Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...