Homeಕರ್ನಾಟಕನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

- Advertisement -
- Advertisement -

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳಿಗೆ ನ್ಯಾಯ ಕೊಡಿಸುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ, ಹಾಗಾಗಿ ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ಸಾಂತ್ವಾನ ಹೇಳಿ ನ್ಯಾಯ ನೀಡಬೇಕು ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥ ಕೆ.ವಿ ಸ್ಟ್ಯಾನ್ಲಿ ಒತ್ತಾಯಿಸಿದರು.

ಮಕ್ಕಳ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ತಡೆಯಬೇಕು ಮತ್ತು ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಇಂದು ಚಿತ್ರದುರ್ಗದಲ್ಲಿ ನಡೆದ  ‘ಮಕ್ಕಳೊಡನೆ ನಾವು’ ಬೃಹತ್ ಬೈಕ್ ಜಾಥಾ ಉದ್ದೇಶಿಸಿ ಅವರು ಮಾತನಾಡಿದರು.

ಬಾಬಾಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನ, ಸಮಾನತೆಯ ಹಕ್ಕುಗಳನ್ನು ಇಂದು ಕಿತ್ತುಕೊಳ್ಳಲಾಗುತ್ತಿದೆ. ತುಳಿತಕ್ಕೊಳಗಾದ ನಮ್ಮ ಮಕ್ಕಳು ಲೈಂಗಿಕ ದೌರ್ಜನ್ಯಗಳಂತಹ ಕ್ರೌರ್ಯಗಳಿಗೆ ಒಳಗಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಂವಿಧಾನ ಮತ್ತು ಕಾನೂನುಗಳನ್ನು ಪಾಲಿಸಬೇಕಾದ ಸರ್ಕಾರಗಳು ಉಳ್ಳವರನ್ನು ರಕ್ಷಿಸುವ ನಿಟ್ಟಿನಲ್ಲಿ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರುತ್ತಿದೆ. ಹಾಗಾಗಿ ಚಿತ್ರದುರ್ಗದ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ಆದರೆ ಈ ವ್ಯವಸ್ಥೆ ಮಕ್ಕಳ ವಿರುದ್ಧ ನಡೆದುಕೊಳ್ಳುತ್ತಿರುವುದನ್ನು ನೋಡಿ ರೋಸಿಹೋಗಿ ನಾವಿಲ್ಲಿ ಸೇರಿದ್ದೇವೆ. ಇಲ್ಲಿ ನಡೆಯುತ್ತಿರುವುದು ಬಡವರ, ದಲಿತರ, ಕಾರ್ಮಿಕರ ಮತ್ತು ನಿಜವಾದ ಧಾರ್ಮಿಕರ ಮೆರವಣಿಗೆಯಾಗಿದೆ. ಈ ಸರ್ಕಾರಕ್ಕಂತೂ ಮಕ್ಕಳಿಗೆ ನ್ಯಾಯ ಕೊಡುವ ಯೋಗ್ಯತೆ ಇಲ್ಲ. ಹಾಗಾಗಿ ಇಲ್ಲಿನ ಮಕ್ಕಳ ನೋವು ನ್ಯಾಯಾಂಗಕ್ಕೆ ಕೇಳಲಿ, ನ್ಯಾಯಮೂರ್ತಿಗಳು ಇದೇ ರೀತಿ ಅನ್ಯಾಯಕ್ಕೊಳಗಾದ ನೂರಾರು ಮಕ್ಕಳಿಗೆ ಸಾಂತ್ವಾನ ಹೇಳಿ, ತನಿಖೆ ನಡೆಸಿ ನ್ಯಾಯ ಕೊಡಿಸಲಿ ಎಂಬುದಕ್ಕಾಗಿ ಪ್ರತಿಭಟಿಸುತ್ತಿದ್ದೇವೆ ಎಂದರು.

ಡಾ.ಶಿವಮೂರ್ತಿ ಶರಣರ ಮೇಲೆ ದೂರು ದಾಖಲಾಗಿ ಹಲವು ದಿವಸಗಳು ಕಳೆದಿವೆ. ಬಂಧನಕ್ಕೆ ವಿಳಂಬ ಮತ್ತು  ಸಾಕ್ಷಿ ನಾಶ ಮಾಡಲು ಆರೋಪಿಗೆ ಹಾಗೂ ಅವರ ಬೆಂಬಲಿಗರಿಗೆ ಅವಕಾಶ ನೀಡಲಾಗಿದೆ. ಆರೋಪಿಗಳ ಬಂಧನವಾದ ಮೇಲೂ ಸಹ ಆಸ್ಪತ್ರೆ ಹಾಗೂ ಜೈಲು ಸಿಬ್ಬಂದಿಗಳು ಆರೋಪಿಯನ್ನು ಬಚಾವ್ ಮಾಡಲು ನಡೆದುಕೊಂಡ ರೀತಿ ಹಲವು ಅನುಮಾನಗಳಿಗೆ ಅನುವು ಮಾಡಿಕೊಟ್ಟಿದೆ. ಹಾಗಾಗಿ ನ್ಯಾಯಾಂಗ ತನಿಖೆಯೊಂದೆ ನಮಗೆ ಭರವಸೆಯಾಗಿ ಕಾಣುತ್ತಿದೆ ಎಂದು ಸ್ಟ್ಯಾನ್ಲಿ ಹೇಳಿದ್ದಾರೆ.

ಇನ್ನೊಂದೆಡೆ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಆನೇಕ ಜನರು ಹಿಂದೆ ಘಟಿಸಿದ ಹಲವಾರು ಲೈಂಗಿಕ ದೌರ್ಜನ್ಯ ಪ್ರಕರಣಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಅತ್ಯಾಚಾರ, ಗರ್ಭಪಾತ ತೆಗಿಸಿ ಹಾಕಿರುವ ಪ್ರಕರಣಗಳು, ಅಲ್ಲದೆ ಅಪಾರ ಪ್ರಮಾಣದ ಹಣಕಾಸು ಆಸ್ತಿ ನೀಡಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವನ್ನು ಕಾನೂನಿನ ಕಣ್ಣಿನಿಂದ ತಪ್ಪಿಸಿದ್ದಾರೆ ಎನ್ನುವುದರ ಬಗ್ಗೆ ವಿವರಗಳು ಜನರಿಂದ, ಸಂತ್ರಸ್ತರಿಂದ, ಇತರೆ ಸ್ವಾಮೀಜಿಗಳಿಂದ, ಅಲ್ಲದೆ ಪತ್ರಕರ್ತರಿಂದ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಒಂದು ಪುರಾತನ ಪ್ರತಿಷ್ಠಿತ ಇತಿಹಾಸವುಳ್ಳ ಮುರುಘಾ ಮಠದ ಮೇಲೆ ನಮಗಿರುವ ಗೌರವದ ಹೊರತಾಗಿಯೂ ಸಮಾಜ ಹಾಗೂ ಸರ್ಕಾರಗಳ ಮೇಲೆ ಅದರ ಪ್ರಭಾವವನ್ನು ಹಲ್ಲೆಗಳೆಯುವಂತಿಲ್ಲ. ಆಡಳಿತ ರೂಢ ಸರ್ಕಾರದ ಅನೇಕ ನಾಯಕರು, ಮಂತ್ರಿಗಳು, ಸಚಿವರು, ಆರೋಪಿಯ ಪರ ನಿಂತು ಸಾಂತ್ವನ ಹೇಳಿರುವುದನ್ನು ಹಾಗೂ ಸ್ವಾಮೀಜಿ ತಪ್ಪು ಮಾಡಿಲ್ಲ ಎಂಬ ಹೇಳಿಕೆಯನ್ನು ಮಾಧ್ಯಮಗಳ ಮೂಲಕ ದೇಶವೇ ಗಮನಿಸಿದೆ. ಸಂತ್ರಸ್ಥ ಮಕ್ಕಳ ಪರವಾಗಿ ನಿಲ್ಲಬೇಕಾಗಿದ್ದ ಯಾರೊಬ್ಬ ಸಚಿವರು ಸಂತ್ರಸ್ತರಿಗೆ ಧೈರ್ಯ ಹೇಳದಿರುವುದು ವಿಷಾಧನೀಯ ಸಂಗತಿಯಾಗಿದೆ. ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಆರೋಪಿಗಳ ನಿಂತಿದೆಯೇನೋ ಎಂಬ ಆತಂಕ ಪ್ರತಿಯೊಬ್ಬರಲ್ಲೂ ಕಾಡುತ್ತಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಧ್ಯಪ್ರದೇಶ: ಅತ್ಯಾಚಾರಕ್ಕೆ ಒಳಗಾದ ದಲಿತ ಬಾಲಕಿ ಮೇಲೆ ದೌರ್ಜನ್ಯ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...