Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...