Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...