Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...