Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....