HomeUncategorizedದೀಪ ಹಚ್ಚಲು ಅಭ್ಯಂತರವಿಲ್ಲ, ಆದರೆ ಪ್ರಧಾನಿ ತಾವು ಮಾಡುವ ಕೆಲಸದ ಬಗ್ಗೆ ಗಮನ ಹರಿಸಲಿ...!!

ದೀಪ ಹಚ್ಚಲು ಅಭ್ಯಂತರವಿಲ್ಲ, ಆದರೆ ಪ್ರಧಾನಿ ತಾವು ಮಾಡುವ ಕೆಲಸದ ಬಗ್ಗೆ ಗಮನ ಹರಿಸಲಿ…!!

’ಕೊರೊನಾ ಅವಧಿ’ಯಲ್ಲಿ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾಡಿದ ಮೂರನೇ ಭಾಷಣದ ಕುರಿತು ನಾನುಗೌರಿ.ಕಾಂ ಕೆಲವು ವ್ಯಕ್ತಿಗಳನ್ನು ಮಾತಾಡಿಸಿದಾಗ ಬಂದ ಅಭಿಪ್ರಾಯಗಳನ್ನು ಆಧರಿಸಿ ಬರೆದ ವಿಶೇಷ ವರದಿ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಕರೆಯ ಕುರಿತು ಕೊರೊನಾ ಸೋಂಕು ತಡೆ ಮತ್ತು ಲಾಕ್‌ಡೌನ್‌ ಪರಿಹಾರ ಕಾರ್ಯಗಳಲ್ಲಿ ತೊಡಗಿರುವ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರು ಕೊರೊನ ವೈರಸ್ ವಿರುದ್ದ ರಾಷ್ಟ್ರದ ಸಾಮೂಹಿಕ ಒಗ್ಗಟ್ಟಿನ ಮನೋಭಾವವನ್ನು ಪ್ರದರ್ಶಿಸಲು ಬಾಲ್ಕನಿಗಳಲ್ಲಿ ಆದಿತ್ಯವಾರ ರಾತ್ರಿ ದೀಪ ಹಚ್ಚುವಂತೆ ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಕೊರೊನ ವೈರಸ್ ಸ್ಫೋಟದ ನಂತರ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು ಉದ್ದೇಶಿಸಿ ಮಾಡಿದ ತನ್ನ ಮೂರನೇ ಭಾಷಣದಲ್ಲಿ, ಏಪ್ರಿಲ್ 5 ರ ಆದಿತ್ಯವಾರದಂದು ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳ ದೀಪಗಳನ್ನು ಸ್ವಿಚ್ ಆಫ್ ಮಾಡಿ, ದೀಪಗಳು, ಮೇಣದ ಬತ್ತಿಗಳು, ಮೊಬೈಲ್ ಬ್ಯಾಟರಿ ದೀಪಗಳನ್ನು ಬೆಳಗಿಸಬೇಕೆಂದು ಮನವಿ ಮಾಡಿದರು.

ಹೆಸರು ಹೇಳಲಿಚ್ಛಿಸದ ತುಮಕೂರು ಜಿಲ್ಲೆಯ ವೈದ್ಯರೊಬ್ಬರು ’ಪ್ರಧಾನಿಯ ಮಾತು ಒಪ್ಪಿಕೊಳ್ಳುತ್ತೇನೆ, ಸಾಂಕ್ರಾಮಿಕ ರೋಗದ ವಿರುದ್ದ ರಾಷ್ಟ್ರದ ಜನತೆ ಒಗ್ಗಟ್ಟು ಪ್ರದರ್ಶಿಸಬೇಕು, ದೀಪವನ್ನೂ ಹಚ್ಚುತ್ತೇವೆ ಸಮಸ್ಯೆ ಇಲ್ಲ. ಆದರೆ ಪ್ರಸ್ತುತ ಸಮಯದಲ್ಲಿ ಜನತೆ ಪ್ರಧಾನಿಯಿಂದ ಇನ್ನೂ ಹೆಚ್ಚಿನದ್ದನ್ನು ನಿರೀಕ್ಷಿಸಿದ್ದರು. ಕೊರೊನ ಲಾಕ್‌ಡೌನ್‌ನಿಂದಾಗಿ ದೇಶದ ಸಂಪತ್ತು ಉತ್ಪಾದಿಸುವ ಕಾರ್ಮಿಕರು ಅನುಭವಿಸುತ್ತಿರುವ ಕಷ್ಟದ ಬಗ್ಗೆ ಹಾಗೂ ಅವರ ಸಮಸ್ಯೆ ಪರಿಹಾರಮಾಡುವ ಬಗ್ಗೆ ದೇಶದ ಪ್ರಧಾನಿಯಗಿ ಮೋದಿ ಮಾತನಾಡುತ್ತಿರಬೇಕಿತ್ತು. ವೈರಸನ್ನು ಹಿಡಿದು ಕೋಮುವಾದೀಕರಣ ಮಾಡುವವರ ಬಗಗೆ ಪ್ರಧಾನಿ ಮಾತನಾಡಬೇಕಿತ್ತು. ಆದರೆ ನಮ್ಮ ಪ್ರಧಾನಿ ಮಾಡಿದ್ದೇನು? ಅದೇ ಹಳೆಯ ಭಾಯಿಯೋಂ ಬೆಹನಿಂದ ಹಿಡಿದು ಕೊನೆಯವರೆಗೂ ಬರಿಯ ಸಪ್ಪೆ ಮಾತುಗಳನ್ನು. ಅವರ ಮಾತುಗಳು ಭಾರತದಂತಹ ಬೃಹತ್ ದೇಶವನ್ನು ಆಳುತ್ತಿರುವ ಒಬ್ಬ ಪ್ರಧಾನಿಯ ಮಾತಿನಂತೆ ಇರಲೇ ಇಲ್ಲ. ನನಗೆ ಕೇಳಿಸಿದ್ದು ಕೇವಲ ಹೊಸ ಸಿನೆಮಾ ಬಂದಾಗ ಚಿತ್ರ ನಟನೊಬ್ಬ ತನ್ನ ಅಭಿಮಾನಿಗಳೊಂದಿಗೆ ಮಾತನಾಡಿದಂತೆ ಅನಿಸುತ್ತಿತ್ತು” ಎಂದು ಹೇಳಿದ್ದಾರೆ.

’ಕೊರೊನ ರೋಗಕ್ಕೆ ಈಗಾಗಲೆ 70 ಕ್ಕಿಂತಲೂ ಹೆಚ್ಚು ಜನರು ಸತ್ತಿದ್ದರೂ ದೇಶದಲ್ಲಿ ಇನ್ನೂ ಆಸ್ಪತ್ರೆಗಳು ಸರಿಯಾಗಿ ಸಜ್ಜುಗೊಂಡಿಲ್ಲ. ಆರೋಗ್ಯ ಸಲಕರಣೆಗಳು ಇನ್ನು ಸಿಗುತ್ತಿಲ್ಲ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ತೆಗೆದುಕೊಂಡ ಕಾರ್ಯಗಳ ಬಗ್ಗೆ ಮಾತನಾಡಬಹುದಿತ್ತು. ಅದೂ ಇಲ್ಲವೆಂದರೆ ದೇಶದ ಜನರಿಗೆ ಕೊರೊನ ಬಗ್ಗೆ ಇರುವ ತಪ್ಪು ಅಭಿಪ್ರಾಯಗಳನ್ನು ಹೋಗಲಾಡಿಸಬಹುದಿತ್ತು. ಯಾಕೆಂದರೆ ಇಂತಹಾ ಸಮಯದಲ್ಲಿ ದೇಶದ ಪ್ರಧಾನಿಗಳ ಮಾತನ್ನು ದೇಶವೇ ಕೇಳಿಸಿಕೊಳ್ಳುತ್ತಿರುತ್ತವೆ, ಇದರಿಂದ ಜನರ ನೆಡುವೆ ಇದ್ದ ಭಯ ಹೋಗಿ ತುಸು ಧೈರ್ಯವಾದರೂ ಬರುತ್ತಿತ್ತು’ ಅವರು ಹೇಳಿದ್ದಾರೆ.

ಗಡಿ ಪ್ರದೇಶವಾದ ಮಧುಗಿರಿ ತಾಲೂಕಿನ ಅನಿಲ್ ಕುಮಾರ್ ಅವರನ್ನು ಮಾತಾಡಿಸಿದಾಗ ಅವರು ಆಂಧ್ರದ ಸ್ಥಿತಿಗೆ ಸಂಬಂಧಿಸಿದ ಫೋಟೋವೊಂದನ್ನು ಕಳಿಸಿ, ಈ ರೀತಿ ಹೇಳಿದರು. ’ದೇಶದಲ್ಲಿ ಪರಿಸ್ಥಿತಿ ಹೇಗಿದೆಯೆಂದರೆ ಈ ಚಿತ್ರದಲ್ಲೇ ನೋಡಿ ಆಂಧ್ರ ಪ್ರದೆಶದ ಎಮ್.ಎಲ್.ಎ ಒಬ್ಬರು, ಕುಂದುರ್ಪಿ ಎಂಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾವು ಮಾತ್ರ  N95 ಮಾಸ್ಕನ್ನು ಹಾಕಿದ್ದಾರೆ, ಅವರ ಹಾಗೂ ಅವರ ಗನ್‌ಮ್ಯಾನ್‌ಗಳು ಕೈಗೆ ಗ್ಲೌಸ್ ಹಾಕಿ ಹಾಕಿದ್ದಾರೆ. ಆದರೆ ಸರಿಯಾಗಿ ಗಮನಿಸಿ ರೋಗಿಗಳನ್ನು ಶುಶ್ರೂಷೆ ಮಾಡುವ ಡಾಕ್ಟರುಗಳು ತನ್ನ ಮುಖಕ್ಕೆ ಕರ್ಚೀಫ್ ಕಟ್ಟಿಕೊಂಡಿದ್ದಾರೆ. ಇದು ನಮ್ಮ ದೇಶದ ಪರಿಸ್ಥಿತಿ. ಬೆಂಗಳೂರಿನ ಹಲವಾರು ಮೆಡಿಕಲ್ ಸ್ಟೋರುಗಳಲ್ಲಿ ಈಗಾಗಲೇ ಮಾಸ್ಕುಗಳು, ಸೋಪುಗಳು ಹಾಗೂ ಹ್ಯಾಂಡ್ ಸ್ಯಾನಿಟೈಝ್ ಇಲ್ಲ ಎಂದು ಬೋರ್ಡುಗಳನ್ನು ಹಾಕಿಕೊಂಡಿವೆ. ಇಂತಹ ಸಂದರ್ಭದಲ್ಲಿ ಸರ್ಕಾರಗಳು ಇವುಗಳ ಬೇಡಿಕೆಗಳನ್ನು ಪೂರೈಸುವುದನ್ನು ಬಿಟ್ಟು ಚಪ್ಪಾಳೆ, ದೀಪ ಹಚ್ಚುವುದು, ಮೆರವಣಿಗೆ ಮಾಡುವ ಬಗ್ಗೆ ಮಾತನಾಡುತ್ತಾ ಕೂತಿದೆ. ಖಂಡಿತವಾಗಿಯೂ ಇದು ಜವಾಬ್ದಾರಿಯುತ ಸರ್ಕಾರ ಅಲ್ಲವೇ ಅಲ್ಲ.’ ಎಂದು ಅನಿಲ್ ಕುಮಾರ್ ತಿಳಿಸಿದರು.

ಈ ಬಗ್ಗೆ ಪಬ್ಲಿಕ್ ಹೆಲ್ತ್ ಎಕ್ಸ್‌ಪರ್ಟ್‌  ಡಾ. ಸಿಲ್ವಿಯ ಅವರು ಪ್ರತಿಕ್ರಿಯಿಸುತ್ತಾ “ದೇಶವನ್ನು ಲಾಕ್‌ಡೌನ್‌ ಮಾಡುವುದು ಒಂದು ದೊಡ್ಡ ಜವಾಬ್ದಾರಿ. ಲಾಕ್‌ಡೌನ್‌ ಮಾಡುವುದಕ್ಕಿಂತ ಮುಂಚೆ ಹಲವಾರು ತಯಾರಿಗಳು ಮಾಡಿಕೊಳ್ಳಬೇಕಾಗುತ್ತದೆ. ಜನರಿಗೆ ಯಾವುದೆ ತೊಂದರೆ ಆಗದೇ ಇರುವ ರೀತಿಯಲ್ಲಿ ಲಾಕ್‌ಡೌನ್‌ ಮಾಡುವ ತಯಾರಿ ಆಗಬೇಕಿತ್ತು. ಆದರೆ ಸರ್ಕಾರ ಈಗ ಮಾಡಿರುವುದೇನೆಂದರೆ ನಾವು ಲಾಕ್‌ಡೌನ್‌ ಮಾಡುತ್ತೇವೆ ನೀವು ಏನು ಬೇಕಾದರೂ ಮಾಡಿಕೊಳ್ಳಿ, ನೀವು ಲಾಕ್‌ಡೌನ್‌ ಮಾಡಿಲ್ಲವೆಂದರೆ ನಾವು ನಿಮ್ಮನ್ನು ಶಿಕ್ಷೆಗೊಳಪಡಿಸುತ್ತೇವೆ ಎಂದು ಹೇಳುತ್ತಿದೆ” ಎಂದರು.

“ಲಾಕ್‌ಡೌನ್‌ ಹೇಗೆ ಮಾಡಬೇಕೆಂದು ಬೀದಿಯ ಸಾಮನ್ಯ ಮನುಷ್ಯನ ಬಳಿ ಹೊಗಿ ಕೇಳಿದರೂ ಅವರೇ ಅದರ ಬಗ್ಗೆ ಸರಳವಾಗಿ ಹೇಳುತ್ತಾರೆ. ಇದಕ್ಕೆಲ್ಲ ದೊಡ್ಡ ಮಟ್ಟದ ಜ್ಞಾನ ಬೇಕಾಗಿಲ್ಲ, ಇಷ್ಟನ್ನೂ ನಮ್ಮ ಸರ್ಕಾರ ಮಾಡಿಲ್ಲ. ಲಾಕ್‌ಡೌನ್‌ ಸಮಯದಲ್ಲಿ ಏನು ತಿನ್ನುತ್ತಾರೆ, ತುರ್ತು ಪರಿಸ್ಥಿತಿಯ ಅಗತ್ಯ ಬಂದರೆ ಏನು ಮಾಡಬೇಕು, ಉದ್ಯೋಗ ಕಳೆದುಕೊಂಡರೆ ಏನು ಮಾಡಬೇಕು, ದಿನಗೂಲಿ ಕಾರ್ಮಿಕರು ಏನು ಮಾಡಬೇಕು ಹೀಗೆ ಯಾವುದೆ ರೀತಿಯಲ್ಲಿ ಚಿಂತಿಸದೆ ಏಕಾಏಕಿ ಲಾಕ್‌ಡೌನ್ ಘೋಷಿಸಿ ಕ್ಯಾಂಡಲ್ ಹಚ್ಚಿ, ಪ್ಲೇಟ್ ಹೊಡೆಯಿರಿ, ಚಪ್ಪಾಳೆ ತಟ್ಟಿ ಎಂದು ಹೇಳುತ್ತಾರೆಂದರೆ ನಮ್ಮ ದೇಶದಲ್ಲಿ ಇರುವ ಮೂಡನಂಬಿಕೆಯ ಬಗ್ಗೆ ಅರಿವಾಗುತ್ತದೆ” ಎಂದು ಡಾ. ಸಿಲ್ವಿಯ ಹೇಳಿದ್ದಾರೆ.

ಪ್ರಪಂಚದ ಬಹುತೇಕ ರಾಷ್ಟ್ರಗಳಲ್ಲಿ ಲಾಕ್‌ಡೌನ್‌ ಚಾಲ್ತಿಯಲ್ಲಿದೆ. ಇತರ ದೇಶಗಳಲ್ಲಿ ಹೇಗೆ ನಿಭಾಯಿಸುತ್ತಿದ್ದಾರೆ, ಒಂದು ವಾರಕ್ಕೂ ಹೆಚ್ಚಿನ ಲಾಕ್‌ಡೌನ್‌ನಿಂದ ಕಲಿತ ಪಾಠಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸರ್ವಪಕ್ಷ ಸಮಾಲೋಚನೆ ನಡೆಸಿ ಪ್ರಧಾನಿ ಮೋದಿ ಅವರು ದೇಶದ ಜನರ ಆತಂಕವನ್ನು ಹೋಗಲಾಡಿಸುತ್ತಾರೆ ಎಂಬ ನಿರೀಕ್ಷೆ ಮತ್ತೊಮ್ಮೆ ಮನ್‌ಕಿ ಬಾತ್‌ನಲ್ಲಿ ಹುಸಿಯಾಗದಿರಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಪ್ರದಾನಿಗಳ ಕರೆಗೆ ನಾವು ಸ್ಪಂದಿಸುವುದು ಕೇವಲ ೯ ನಿಮಿಷ ಮಾತ್ರ. ಅದೂ ಸಾಮೂಹಿಕವಾಗಿ ಮಾನಸಿಕ ದೃಢತೆಯನ್ನೂ, ಏಕತೆಯನ್ನೂ ಪ್ರದರ್ಶಿಸುವ, ಸೋಂಕಿಗೆ ಒಳಗಾಗಿರುವ ಜನರಿಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಸಲುವಾಗಿ ಭಾಗವಹಿಸುವ ಒಂದು ಪ್ರಕ್ರಿಯೆ. ಶ್ರೀಮತಿ ಡಾಕ್ಟರ್ ಸಿಲ್ಲಿ ವಿಮಾ ಅವರು ತಿಳಿಯೋಣವಾಗಲಿ. ಭಾರತೀಯತೆ ಎಂದರೇ ಆಧ್ಯಾತ್ಮ. ಅದು ನಮ್ಮತನ, ಪಾಶ್ಚಾತ್ಯರೇ ಭಾರತದತ್ತ ತಿರುಗಿ ನೋಡುತ್ತಿರುವಾಗ, ವಿಶ್ವ ಆರೋಗ್ಯ ಸಂಸ್ಥೆಯೇ ಭಾರತವನ್ನು ಮುಂದಾಳತ್ವ ವಹಿಸಲು ಬೇಡುತ್ತಿರುವಾಗ ನಮ್ಮದೇ ಜನರ ಮನಸ್ತಿತಿ ಕಂಡು ಮರುಗಬಹುದಷ್ಟೆ.

  2. Problems will not get solved by speech of Prime minister or by this article of this author.there was no need for both these. Don’t waste time publishing these

  3. Thinking our PM is not doing his job & imposing same on other readers is an absolute rubbish article…
    Allowing time to lockdown in our country with such huge population is just doing a massive blunder..
    We have seen how there is a mass flow with all the restrictions.,..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...