೈಲು ಸಿಬ್ಬಂದಿಗಳು ಆರೋಪಿಯನ್ನು ಬಚಾವ್ ಮಾಡಲು ನಡೆದುಕೊಂಡ ರೀತಿ ಹಲವು ಅನುಮಾನಗಳಿಗೆ ಅನುವು ಮಾಡಿಕೊಟ್ಟಿದೆ. ಹಾಗಾಗಿ ನ್ಯಾಯಾಂಗ ತನಿಖೆಯೊಂದೆ ನಮಗೆ ಭರವಸೆಯಾಗಿ ಕಾಣುತ್ತಿದೆ ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇನ್ನೊಂದೆಡೆ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆನೇಕ ಜನರು ಹಿಂದೆ ಘಟಿಸಿದ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅತ್ಯಾಚಾರ, ಗರ್ಭಪಾತ ತೆಗಿಸಿ ಹಾಕಿರುವ ಪ್ರಕರಣಗಳು, ಅಲ್ಲದೆ ಅಪಾರ ಪ್ರಮಾಣದ ಹಣಕಾಸು ಆಸ್ತಿ ನೀಡಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವನ್ನು ಕಾನೂನಿನ ಕಣ್ಣಿನಿಂದ ತಪ್ಪಿಸಿದ್ದಾರೆ ಎನ್ನುವುದರ ಬಗ್ಗೆ ವಿವರಗಳು ಜನರಿಂದ, ಸಂತ್ರಸ್ತರಿಂದ, ಇತರೆ ಸ್ವಾಮೀಜಿಗಳಿಂದ, ಅಲ್ಲದೆ ಪತ್ರಕರ್ತರಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಒಂದು ಪುರಾತನ ಪ್ರತಿಷ್ಠಿತ ಇತಿಹಾಸವುಳ್ಳ ಮುರುಘಾ ಮಠದ ಮೇಲೆ ನಮಗಿರುವ ಗೌರವದ ಹೊರತಾಗಿಯೂ ಸಮಾಜ ಹಾಗೂ ಸರ್ಕಾರಗಳ ಮೇಲೆ ಅದರ ಪ್ರಭಾವವನ್ನು ಹಲ್ಲೆಗಳೆಯುವಂತಿಲ್ಲ. ಆಡಳಿತ ರೂಢ ಸರ್ಕಾರದ ಅನೇಕ ನಾಯಕರು, ಮಂತ್ರಿಗಳು, ಸಚಿವರು, ಆರೋಪಿಯ ಪರ ನಿಂತು ಸಾಂತ್ವನ ಹೇಳಿರುವುದನ್ನು ಹಾಗೂ ಸ್ವಾಮೀಜಿ ತಪ್ಪು ಮಾಡಿಲ್ಲ ಎಂಬ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ದೇಶವೇ ಗಮನಿಸಿದೆ. ಸಂತ್ರಸ್ಥ ಮಕ್ಕಳ ಪರವಾಗಿ ನಿಲ್ಲಬೇಕಾಗಿದ್ದ ಯಾರೊಬ್ಬ ಸಚಿವರು ಸಂತ್ರಸ್ತರಿಗೆ ಧೈರ್ಯ ಹೇಳದಿರುವುದು ವಿಷಾಧನೀಯ ಸಂಗತಿಯಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಆರೋಪಿಗಳ ನಿಂತಿದೆಯೇನೋ ಎಂಬ ಆತಂಕ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...