Homeಕರ್ನಾಟಕನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯ ಕೊಡಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ, ಹಾಗಾಗಿ ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ಸಾಂತ್ವಾನ ಹೇಳಿ ನ್ಯಾಯ ನೀಡಬೇಕು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಕೆ.ವಿ ಸ್ಟ್ಯಾನ್ಲಿ ಒತ್ತಾಯಿಸಿದರು.

ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಮತ್ತು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ನಡೆದ  ‘ಮಕ್ಕಳೊಡನೆ ನಾವು’ ಬೃಹತ್ ಬೈಕ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ, ಸಮಾನತೆಯ ಹಕ್ಕುಗಳನ್ನು ಇಂದು ಕಿತ್ತುಕೊಳ್ಳಲಾಗುತ್ತಿದೆ. ತುಳಿತಕ್ಕೊಳಗಾದ ನಮ್ಮ ಮಕ್ಕಳು ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಕಾನೂನುಗಳನ್ನು ಪಾಲಿಸಬೇಕಾದ ಸರ್ಕಾರಗಳು ಉಳ್ಳವರನ್ನು ರಕ್ಷಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರುತ್ತಿದೆ. ಹಾಗಾಗಿ ಚಿತ್ರದುರ್ಗದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಆದರೆ ಈ ವ್ಯವಸ್ಥೆ ಮಕ್ಕಳ ವಿರುದ್ಧ ನಡೆದುಕೊಳ್ಳುತ್ತಿರುವುದನ್ನು ನೋಡಿ ರೋಸಿಹೋಗಿ ನಾವಿಲ್ಲಿ ಸೇರಿದ್ದೇವೆ. ಇಲ್ಲಿ ನಡೆಯುತ್ತಿರುವುದು ಬಡವರ, ದಲಿತರ, ಕಾರ್ಮಿಕರ ಮತ್ತು ನಿಜವಾದ ಧಾರ್ಮಿಕರ ಮೆರವಣಿಗೆಯಾಗಿದೆ. ಈ ಸರ್ಕಾರಕ್ಕಂತೂ ಮಕ್ಕಳಿಗೆ ನ್ಯಾಯ ಕೊಡುವ ಯೋಗ್ಯತೆ ಇಲ್ಲ. ಹಾಗಾಗಿ ಇಲ್ಲಿನ ಮಕ್ಕಳ ನೋವು ನ್ಯಾಯಾಂಗಕ್ಕೆ ಕೇಳಲಿ, ನ್ಯಾಯಮೂರ್ತಿಗಳು ಇದೇ ರೀತಿ ಅನ್ಯಾಯಕ್ಕೊಳಗಾದ ನೂರಾರು ಮಕ್ಕಳಿಗೆ ಸಾಂತ್ವಾನ ಹೇಳಿ, ತನಿಖೆ ನಡೆಸಿ ನ್ಯಾಯ ಕೊಡಿಸಲಿ ಎಂಬುದಕ್ಕಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಡಾ.ಶಿವಮೂರ್ತಿ ಶರಣರ ಮೇಲೆ ದೂರು ದಾಖಲಾಗಿ ಹಲವು ದಿವಸಗಳು ಕಳೆದಿವೆ. ಬಂಧನಕ್ಕೆ ವಿಳಂಬ ಮತ್ತು  ಸಾಕ್ಷಿ ನಾಶ ಮಾಡಲು ಆರೋಪಿಗೆ ಹಾಗೂ ಅವರ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ. ಆರೋಪಿಗಳ ಬಂಧನವಾದ ಮೇಲೂ ಸಹ ಆಸ್ಪತ್ರೆ ಹಾಗೂ ಜೈಲು ಸಿಬ್ಬಂದಿಗಳು ಆರೋಪಿಯನ್ನು ಬಚಾವ್ ಮಾಡಲು ನಡೆದುಕೊಂಡ ರೀತಿ ಹಲವು ಅನುಮಾನಗಳಿಗೆ ಅನುವು ಮಾಡಿಕೊಟ್ಟಿದೆ. ಹಾಗಾಗಿ ನ್ಯಾಯಾಂಗ ತನಿಖೆಯೊಂದೆ ನಮಗೆ ಭರವಸೆಯಾಗಿ ಕಾಣುತ್ತಿದೆ ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇನ್ನೊಂದೆಡೆ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆನೇಕ ಜನರು ಹಿಂದೆ ಘಟಿಸಿದ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅತ್ಯಾಚಾರ, ಗರ್ಭಪಾತ ತೆಗಿಸಿ ಹಾಕಿರುವ ಪ್ರಕರಣಗಳು, ಅಲ್ಲದೆ ಅಪಾರ ಪ್ರಮಾಣದ ಹಣಕಾಸು ಆಸ್ತಿ ನೀಡಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವನ್ನು ಕಾನೂನಿನ ಕಣ್ಣಿನಿಂದ ತಪ್ಪಿಸಿದ್ದಾರೆ ಎನ್ನುವುದರ ಬಗ್ಗೆ ವಿವರಗಳು ಜನರಿಂದ, ಸಂತ್ರಸ್ತರಿಂದ, ಇತರೆ ಸ್ವಾಮೀಜಿಗಳಿಂದ, ಅಲ್ಲದೆ ಪತ್ರಕರ್ತರಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಒಂದು ಪುರಾತನ ಪ್ರತಿಷ್ಠಿತ ಇತಿಹಾಸವುಳ್ಳ ಮುರುಘಾ ಮಠದ ಮೇಲೆ ನಮಗಿರುವ ಗೌರವದ ಹೊರತಾಗಿಯೂ ಸಮಾಜ ಹಾಗೂ ಸರ್ಕಾರಗಳ ಮೇಲೆ ಅದರ ಪ್ರಭಾವವನ್ನು ಹಲ್ಲೆಗಳೆಯುವಂತಿಲ್ಲ. ಆಡಳಿತ ರೂಢ ಸರ್ಕಾರದ ಅನೇಕ ನಾಯಕರು, ಮಂತ್ರಿಗಳು, ಸಚಿವರು, ಆರೋಪಿಯ ಪರ ನಿಂತು ಸಾಂತ್ವನ ಹೇಳಿರುವುದನ್ನು ಹಾಗೂ ಸ್ವಾಮೀಜಿ ತಪ್ಪು ಮಾಡಿಲ್ಲ ಎಂಬ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ದೇಶವೇ ಗಮನಿಸಿದೆ. ಸಂತ್ರಸ್ಥ ಮಕ್ಕಳ ಪರವಾಗಿ ನಿಲ್ಲಬೇಕಾಗಿದ್ದ ಯಾರೊಬ್ಬ ಸಚಿವರು ಸಂತ್ರಸ್ತರಿಗೆ ಧೈರ್ಯ ಹೇಳದಿರುವುದು ವಿಷಾಧನೀಯ ಸಂಗತಿಯಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಆರೋಪಿಗಳ ನಿಂತಿದೆಯೇನೋ ಎಂಬ ಆತಂಕ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...