Homeಮುಖಪುಟಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

ಎಲ್ಲೆಲ್ಲಿ ಸಾಧ್ಯವೋ ಅಲ್ಲೇ ಪ್ರತಿಭಟಿಸಿ, ರೈತ ಚಳುವಳಿ ವಿಕೇಂದ್ರೀಕರಣಗೊಳ್ಳಲಿ- ಹರಿಪ್ರಸಾದ್ ಕೆ.ಆರ್

"ಜನವರಿ 26 ರಂದು 25 ಟ್ರಾಕ್ಟರ್‌ಗಳನ್ನು ನಾವು ನಮ್ಮ ಹಳ್ಳಿಯ ಮಟ್ಟದಲ್ಲೇ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ"

- Advertisement -
- Advertisement -

ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ವ್ಯಾಪಕ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಇದನ್ನು ಮತ್ತಷ್ಟು ಪ್ರಬಲಗೊಳಿಸಲು, ದೇಶ ಮತ್ತು ಸರ್ಕಾರದ ಗಮನ ಸೆಳೆಯಲು ಜನವರಿ 26 ರ ಗಣರಾಜ್ಯೋತ್ಸವದಂದು ರಾಷ್ಟ್ರ ರಾಜಧಾನಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಲಾಗುತ್ತಿದೆ.

ಇದನ್ನು ಬೆಂಬಲಿಸಿ ರಾಜ್ಯದಾದ್ಯಂತ ಇರುವ ರೈತ ಸಂಘಟನೆಗಳು ಜನವರಿ 26 ರಂದು ಬೆಂಗಳೂರಿನಲ್ಲಿಯೂ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ ನಡೆಸಲು ಕರೆ ನೀಡಿವೆ. ಈ ನಿಟ್ಟಿನಲ್ಲಿ ರೈತ ಹೋರಾಟಗಳು ವಿಕೇಂದ್ರೀಕರಣಗೊಳ್ಳಬೇಕು ಎಂದಿರುವ ಕೃಷಿಕರು ಮತ್ತು ಲೇಖಕರಾದ ಹರಿಪ್ರಸಾದ್ ಕೆ.ಆರ್, “ರಾಜ್ಯದಾದ್ಯಂತ ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸಬೇಕು” ಎಂದು ಮನವಿ ಮಾಡಿದ್ದಾರೆ.

ಹರಿಪ್ರಸಾದ್ ಕೆ.ಆರ್ (ಲೇಖಕರು ಮತ್ತು ಕೃಷಿಕರು), ತುಮಕೂರು

ಇದನ್ನೂ ಓದಿ: NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

“ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಕೇಂದ್ರ ಬಿಂದು ಆಗಿರುವುದರಿಂದ, ಟ್ರ್ಯಾಕ್ಟರ್ ರ್‍ಯಾಲಿಯನ್ನು ಡಿಸಿ ಆಫೀಸ್‌ಗೆ ಹತ್ತಿರವಿರುವ ಮುಖ್ಯ ಸ್ಥಳದಿಂದ ಡಿಸಿ ಆಫೀಸ್ ತನಕ ಕೊಂಡೊಯ್ದು ಮನವಿ ಸಲ್ಲಿಸುವುದು ಮುಖ್ಯ ಎಂದು ನನಗನ್ನಿಸುತ್ತದೆ. ಪ್ರತಿ ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿಯೂ ಹೀಗೆ ಮಾಡಬಹುದು. ನಾವು ನಮ್ಮ ಹಳ್ಳಿಯ ಮಟ್ಟದಲ್ಲಿ 25 ಟ್ರಾಕ್ಟರ್‌ಗಳನ್ನು ಇಡೀ ಹಳ್ಳಿಯಲ್ಲಿ ಎರಡು ರೌಂಡ್ ಓಡಿಸುವ ಯೋಚನೆ ಮಾಡಿದ್ದೇವೆ. ಎಲ್ಲರೂ ಇದನ್ನೇ ಮಾಡಬೇಕೆಂದು ಒತ್ತಾಯವೇನಿಲ್ಲ. ಇದಕ್ಕೆ ಹೊಸ ಅಂಶಗಳನ್ನು ಸೇರಿಸಿಕೊಂಡು ಚಳವಳಿ ಕಟ್ಟಬಹುದು. ಒಟ್ಟಾರೆ ದೇಶಾದ್ಯಂತ ರೈತ ಚಳವಳಿಯನ್ನು ಜೀವಂತವಾಗಿಡುವುದು ನಮ್ಮ ಕರ್ತವ್ಯ” ಎಂದು ತುಮಕೂರಿನ ತುರುವೇಕರೆ ತಾಲ್ಲೂಕಿನ ತಂಡಗ ಗ್ರಾಮದ ಹರಿಪ್ರಸಾದ್ ಹೇಳುತ್ತಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರೈತ ಮುಖಂಡರು ಮತ್ತು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ. ಪ್ರಕಾಶ್ ಕಮ್ಮರಡಿ, “ಹೌದು ನಮ್ಮ ಹೋರಾಟವನ್ನು ವಿಕೇಂದ್ರೀಕರಣಗೊಳಿಸುವುದು ಮುಖ್ಯ. ಇದರ ಭಾಗವಾಗಿಯೇ ದೆಹಲಿಗೆ ಹೋಗಲು ಸಾಧ್ಯವಾಗದವರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಂಡಿದ್ದೇವೆ. ಆದರೆ ಹಳ್ಳಿ-ಹಳ್ಳಿಯಲ್ಲೂ ಈ ಹೋರಾಟ ನಡೆಯಬೇಕು ಎನ್ನುವುದನ್ನು ಒಪ್ಪುತ್ತಲೇ, ಇದಕ್ಕಿರುವ ಮಿತಿಯನ್ನು ನಾವು ತಿಳಿದುಕೊಳ್ಳಬೇಕು. ನಮ್ಮ ಹೋರಾಟವು ಸರ್ಕಾರ ಮತ್ತು ಹೆಚ್ಚು-ಹೆಚ್ಚು ಜನರನ್ನು ತಲುಪುವುದು ಮುಖ್ಯ. ಹಾಗಾಗಿ ನಾವು ಮಾಡುವ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಇಂದಿನ ಮಾಧ್ಯಮಗಳು ಹಳ್ಳಿಗಳಲ್ಲಿ ನಡೆಯುವ ಹೋರಾಟವನ್ನು ದಾಖಲಿಸುತ್ತದೆಯೇ ಎನ್ನುವುದನ್ನು ಯೋಚಿಸಬೇಕಾಗಿದೆ. ಹಾಗಾಗಿ ಜಿಲ್ಲಾ, ತಾಲ್ಲೂಕು ಮತ್ತು ಹಳ್ಳಿಗಳ ಮಟ್ಟದಲ್ಲಿ ಹೋರಾಟ ಮಾಡಿದರೆ, ಅದು ಸಾಧ್ಯವಾದಷ್ಟು ಮಟ್ಟಿಗೆ ಸರ್ಕಾರ ಮತ್ತು ರಾಜ್ಯದ ಜನತೆಯನ್ನು ತಲುಪುವಂತೆ ನೋಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ಆಶಯ ವ್ಯರ್ಥವಾಗುತ್ತದೆ. ರೈತರ ಕೂಗಿಗೆ ರಾಜ್ಯದ ಜನತೆ ದನಿಗೂಡಿಸಬೇಕು ಎನ್ನುವುದೇ ನಮ್ಮ ಆಶಯ. ಹಾಗಾಗಿ ಈ ಯೋಚನೆಗೆ ಒಂದು ತಾರ್ಕಿಕ ಅಂತ್ಯ ನೀಡಬೇಕಾಗಿರುವುದು ನಮ್ಮ ಕರ್ತವ್ಯವೂ ಆಗಬೇಕು” ಎಂದು ಹೇಳಿದರು.

ಡಾ. ಪ್ರಕಾಶ್ ಕಮ್ಮರಡಿ

ಭಾರತದ ಇತಿಹಾಸದಲ್ಲಿ ಸ್ಥಾನ ಪಡೆಯಲಿರುವ ಜನವರಿ 26 ರ ಟ್ರ್ಯಾಕ್ಟರ್ ರ್‍ಯಾಲಿ ಯಶಸ್ವಿಯಾಗಬೇಕು ಮತ್ತು ಇದರಿಂದ ರೈತರ ಶಕ್ತಿ ಸರ್ಕಾರಕ್ಕೆ ತಿಳಿಯಬೇಕು. ಈ ಮೂಲಕ ಇನ್ನಷ್ಟು ರೈತರು ಮತ್ತು ಸಾರ್ವಜನಿಕರು ಈ ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳಾಗಿ ಸೇರಿಕೊಳ್ಳಬೇಕು.

ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ರೈತರ ಹೋರಾಟ ಮತ್ತು ಟ್ರ್ಯಾಕ್ಟರ್ ರ್‍ಯಾಲಿಯನ್ನು ತಡೆಯಲು ಸರ್ಕಾರ ಎಲ್ಲಾ ಕುತಂತ್ರಗಳನ್ನೂ ಬಳಸುತ್ತಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಇದನ್ನು ತಡೆಹಿಡಿಯಬೇಕು ಎಂದು ಕೋರಿದೆ. ರೈತ ಹೋರಾಟದಲ್ಲಿ ಭಯೋತ್ಪಾದಕರಿದ್ದಾರೆ ಎಂದು ಎನ್‌ಐಎ ನೋಟಿಸ್ ನೀಡಿದೆ. ಹೋರಾಟದಲ್ಲಿರುವವರು ನಿಜವಾದ ರೈತರಲ್ಲ, ಅವರು ಖಾಲಿಸ್ತಾನಿಗಳು, ನಕ್ಸಲೈಟರು, ಭಯೋತ್ಪಾದಕರು, ದೇಶ ದ್ರೋಹಿಗಳು ಎಂದು ದೇಶದಾದ್ಯಂತ ಹಸಿ ಸುಳ್ಳುಗಳನ್ನು ಹರಡಲಾಗುತ್ತಿದೆ. ಜೊತೆಗೆ ದೈಹಿಕವಾಗಿ ಹಿಂಸಿಸಿ, ಅಶ್ರುವಾಯು, ಜಲಫಿರಂಗಿಗಳನ್ನು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಳಸಲಾಗುತ್ತಿದೆ.

ಆದರೆ ಇಷ್ಟೆಲ್ಲಾ ತೊಂದರೆಗಳನ್ನು ಎದುರಿಸಿ ರೈತರು ಸರ್ಕಾರದ ದರ್ಪಕ್ಕೆ, ಪೊಲೀಸರ ಲಾಟಿಗೆ ಎದೆಗೊಟ್ಟು ನಿಂತು ದಿಟ್ಟ ಉತ್ತರ ನೀಡುತ್ತಿದ್ದಾರೆ. ಹಾಗಾಗಿ ರೈತರ ಬೇಡಿಕೆಗಳನ್ನು ಸರ್ಕಾರ ಆದಷ್ಟು ಬೇಗ ಬಗೆಹರಿಸಬೇಕು ಎನ್ನುವುದು ಎಲ್ಲರ ಒಕ್ಕೊರಲ ದನಿಯಾಗಬೇಕು.


ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...